ರಾಹುಲ್ ಜತೆ ಸಭೆ ಅಂತ್ಯ: ಕಾಂಗ್ರೆಸ್‌ನ 8 ಶಾಸಕರಿಗೆ ಸಚಿವಗಿರಿ

Published : Dec 21, 2018, 09:08 PM ISTUpdated : Dec 21, 2018, 10:11 PM IST
ರಾಹುಲ್ ಜತೆ ಸಭೆ ಅಂತ್ಯ: ಕಾಂಗ್ರೆಸ್‌ನ 8 ಶಾಸಕರಿಗೆ ಸಚಿವಗಿರಿ

ಸಾರಾಂಶ

ಸಂಪುಟ ವಿಸ್ತರಣೆ ಸರ್ಕಸ್ ಸಂಬಂಧ ಇಂದು [ಶುಕ್ರವಾರ] ದೆಹಲಿಯ ರಾಹುಲ್ ನಿವಾಸದಲ್ಲಿ  ರಾಜ್ಯ ಕಾಂಗ್ರೆಸ್ ನಾಯಕರ ಸಭೆ ಅಂತ್ಯವಾಗಿದ್ದು, ಕಾಂಗ್ರೆಸ್ ನ 8 ಶಾಸಕರಿಗೆ ಸಚಿವಗಿರಿ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. ಹಾಗಾದ್ರೆ ಯಾರಿಗೆ ಶನಿವಾರದ ಶಾಕ್? ಯಾರಿಗೆ ಮಂತ್ರಿ ಚಾನ್ಸ್..? ಇಲ್ಲಿದೆ ಪಟ್ಟಿ?

ಬೆಂಗಳೂರು, [ಡಿ.21]:  ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕೊನೆಗೂ ಅಂತ್ಯವಾಗಿದ್ದು,  ಕಾಂಗ್ರೆಸ್ ನ 8 ಶಾಸಕರಿಗೆ ಸಚಿವಗಿರಿ ನೀಡಲು ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಿದೆ. 

ಇಂದು (ರಾಜ್ಯ ನಾಯಕರೊಂದಿಗೆ ಕಾಂಗ್ರೆಸ್​ ಅಧ್ಯಕ್ಷ ರಾಹುಲ್ ಗಾಂಧಿ ಅವರು ತಮ್ಮ ನಿವಾಸದಲ್ಲಿ ನಡೆಸಿದ್ದ ಸಭೆ ಅಂತ್ಯವಾಗಿದ್ದು, ನೂತನ ಸಚಿವರ ಹೆಸರುಗಳ ಪಟ್ಟಿ ಫೈನಲ್ ಮಾಡಿದ್ದಾರೆ.

ರಾಹುಲ್ ಜತೆ ಸಭೆ ಅಂತ್ಯ: ಕಾಂಗ್ರೆಸ್‌ನ 8 ಶಾಸಕರಿಗೆ ಸಚಿವಗಿರಿ

ಇಬ್ಬರು ಹಾಲಿ ಸಚಿವರಾದ ರಮೇಶ್ ಜಾರಕಿಹೊಳಿ ಹಾಗೂ ಶಂಕರ್ ಗೆ ಕೊಕ್ ಕೊಟ್ಟು ಒಟ್ಟು 8 ಶಾಸಕರಿಗೆ ಮಂತ್ರಿ ಭಾಗ್ಯ ನೀಡುವುದು ಖಚಿತವಾಗಿದ್ದು, ನಾಳೆ [ಶನಿವಾರ] ಸಂಜೆ ನೂತನ ಸಚಿವರ ಪ್ರಮಾಣ ವಚನ ಸಮಾರಂಭ ನಡೆಯಲಿದೆ.

ಯಾರಿಗೆ ಶನಿವಾರದ ಶಾಕ್? ಯಾರಿಗೆ ಮಂತ್ರಿ ಚಾನ್ಸ್..?

 ಸತೀಶ್ ಜಾರಕಿಹೊಳಿ, ಆರ್.ಬಿ.ತಿಮ್ಮಾಪುರ, ಸಿ.ಎಸ್.ಶಿವಳ್ಳಿ, ಇ.ತುಕಾರಾಂ, ಎಂ.ಟಿ.ಬಿ.ನಾಗರಾಜ್, ರಹೀಂಖಾನ್, ಪಿ.ಟಿ.ಪರಮೇಶ್ವರ್ ನಾಯ್ಕ್ ಮತ್ತು ಎಂ.ಬಿ.ಪಾಟೀಲ್ ಗೆ ಮಂತ್ರಿ ಸೀಟು ಪಕ್ಕಾ ಆಗಿದೆ. ಇನ್ನು ಮಂತ್ರಿ ಸ್ಥಾನ ಪ್ರಬಲ ಆಕಾಂಕ್ಷಿಯಾಗಿದ್ದ ಬಿ.ಸಿ.ಪಾಟೀಲ್ ನಿರಾಸೆಯಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ