ಕೈಗೊಂಬೆ ಸಿಎಂನಿಂದ ಅಧೋಗತಿಗೆ ರಾಜ್ಯ; ನೂತನ ಮುಖ್ಯಮಂತ್ರಿ ಬೊಮ್ಮಾಯಿ ಕುಟುಕಿದ ಕಾಂಗ್ರೆಸ್

Published : Jul 27, 2021, 10:22 PM IST
ಕೈಗೊಂಬೆ ಸಿಎಂನಿಂದ ಅಧೋಗತಿಗೆ ರಾಜ್ಯ; ನೂತನ ಮುಖ್ಯಮಂತ್ರಿ ಬೊಮ್ಮಾಯಿ ಕುಟುಕಿದ ಕಾಂಗ್ರೆಸ್

ಸಾರಾಂಶ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ ಬೊಮ್ಮಾಯಿ ಕಳಪೆ, ಕೈಕೊಂಬೆ ಸಿಎಂ ಎಂದ ಕರ್ನಾಟಕ ಕಾಂಗ್ರೆಸ್ ರಾಜ್ಯದ ಭವಿಷ್ಯ ಊಹಿಸಲು ಸಾಧ್ಯ ಎಂದು ಕಾಂಗ್ರೆಸ್ ಟೀಕೆ

ಬೆಂಗಳೂರು(ಜು.27): ಕರ್ನಾಟಕದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಯ್ಕೆಗೆ ಬಿಜೆಪಿ ನಾಯಕರು ಸೇರಿದಂತೆ ಕರ್ನಾಟಕ ಅಭಿನಂದೆ ಸಲ್ಲಿಸುತ್ತಿದೆ. ಸಾಮಾಜಿಕ ಜಾಲತಾಣಗಳಲ್ಲಿ ಬಸವರಾಜ ಬೊಮ್ಮಾಯಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದೆ. ಆದರೆ ಕರ್ನಾಟಕ ಕಾಂಗ್ರೆಸ್ ಬಸವರಾಜ ಬೊಮ್ಮಾಯಿ ಹಾಗೂ ಬಿಜೆಪಿಯನ್ನು ಕುಟುಕಿದೆ.

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬಸವರಾಜ ಬೊಮ್ಮಾಯಿ ವಿಫಲ ಗೃಹಮಂತ್ರಿಯಾಗಿದ್ದರು, ಅವರನ್ನೇ ಮುಖ್ಯಮಂತ್ರಿ ಮಾಡಲಾಗಿದೆ. ಕೈಗೊಂಬೆ ಮುಖ್ಯಮಂತ್ರಿಯಿಂದ  ರಾಜ್ಯ ಅಧೋಗತಿಗೆ ಇಳಿಯಲಿದೆ ಎಂದು ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದೆ. 

 

ಇನ್ನು ದಲಿತರನ್ನು ಸಿಎಂ ಇಚ್ಚಾಶಕ್ತಿಯನ್ನು ಬಿಜೆಪಿ ಯಾಕೆ ತೋರಿಸಿಲ್ಲ. ಕನಿಷ್ಠ ಸಿಎಂ ಹುದ್ದೆ ರೇಸ್‌ನಲ್ಲಿ ದಲಿತ ನಾಯಕರ ಹೆಸರು ಕೇಳಲಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ತಿರುಗೇಟು ನೀಡಿದೆ.

 

ನೂತನ ಸಿಎಂ ಆಗಿ ಬೊಮ್ಮಾಯಿ ಆಯ್ಕೆ; ತಂದೆ ಬಳಿಕ ಮಗ ಮುಖ್ಯಮಂತ್ರಿಯಾದ ಕರ್ನಾಟಕದ 2ನೇ ಜೋಡಿ!

ಬಿಎಸ್ ಯಡಿಯೂರಪ್ಪ ರಾಜೀನಾಮೆ ಬೆನ್ನಲ್ಲೇ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದರು. ಭ್ರಷ್ಟ ಸಿಎಂ ರಾಜೀನಾಮೆ ನೀಡಿದರೆ ಬಿಜೆಪಿ ಮತ್ತೊಬ್ಬ ಭ್ರಷ್ಟ ಸಿಎಂಗೆ ಮಣೆ ಹಾಕಲಿದೆ. ಇದರಿಂದ ಬಿಜೆಪಿ ಸರ್ಕಾರ ತೊಲಗುವುದು ಒಳ್ಳೆಯದು ಎಂದು ಸಿದ್ದರಾಮಯ್ಯ ಹೇಳಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಒಂದೇ ಕಾರಲ್ಲಿ ಪ್ರಯಾಣಿಸಿದ ಖರ್ಗೆ, ಡಿಕೆಶಿ: ತೀವ್ರ ರಾಜಕೀಯ ಕುತೂಹಲ
Karnataka News Live: BBK 12 - ಕಿಚ್ಚ ಸುದೀಪ್‌ ಮುಂದೆ ರೇಷ್ಮೆ ಶಾಲಿನಲ್ಲಿ ಹೊಡೆದಂತೆ ಸತ್ಯದರ್ಶನ ಮಾಡಿಸಿದ ಗಿಲ್ಲಿ ನಟ