ಕಗ್ಗಂಟಾಗಿದ್ದ ಯಶವಂತಪುರ ಉಪಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಫೈನಲ್

Published : Nov 17, 2019, 08:00 PM IST
ಕಗ್ಗಂಟಾಗಿದ್ದ ಯಶವಂತಪುರ ಉಪಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿ ಫೈನಲ್

ಸಾರಾಂಶ

ತೀವ್ರ ಗೊಂದಲವಾಗಿದ್ದ ಬೆಂಗಳೂರಿನ  ಯಶವಂತಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಕೊನೆಗೂ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದೆ. ರಾಜಕುಮಾರ್  ಸ್ಪರ್ಧಿಸಲು ಹಿಂದೇಟು ಹಾಕಿದ್ದರಿಂದ ಕೊನೆಗಳಿಯಲ್ಲಿ ಅಚ್ಚರಿ ಅಭ್ಯರ್ಥಿಗೆ ಮಣೆಹಾಕಿದೆ. 

ಬೆಂಗಳೂರು(ನ.17): ಕಗ್ಗಂಟಾಗಿದ್ದ ಯಶವಂತಪುರ ಉಪಚುನಾವಣೆ ಅಭ್ಯರ್ಥಿಯನ್ನು ಕಾಂಗ್ರೆಸ್ ಅಂತಿಮಗೊಳಿಸಿದ್ದು, ಪಿ. ನಾಗರಾಜ್​ ಎಂಬುವರನ್ನು ಕಣಕ್ಕಿಳಿಸಿದೆ. 

ಯಶವಂತಪುರ  ವಿಧಾನಸಭಾ ಕ್ಷೇತ್ರ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಪಿ.ನಾಗರಾಜ್ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು [ಭಾನುವಾರ] ಆದೇಶ ಹೊರಡಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ 15 ಕ್ಷೇತ್ರಗಳಿಗೂ ಅಭ್ಯರ್ಥಿಗಳು ಫೈನಲ್ ಆಗಿದೆ.

ಡಿಕೆಶಿ ನೇತೃತ್ವದ ಸಭೆ ಅಂತ್ಯ: ಯಶವಂತಪುರ ಕ್ಷೇತ್ರಕ್ಕೆ ಅಚ್ಚರಿ ಹೆಸರು

ಆರಂಭದಲ್ಲಿ ರಾಜಕುಮಾರ್​​ ಎನ್ನುವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಿರ್ಧರಿಸಿತ್ತು. ಆದ್ರೆ, ರಾಜಕುಮಾರ್ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕಿದ್ದರಿಂದ ಕೊನೆಗಳಿಯಲ್ಲಿ  ನಾಗರಾಜ್ ಪಾಳ್ಯ ಅವರನ್ನು ಅಂತಿಮಗೊಳಿಸಲಾಗಿದೆ.

15 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿ ಯಶವಂತಪುರ ಅಭ್ಯರ್ಥಿಯನ್ನು ಮಾತ್ರ ಬಾಕಿ ಉಳಿಸಿಕೊಂಡಿತ್ತು. ಈಗ ಅಳೆದು ತೂಗಿ ವಿಜಯನಗರ ಕಾಂಗ್ರೆಸ್ ಶಾಸಕ ಎಂ.ಕೃಷ್ಣಪ್ಪ ಅವರ ಬೆಂಬಲಿಗ ನಾಗರಾಜ್ ಅವರಿಗೆ ಟಿಕೆಟ್ ನೀಡಲಾಗಿದೆ.​

ಆರಂಭದಲ್ಲಿ ಯಾರನ್ನು ಕಣಕ್ಕಿಸಬೇಕೆಂದು ಕಾಂಗ್ರೆಸ್ ಗೆ ದೊಡ್ಡ ತಲೆನೋವಾಗಿತ್ತು. ಯಶವಂತಪುರದಲ್ಲಿ ಒಕ್ಕಲಿಗ ಮತಗಳ ಅಧಿಕವಾಗಿದ್ದರಿಂದ ಅದೇ ಸಮುದಾಯದ ಪ್ರಿಯಾಕೃಷ್ಣ ಅವರನ್ನು ಅಖಾಡಕ್ಕಿಳಿಸಲು ಡಿಕೆ ಶಿವಕುಮಾರ್ ಸೇರಿದಂತೆ ಹಲವು ನಾಯಕರ ಆಸೆಯಾಗಿತ್ತು.

ಆದ್ರೆ, ಪ್ರಿಯಾಕೃಷ್ಣ ಸ್ಪರ್ಧೆಗೆ ತಂದೆ ಎಂ.ಕೃಷ್ಣಪ್ಪ ರೆಡ್ ಸಿಗ್ನಲ್ ತೋರಿದ್ದರು. ಈ ಹಿನ್ನೆಲೆಯಲ್ಲಿ ಯಶವಂತಪುರ ಅಭ್ಯರ್ಥಿ ಆಯ್ಕೆ  ಕಾಂಗ್ರೆಸ್ ಗೆ ಮತ್ತಷ್ಟು ಕಗ್ಗಂಟಾಗಿತ್ತು. 

ಇನ್ನು ಬಿಜೆಪಿಯಿಂದ ಕಾಂಗ್ರೆಸ್ ನಿಂದ ಅನರ್ಹಗೊಂಡಿರುವ ಶಾಸಕ ಎಸ್.ಟಿ.ಸೋಮಶೇಖರ್ ಅವರು ಸ್ಪರ್ಧೆಯಲ್ಲಿದ್ರೆ, ಜೆಡಿಎಸ್ ನಿಂದ ಜವಾರಾಯಿಗೌಡ ಅಖಾಡದಲ್ಲಿದ್ದಾರೆ.

ನಾಮಪತ್ರ ಸಲ್ಲಿಸಲು ನ.18ರಂದು ಕಡೆಯ ದಿನ. 19ರಂದು ನಾಮಪತ್ರ ಪರಿಶೀಲನೆ ನಡೆಯಲಿದ್ದು, ನ.21 ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ಡಿ.5ಕ್ಕೆ ಮತದಾನ ನಡೆಯಲಿದ್ದು, ಡಿ.9ರಂದು ಮತ ಎಣಿಕೆ ನಡೆಯಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಿಜೆಪಿ ಬುರುಡೆ ಗ್ಯಾಂಗಿಂದ ಗ್ಯಾರಂಟಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ
ಕಾಂಗ್ರೆಸ್ ಒಳಜಗಳಕ್ಕೆ ಪ್ರತಿಪಕ್ಷ ಕಿಡಿ.. ನಾಯಕತ್ವವಿಲ್ಲದೆ ರಾಜ್ಯದ ಅಭಿವೃದ್ಧಿ ಅಸಾಧ್ಯ: ಆರ್.ಅಶೋಕ್‌