ಲಿಂಗಾಯತ, ದಲಿತರನ್ನು ಕಡೆಗಣಿಸಿದ ಕಾಂಗ್ರೆಸ್‌: ಬಿಜೆಪಿ ಆರೋಪ

Published : May 19, 2023, 01:53 PM IST
ಲಿಂಗಾಯತ, ದಲಿತರನ್ನು ಕಡೆಗಣಿಸಿದ ಕಾಂಗ್ರೆಸ್‌: ಬಿಜೆಪಿ ಆರೋಪ

ಸಾರಾಂಶ

ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಹ ದಕ್ಷಿಣ ಕರ್ನಾಟಕಕ್ಕೆ ಸೇರಿದವರಾಗಿದ್ದಾರೆ. ಲಿಂಗಾಯತ ಸಮುದಾಯದ ಎಂ.ಬಿ.ಪಾಟೀಲ್‌ ಮತ್ತು ದಲಿತ ಸಮುದಾಯದ ಜಿ. ಪರಮೇಶ್ವರ್‌ ಅವರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣಿಸಲಾಗಿದೆ: ಅಮಿತ್‌ ಮಾಳವೀಯ 

ನವದೆಹಲಿ(ಮೇ.19):  ಡಿ.ಕೆ.ಶಿವಕುಮಾರ್‌ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿರುವುದಕ್ಕೆ ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಕರ್ನಾಟಕದಲ್ಲಿ ಭ್ರಷ್ಟಾಚಾರಕ್ಕೆ ಗೆಲುವಾಗಿದೆ ಎಂದು ಬಿಜೆಪಿಯ ಐಟಿ ಸೆಲ್‌ ಮುಖ್ಯಸ್ಥ ಅಮಿತ್‌ ಮಾಳವೀಯ ಟೀಕಿಸಿದ್ದಾರೆ. 

ಈ ಬಾರಿ ಕರ್ನಾಟಕದಲ್ಲಿ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಸ್ಥಾನವನ್ನು ಪ್ರದೇಶವಾರು ಹಂಚಿಕೆ ಮಾಡಿಲ್ಲ ಅಥವಾ ಪ್ರಮುಖ ಸಮುದಾಯದವರಿಗೂ ಅವಕಾಶವನ್ನು ನೀಡಿಲ್ಲ. ಡಿ.ಕೆ.ಶಿವಕುಮಾರ್‌ ಹಾಗೂ ಸಿದ್ದರಾಮಯ್ಯ ಇಬ್ಬರೂ ಸಹ ದಕ್ಷಿಣ ಕರ್ನಾಟಕಕ್ಕೆ ಸೇರಿದವರಾಗಿದ್ದಾರೆ. ಲಿಂಗಾಯತ ಸಮುದಾಯದ ಎಂ.ಬಿ.ಪಾಟೀಲ್‌ ಮತ್ತು ದಲಿತ ಸಮುದಾಯದ ಜಿ. ಪರಮೇಶ್ವರ್‌ ಅವರನ್ನು ಉದ್ದೇಶಪೂರ್ವಕವಾಗಿಯೇ ಕಡೆಗಣಿಸಲಾಗಿದೆ ಎಂದು ಮಾಳವೀಯ ಹೇಳಿದ್ದಾರೆ.

ಲಿಂಗಾಯತರಿಗೆ ಪ್ರಾಶಸ್ತ್ಯ ನೀಡದಿದ್ದರೆ ಕಾಂಗ್ರೆಸ್‌ಗೆ ತಕ್ಕ ಪಾಠ: ಡಾ.ಜಾಮದಾರ ಎಚ್ಚರಿಕೆ

ಡಿ.ಕೆ.ಶಿವಕುಮಾರ್‌ ಅವರು ಗಾಂಧಿ ಕುಟುಂಬದ ಓಲೈಕೆ ಮಾಡಲು ಕರ್ನಾಟಕವನ್ನು ಎಟಿಎಂ ಮಾಡಿಕೊಳ್ಳಲಿದ್ದಾರೆ. ಕೊನೆಯ ಚುನಾವಣೆಯಾದ ಕಾರಣ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಯಾವುದೇ ಸಾಧನೆ ಮಾಡುವುದಿಲ್ಲ ಎಂದು ಅವರು ಟೀಕಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!
₹500 ಕೋಟಿ ಕೊಟ್ರೆ ಕಾಂಗ್ರೆಸ್‌ನಲ್ಲಿ ಸಿಎಂ ಕುರ್ಚಿ : ಸಿಧು ಪತ್ನಿ ಆರೋಪ