ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಛಲವಾದಿ ನಾರಾಯಣಸ್ವಾಮಿ

Published : Sep 19, 2024, 05:09 PM IST
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ: ಛಲವಾದಿ ನಾರಾಯಣಸ್ವಾಮಿ

ಸಾರಾಂಶ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಆರೋಪಿಸಿದರು. 

ಮುದಗಲ್ (ಸೆ.19): ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಚಲುವಾದಿ ನಾರಾಯಣಸ್ವಾಮಿ ಆರೋಪಿಸಿದರು. ಪಟ್ಟಣದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಹಿಡಿದು ಎಲ್ಲ ಸಚಿವರು ಭ್ರಷ್ಟಾಚಾರದಲ್ಲಿ ಮುಳುಗಿದ್ದಾರೆ. ಅಭಿವೃದ್ಧಿಗೆ ಸರ್ಕಾರ ಗಮನ ಹರಿಸದೇ ಭ್ರಷ್ಠಾಚಾರ, ದಲಿತರ ಮೇಲೆ ಹಲ್ಲೆ, ರೈತರ ಆತ್ಮಹತ್ಯೆ, ದಲಿತರ ಕೊಲೆ ಪ್ರಕರಣ ನಿರಂತರ ನಡೆಯುತ್ತಿವೆ. ತಮ್ಮ ಮೇಲಿನ ಭ್ರಷ್ಟಾಚಾರ ಮುಚ್ಚಿಕೊಳ್ಳಲು ದಿನಕ್ಕೊಂದು ನಾಟಕೀಯ ಬೆಳವಣಿಗೆ ಸೃಷ್ಟಿಸಿ ವಿರೋಧ ಪಕ್ಷದವರ ಮೇಲೆ ಗಾಳಿಯಲ್ಲಿ ಗುಂಡು ಹಾರಿಸಲು ಮುಂದಾಗಿದ್ದಾರೆ ಎಂದರು.

ಜವಾಬ್ಧಾರಿಯುತ ವಿರೋಧಪಕ್ಷವಾದ ನಾವುಗಳು ಸರ್ಕಾರದ ಜನ ವಿರೋಧಿ ನೀತಿ ವಿರೋಧಿಸುತ್ತ ಹೋರಾಟಕ್ಕೆ ಬೀದಿಗಿಳಿದಿದ್ದೇವೆ. ಕಲಬುರಗಿಯಲ್ಲಿ ಸಚಿವ ಸಂಪುಟ ನಡೆಸಿ 11 ಸಾವಿರ ಕೋಟಿ ಅಭಿವೃದ್ಧಿಗೆ ಅನುದಾನ ನೀಡುತ್ತೇವೆ ಎನ್ನುವ ತೀರ್ಮಾನ ಜನತೆಯ ಮೂಗಿಗೆ ತುಪ್ಪ ಸವರುವ ಕಾರ್ಯ ನಿರ್ವಹಿಸಿದ್ದಾರೆ ಎಂದು ಲೇವಡಿ ಮಾಡಿದರು. ಸರ್ಕಾರ ಬಿಜೆಪಿ ಶಾಸಕರನ್ನು ಟಾರ್ಗೆಟ್ ಮಾಡಿ ಬಂಧನ ಮಾಡುತ್ತಿದೆ. ಯಾವದೇ ಪ್ರಕರಣದಲ್ಲಿ ಸರ್ಕಾರ ನಿಜಾಂಶ ತಿಳಿಯದೇ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಿರುವುದೇ ದ್ವೇಷ ರಾಜಕಾರಣ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದರು.

ಜೆಡಿಎಸ್‌ ಸಕಲೇಶಪುರ ಕ್ಷೇತ್ರ ಕಳೆದುಕೊಳ್ಳಲು ನಾನೇ ಕಾರಣ: ಶಾಸಕ ಎಚ್.ಡಿ.ರೇವಣ್ಣ

ಆದರೆ, ಯಾದಗಿರಿ ಶಾಸಕರ ಮೇಲೆ ಪಿಎಸ್ಐ ಸಾವಿನ ಪ್ರಕರಣದ ಎಫ್ಐಆರ್ ದಾಖಲಾಗಿದ್ದರೂ ಅವರನ್ನು ಸಿಎಂ ಸಿದ್ಧರಾಮಯ್ಯ ಅವರೇ ರಕ್ಷಣೆ ನೀಡಿ ಇಲ್ಲಿಯವರೆಗೆ ಶಾಸಕ ಚೆನ್ನಾರಡ್ಡಿ, ಅವರ ಸುಪುತ್ರನನ್ನು ಬಂಧಿಸದೇ ಇರುವದು ಸರ್ಕಾರದ ತಾರತಮ್ಯವಲ್ಲದೇ ಇನ್ನೇನು ಎಂದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕಾಗಿ ಮೀಸಲಾತಿಯ ನೆಪದಲ್ಲಿ ದಲಿತರನ್ನು ದುರ್ಬಳಕೆ ಮಾಡಿಕೊಳ್ಳುತ್ತಾ ಬಂದಿದ್ದು, ಪ್ರಧಾನಿಗಳಾದ ನೆಹರೂ, ಇಂದಿರಾಗಾಂಧಿ ಮತ್ತು ರಾಜೀವ ಗಾಂಧಿ ಇವರೆಲ್ಲರೂ ಮೀಸಲಾತಿ ವಿರೋಧಿಗಳಾಗಿದ್ದಾರೆ ಎಂದು ದೂರಿದರು. ಈ ವೇಳೆ ಪಕ್ಷದ ಮುಖಂಡರಾದ ಆರ್.ರುದ್ರಯ್ಯ, ವೀರನಗೌಡ ಲೆಕ್ಕಿಹಾಳ, ಹುಲ್ಲೆಶ ಸಾಹುಕಾರ, ಕರಿಯಪ್ಪ ಯಾದವ ಸೇರಿ ಅನೇಕರಿದ್ದರು.

ಸಂಪುಟ ಸಭೆ ಹೆಸರಲ್ಲಿ ಟೂರ್‌ ಬೇಡ: ಸಚಿವ ಸಂಪುಟ ಸಭೆ ಹೆಸರಲ್ಲಿ ಮಂತ್ರಿಗಳು ಇಲ್ಲಿಗೆ ಟೂರಿಸ್ಟ್ ಬಂದ ಹಾಗೆ ಬಂದು ಹೋದರೆ ಪ್ರಯೋಜನವಿಲ್ಲ. ಕಲ್ಯಾಣ ಕರ್ನಾಟಕವನ್ನ ಕಲ್ಯಾಣ ಮಾಡಬೇಕೆ ಹೊರತು ಖಬರಸ್ತಾನ್‌ ಮಾಡೋದಲ್ಲ ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ ಅನ್ನೋದೆ ಒಂದು ನಾಟಕದ ಕಂಪನಿ, ಎರಡು ತಾಸಿನ ನಾಟಕ ಮಾಡೋದಕ್ಕೆ‌ ಕಾಂಗ್ರೆಸ್ ಕಲಬುರಗಿಗೆ ಬರುತ್ತಿದೆ ಎಂದರು.

ಕೃಷಿ ಉತ್ಪಾದನೆ ಹೆಚ್ಚಳಕ್ಕೆ ಆ್ಯಪ್ ನೆರವು: ಸಚಿವ ಚಲುವರಾಯಸ್ವಾಮಿ

ಇಲ್ಲಿರುವ ರಸ್ತೆ ಗುಂಡಿಗಳನ್ನ ಮುಚ್ಚೋದಕ್ಕೆ ಇವರಿಂದ ಆಗ್ತಿಲ್ಲ. ಇನ್ನು ಅಭಿವೃದ್ಧಿ ಏನ್ ಮಾಡ್ತಾರೆ. ವಿಮಾನ ನಿಲ್ದಾಣ ರಸ್ತೆ ಸೇರಿ ಕೆಲವೊಂದು ರಸ್ತೆ ಮಾತ್ರ ಗುಂಡಿ ಮಚ್ಚಿ ಕಸ ಹೊಡೆಯೋದಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು. ಮುನಿರತ್ನ ಮೇಲೆ ಕೇಸ್ ದಾಖಲಾದ ಕೆಲವೇ ಗಂಟೆಗಳಲ್ಲಿ ಅರೆಸ್ಟ್ ಮಾಡಿದ್ದಾರೆ. ಆದರೆ, ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಮೇಲೆ ಎಫ್ಐಆರ್, ಅಟ್ರಾಸಿಟಿ ಕೇಸ್ ಆಗಿದ್ದರೂ ಅವರನ್ನ ಟಚ್ ಮಾಡಿಲ್ಲ ಎಂದು ದೂರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ