
ಮಸ್ಕಿ (ಮಾ.30) : ಕಾಂಗ್ರೆಸ್ ಉಪಚುನಾವಣೆಯಲ್ಲಿ ಸೋಲುವ ಭೀತಿಯಿಂದ ಪ್ರಚಾರದ ಸಂದರ್ಭದಲ್ಲಿ ಗಲಾಟೆ, ಗದ್ದಲ ಎಬ್ಬಿಸುವ ಕೆಲಸ ಮಾಡುತ್ತಿದೆ. ಇದಕ್ಕೆ ಬಿಜೆಪಿ ಕಾರ್ಯಕರ್ತರು ಎದೆಗುಂದಬಾರದು ಎಂದು ಸಚಿವ ಬಿ. ಶ್ರೀರಾಮುಲು ಹೇಳಿದರು.
ಪಟ್ಟಣದ ಬಸವೇಶ್ವರ ನಗರದ ಬಿಜೆಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಇದಕ್ಕೂ ಮೊದಲು ಸುದ್ದಿಗಾರರ ಜತೆಗೆ ಮಾತನಾಡಿ ‘ಕಾಂಗ್ರೆಸ್ಗೆ ಯಾವುದೇ ಭವಿಷ್ಯ ಇಲ್ಲ. ಅದೊಂದು ಮುಳುಗುವ ಹಡಗು, ಇಂಥ ಪಕ್ಷದಿಂದ ದೇಶದ ಹಾಗೂ ರಾಜ್ಯದ ಅಭಿವೃದ್ಧಿ ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.
ಮಂತ್ರಿಗಳಿಗೆ ತವರು ಜಿಲ್ಲೆ ಹೊಣೆ ಇಲ್ಲ: 2 ದಿನದಲ್ಲಿ ಎಲ್ಲ ಸಚಿವರ ಜಿಲ್ಲಾ ಉಸ್ತುವಾರಿ ಬದಲು? ...
ಕರ್ನಾಟಕದಲ್ಲೂ ಕಾಂಗ್ರೆಸ್ ಮೌಲ್ಯಗಳನ್ನು ಕಳೆದುಕೊಂಡಿದೆ. ಮುಳುಗುತ್ತಿರುವ ಟೈಟಾನಿಕ್ ಹಡಗಿನಂತಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಆ ಹಡಗಿನ ಕ್ಯಾಪ್ಟನ್ ಎಂದು ವ್ಯಂಗ್ಯವಾಡಿದರು.
ಭ್ರಷ್ಟಾಚಾರದಲ್ಲಿ ಮುಳಗಿರುವ ಕಾಂಗ್ರೆಸ್ ಅನ್ನು ರಾಜ್ಯದಲ್ಲಿ ಬೇರುಸಮೇತ ಕಿತ್ತುಹಾಕಲಾಗುವುದು. ಅಭಿವೃದ್ಧಿ ಉದ್ದೇಶದಿಂದ ಪ್ರಧಾನಿ ಮೋದಿ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಈ ಚುನಾವಣೆ ನಡೆಯುತ್ತಿವೆ ಎಂದು ಹೇಳಿದರು.
ಸಿ.ಡಿ. ಪ್ರಕರಣವು ಉಪ ಚುನಾವಣೆ ಮೇಲೆ ಯಾವುದೇ ರೀತಿಯ ಪ್ರಭಾವ ಬೀರುವುದಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಬಿ.ಶ್ರೀರಾಮುಲು ತಿಳಿಸಿದರು. ಸೋಮವಾರ ಸುದ್ದಿಗಾರರ ಜತೆಗೆ ಮಾತನಾಡಿ, ಸಿ.ಡಿ. ಪ್ರಕರಣವು ತನಿಖೆಯ ಹಂತದಲ್ಲಿದೆ. ಈ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ. ನಾವು ಅಭಿವೃದ್ಧಿಗಾಗಿ ಮತ ಕೇಳುತ್ತಿದ್ದೇವೆ. ಆದರೆ, ಕಾಂಗ್ರೆಸ್ ಪಕ್ಷದವರು ಮುಖ್ಯಮಂತ್ರಿಯಾಗಬೇಕು ಎಂಬ ಆಸೆಯಿಂದ ಮತ ಕೇಳುತ್ತಿದ್ದಾರೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.