
ಶಹಾಪುರ(ಜೂ.24): ಗ್ಯಾರಂಟಿ, ವಾರಂಟಿ ಇಲ್ಲದ ಕಾಂಗ್ರೆಸ್ ಸರ್ಕಾರ ಒಂದು ವರ್ಷದೊಳಗೆ ಪತನವಾಗಲಿದೆ ಎಂದು ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಭವಿಷ್ಯ ನುಡಿದರು.
ನಗರದ ಮೋಟಗಿ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಸರಕಾರ ಚುನಾವಣೆಗೂ ಮುನ್ನ ನೀಡಿದ್ದ ಗ್ಯಾರಂಟಿ ಯೋಜನೆ ನೀಡುವಲ್ಲಿ ವಿಫಲವಾಗುತ್ತದೆ. ಇನ್ನು ಸ್ವಲ್ಪ ದಿನದಲ್ಲಿ ಕಾಂಗ್ರೆಸ್ನವರಿಗೆ ತಮ್ಮ ಮೇಲೆ ತಮಗೆ ನಂಬಿಕೆ ಇಲ್ಲದಂತಾಗುತ್ತದೆ. ಕಾಂಗ್ರೆಸ್ ಎಂಎಲ್ಎಗಳಿಗೆ ಬೇಜಾರ್ ಆಗಿ ಸಾಕಪ್ಪ ಈ ಸರ್ಕಾರ ಬೇಡ ಎನ್ನುವಂತಾಗಿದೆ. ಯಾರಾದರೂ ಸರ್ಕಾರ ಮಾಡ್ರಿ ನಿಮ್ಮ ಜೊತೆ ಬರುತ್ತೇವೆ ಎನ್ನುವ ವಾತಾವರಣ ನಿರ್ಮಾಣವಾದರೂ ಅಚ್ಚರಿ ಪಡುವಂತಿಲ್ಲ ಎಂದರು.
ಆಧಾರ್ - ಗೃಹಜ್ಯೋತಿ ಸಮಸ್ಯೆಗೆ ಜನ ಹೈರಾಣ..!
ಒಂದು ವರ್ಷದಲ್ಲಿದೊಳಗೆ ಪಾರ್ಲಿಮೆಂಟ್ ಚುನಾವಣೆ ನಡೆಯುವುದಕ್ಕಿಂತ ಮುಂಚೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗೋದು ಗ್ಯಾರಂಟಿ. ಸದ್ಯ ಚುನಾವಣೆ ನಡೆದರೂ ಈಗ ಬಂದ 130 ಸೀಟ್ ಬದಲಾಗಿ 60 ಸೀಟ್ ಬರಲು ಕಠಿಣವಾಗಿದೆ ಎಂದ ಅವರು, ಚುನಾವಣೆ ತಂತ್ರಗಾರಿಕೆಯಿಂದ ಗೆದ್ದು ಬಂದಿಲ್ಲ. ಕುತಂತ್ರದಿಂದ ಗೆದ್ದು ಬಂದಿದ್ದಾರೆ. ಕುತಂತ್ರದಿಂದ ಬಂದ ಸರ್ಕಾರಕ್ಕೆ ಎಲ್ಲಿಯಾದರೂ ಭವಿಷ್ಯ ಉಂಟೆ ಎಂದು ಅವರು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.