ಅಂಬೇಡ್ಕರ್ ಬಗ್ಗೆ ಮಾತಾಡಲು ಕಾಂಗ್ರೆಸ್‌ಗೆ ಮುಖವಿಲ್ಲ: ಪ್ರತಾಪ್ ಸಿಂಹ ಟೀಕೆ

Published : Dec 22, 2024, 11:23 PM IST
ಅಂಬೇಡ್ಕರ್ ಬಗ್ಗೆ ಮಾತಾಡಲು ಕಾಂಗ್ರೆಸ್‌ಗೆ ಮುಖವಿಲ್ಲ: ಪ್ರತಾಪ್ ಸಿಂಹ ಟೀಕೆ

ಸಾರಾಂಶ

ಅಂಬೇಡ್ಕರ್ ಬಗ್ಗೆ ಮಾತಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕು ಇಲ್ಲ, ಮುಖವೂ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಿಸಿದರು. ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹೋರಾಟ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರು ಯಾವ ಮುಖ ಇಟ್ಟುಕೊಂಡು ಅಂಬೇಡ್ಕರ್ ಬಗ್ಗೆ ಮಾತಾಡುತ್ತಾರೆ.   

ಮೈಸೂರು (ಡಿ.22): ಅಂಬೇಡ್ಕರ್ ಬಗ್ಗೆ ಮಾತಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕು ಇಲ್ಲ, ಮುಖವೂ ಇಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಟೀಕಿಸಿದರು. ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಹೋರಾಟ ವಿಚಾರಕ್ಕೆ ನಗರದಲ್ಲಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ನವರು ಯಾವ ಮುಖ ಇಟ್ಟುಕೊಂಡು ಅಂಬೇಡ್ಕರ್ ಬಗ್ಗೆ ಮಾತಾಡುತ್ತಾರೆ. ಅಂಬೇಡ್ಕರ್ ಗೆ ಅವಮಾನ ಮಾಡಿ ಮನಸ್ಸಿಗೆ ನೋವು ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಗೆ ಭಾರತರತ್ನವನ್ನು ಕಾಂಗ್ರೆಸ್ ನವರು ಕೊಟ್ಟರಾ? ಕೊಟ್ಟಿದ್ದು ಬಿಜೆಪಿ ಬೆಂಬಲಿತ ಸರ್ಕಾರ ಎಂದರು.

ಪಾರ್ಲಿಮೆಂಟ್ ನಲ್ಲಿ ಅಂಬೇಡ್ಕರ್ ಫೋಟೋ ಹಾಕಿದ್ದು ಬಿಜೆಪಿ. ಅಂಬೇಡ್ಕರ್ ಬರೆದ ಸಂವಿಧಾನವನ್ನೇ ಅಮಾನತ್ತಿನಲ್ಲಿಟ್ಟಿದ್ದು ಕಾಂಗ್ರೆಸ್. ಅಭಿವೃದ್ಧಿ ವಿಚಾರದಲ್ಲಿ ಮೋದಿಯನ್ನು ಸೋಲಿಸಲು ಆಗಲ್ಲ ಎಂದು ಗೊತ್ತಾಗಿ ಕಾಂಗ್ರೆಸ್ ದಲಿತರ ಕಾರ್ಡ್ ಫ್ಲೇ ಮಾಡ್ತಿದೆ. ಬಿಜೆಪಿಯಿಂದ ದಲಿತರನ್ನು ದೂರ ಮಾಡಲು ಕಾಂಗ್ರೆಸ್ ಯತ್ನಿಸಿದೆ. ಭಗವದ್ಗೀತೆ, ಕುರಾನ್, ಬೈಬಲ್ ಮನೆಯಲ್ಲಿ, ಸಮಾಜದಲ್ಲಿ ಸಂವಿಧಾನವೇ ನಮಗೆ ರಕ್ಷಣೆ ಎಂದು ಅವರು ಹೇಳಿದರು. ಗಾಂಧಿಗಿಂತ ದೊಡ್ಡ ಚಿಂತನೆ ಕೊಟ್ಟವರು ಅಂಬೇಡ್ಕರ್. ದೂರದೃಷ್ಟಿ ನಾಯಕ ಅಂಬೇಡ್ಕರ್ ಗೆ ಕಾಂಗ್ರೆಸ್ ಕೊಟ್ಟ ಗೌರವ ಏನೂ ಎಂಬುದು ಜನರಿಗೆ ಗೊತ್ತಿದೆ. ಅಂಬೇಡ್ಕರ್ ಬಗ್ಗೆ ಮಾತಾಡಲು ಕಾಂಗ್ರೆಸ್ ಗೆ ಮುಖ ಇಲ್ಲ. ಅಂಬೇಡ್ಕರ್ ಬಗ್ಗೆ ಮಾತಾಡುವಾಗ ಕಾಂಗ್ರೆಸ್ ನವರು ಬುರ್ಖಾ ಹಾಕಿಕೊಂಡು ಇರಲಿ. ದಯವಿಟ್ಟು ಮಾತಾಡಲು ಹೋಗಬೇಡಿ ಎಂದು ಅವರು ವಾಗ್ದಾಳಿ ನಡೆಸಿದರು.

ಸದನದಲ್ಲಿ ಪೊಲೀಸರು ಹೇಗೆ ಬಂದರು?: ಸಿ.ಟಿ. ರವಿ ಬಂಧನ, ಬಿಡುಗಡೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹುಣಸೂರು ಹನುಮ ಜಯಂತಿ ವೇಳೆಯೂ ನನಗೂ ಇದೇ ರೀತಿ ಅನುಭವ ಆಗಿತ್ತು. ಮಾತಿನ ಭರಾಟೆಯಲ್ಲಿ ಜನಪ್ರತಿನಿಧಿಗಳು ಬಹಳಷ್ಟು ಬಾರಿ ಸಭ್ಯತೆ ಎಲ್ಲೆ ಮೀರಿದ್ದಾರೆ. ಸದನ ಸಭಾಧ್ಯಕ್ಷರ ಸುರ್ಪದಿಯಲ್ಲಿ ಇರುತ್ತೆ. ಅಲ್ಲಿಗೆ ಪೊಲೀಸರು ಹೇಗೆ ಬಂದರು ಎಂದು ಪ್ರಶ್ನಿಸಿದರು. ವಿಧಾನಸೌಧದಲ್ಲಿ ಕಾಂಗ್ರೆಸ್ ನವರು ಪಾಕಿಸ್ತಾನ್ ಜಿಂದಾಬಾದ್ ಎಂದಾಗ ಇದೇ ಲಕ್ಷ್ಮಿ ಹೆಬ್ಳಾಕರ್ ಅದು ಪಾಕಿಸ್ತಾನ್ ಜಿಂದಾಬಾದ್ ಅಲ್ಲ. ನಜೀರ್ ಸಾಬ್ ಜಿಂದಾಬಾದ್ ಎಂದು ಘೋಷಿಸಿದ್ದರು. ಅದರ ತಜ್ಞ ವರದಿ ಬಂದ ಮೇಲೆ ಲಕ್ಷ್ಮೀ ಹೆಬ್ಳಾಕರ್ ಸುಮ್ಮನೆ ಆಗಲಿಲ್ವಾ? ಪೊಲೀಸರನ್ನೂ ಛೂ ಬಿಟ್ಟು ಈ ಕೆಲಸ ಮಾಡಿಸಲಾಗಿದೆ. ಈ ವಿಚಾರದಲ್ಲೂ ಫೋರೆನ್ಸಿಕ್ ರೀಪೋರ್ಟ್ ಬರಲಿ. ಯಾರದು ತಪ್ಪು ಎಂಬುದು ಗೊತ್ತಾಗಲಿ. ನಂತರ ಸೂಕ್ತ ಕ್ರಮ ಆಗಲಿ ಎಂದರು. 

ನಾನು ಪೂರ್ಣ ಚೇತರಿಸಿಕೊಂಡಿದ್ದೇನೆ... 9 ತಿಂಗಳ ನಂತರ ಚಿಕ್ಕಬಳ್ಳಾಪುರ ಈಶಾ ಕೇಂದ್ರಕ್ಕೆ ಸದ್ಗುರು!

‘ರಾಜ್ಯದಲ್ಲಿ ಗೂಂಡಾ ರಾಜ್ಯ ಬಂದಿದೆ ಅಥವಾ ಬರುವ ಸೂಚನೆ ಇದೆ. ರಾಜ್ಯದಲ್ಲಿ ತಾಲಿಬಾನಿ ಸರ್ಕಾರ ಬಂದಿದೆ. ಇದು ಅದರ ಲಕ್ಷಣ. ಉತ್ತರಪ್ರದೇಶ, ಬಿಹಾರ ಬದಲಾಗಿವೆ. ನಾವು ಈಗ ಅವರ ರೀತಿ ಆಗಿದ್ದೇವೆ. ತಮಿಳುನಾಡಿನಲ್ಲಿ ಜಯಲಲಿತಾ, ಕರುಣಾನಿಧಿ ನಡುವೆ ನಡೆದ ರೀತಿ ಇಲ್ಲಿ ನಡೆದರೆ ರಾಜ್ಯಕ್ಕೆ ಗೌರವ ಬರುತ್ತಾ?’
- ಪ್ರತಾಪ್ ಸಿಂಹ, ಮಾಜಿ ಸಂಸದ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌