ಕಾಂಗ್ರೆಸ್‌ಗೆ ಬಿಸಿ ತುಪ್ಪವಾದ ಎರಡನೇ ಪಟ್ಟಿ ಅಭ್ಯರ್ಥಿಗಳ ಆಯ್ಕೆ, 40 ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಇಬ್ಬರ ಫೈಟ್!

Published : Apr 01, 2023, 04:07 PM IST
ಕಾಂಗ್ರೆಸ್‌ಗೆ ಬಿಸಿ ತುಪ್ಪವಾದ ಎರಡನೇ ಪಟ್ಟಿ ಅಭ್ಯರ್ಥಿಗಳ ಆಯ್ಕೆ, 40 ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಇಬ್ಬರ ಫೈಟ್!

ಸಾರಾಂಶ

ಕಾಂಗ್ರೆಸ್ ಎರಡನೇ ಪಟ್ಟಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಸುಮಾರು 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಇಬ್ಬರು ಅಭ್ಯರ್ಥಿಗಳ ನಡುವೆ ಫೈಟ್ ಶುರುವಾಗಿದೆ.

ಬೆಂಗಳೂರು (ಏ.1): ಕಾಂಗ್ರೆಸ್ ಎರಡನೇ ಪಟ್ಟಿ ಅಭ್ಯರ್ಥಿಗಳ ಆಯ್ಕೆ ಕಗ್ಗಂಟಾಗಿದೆ. ಸುಮಾರು 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಇಬ್ಬರು ಅಭ್ಯರ್ಥಿಗಳ ನಡುವೆ ಫೈಟ್ ಶುರುವಾಗಿದೆ. ಆದರೆ ನವಲಗುಂದ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳ ನಡುವೆ ಒಗ್ಗಟ್ಟು ಪ್ರದರ್ಶನ ಕಂಡಿದೆ. ನವಲಗುಂದ ಕ್ಷೇತ್ರದ ಆಕಾಂಕ್ಷಿಗಳಾದ ಕೋನರೆಡ್ಡಿ ಹಾಗೂ ಆನಂದ್ ಅಸೂಟಿ ನಡುವೆ ಒಗ್ಗಟ್ಟು ಮೂಡಿದೆ.  ಸಿದ್ದರಾಮಯ್ಯ ಭೇಟಿಯಾಗಿ ಇಬ್ಬರೂ ಆಕಾಂಕ್ಷಿಗಳು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಇಬ್ಬರಲ್ಲಿ ಯಾರಿಗೇ ಟಿಕೆಟ್ ನೀಡಿದರೂ ಒಟ್ಟಿಗೆ ಕೆಲಸ ಮಾಡುವ ವಾಗ್ದಾನ ನೀಡಿದ್ದಾರೆ. ಬಿಜೆಪಿ ಸೋಲಿಸುವುದು ನಮ್ಮ ಮೊದಲ ಗುರಿ. ಹೀಗಾಗಿ ನಾವೇ ಕಿತ್ತಾಡಿಕೊಂಡರೆ ಬಿಜೆಪಿಗೆ ಲಾಭವಾಗಲಿದೆ. ಹೀಗಾಗಿ ನೀವೂ ಯಾರಿಗೆ ಟಿಕೆಟ್ ನೀಡಿದರೂ ಒಟ್ಟಿಗರ ಕೆಲಸ ಮಾಡುತ್ತೇವೆ ಎಂದು ಇಬ್ಬರು ಆಕಾಂಕ್ಷಿಗಳು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.    

ಸುರ್ಜೆವಾಲಾ ಸಿದ್ದರಾಮಯ್ಯ ಪ್ರತ್ಯೇಕ ಮಾತುಕತೆ: ಇನ್ನು ಟಿಕೆಟ್ ಹಂಚಿಕೆ ವಿಚಾರವಾಗಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲಾ ಅವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಗುಪ್ತವಾಗಿ ಪ್ರತ್ಯೇಕ ಮಾತುಕತೆ ನಡೆಸಿದ್ದಾರೆ. ಕೋಲಾರಕ್ಕೆ ತೆರಳುವ ವೇಳೆ ಪ್ರತ್ಯೇಕವಾಗಿ ಮಾತುಕತೆ ನಡೆಸಲು ಬೇರೆ ನಾಯಕರನ್ನು ಬಿಟ್ಟು  ಒಂದೇ ಕಾರಿನಲ್ಲಿ  ಸುರ್ಜೆವಾಲಾ ಹಾಗೂ ಸಿದ್ದರಾಮಯ್ಯ ತೆರಳಿದ್ದಾರೆ. 

ಇನ್ನು ರಾಹುಲ್ ಗಾಂಧಿ ಕೋಲಾರಕ್ಕೆ ಭೇಟಿ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ರಾಹುಲ್ ಗಾಂಧಿಯವರು 9 ನೇ ತಾರೀಖು ಕೋಲಾರಕ್ಕೆ ಬರುತ್ತಾರೆ. 5 ನೇ ತಾರೀಖು ಇದ್ದ ಕಾರ್ಯಕ್ರಮ ಕ್ಯಾನ್ಸಲ್ ಆಗಿದೆ. ಅವರಿಗೆ ಬೇರೆ ಕೆಲಸ ಇದೆ , ಅಂದು ಬರೋದಕ್ಕೆ ಆಗಲ್ಲ ಆದರಿಂದ ಕ್ಯಾನ್ಸಲ್ ಆಗಿದೆ. ಕೋಲಾರದಲ್ಲಿ ಬೃಹತ್ ರ್ಯಾಲಿಯನ್ನ ಏರ್ಪಡಿಸಲಾಗಿದೆ. ಸುಮಾರು 2 ಲಕ್ಷಕ್ಕೂ ಅಧಿಕ ಜನ ಸೇರುವ ಸಾಧ್ಯತೆ ಇದೆ ಎಂದಿದ್ದಾರೆ. ಇನ್ನು ದೆಹಲಿಗೆ ತೆರಳುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ, ದೆಹಲಿಗೆ ಯಾವಾಗ ಕರಿಯುತ್ತಾರೋ ಆಗ ಹೋಗ್ತೀನಿ ಎಂದಿದ್ದಾರೆ.

ಮಾಜಿ ಸಚಿವ ಮಾಲಕರೆಡ್ಡಿ ಕಾಂಗ್ರೆಸ್‌ಗೆ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿಗೆ ಮತ್ತೊಂದು

ಡಿಕೆಶಿ ಮನೆಗೆ ಕಿಮ್ಮನೆ ರತ್ನಾಕರ್ : ತೀರ್ಥಹಳ್ಳಿ ಕಾಂಗ್ರೆಸ್ ಅಭ್ಯರ್ಥಿ ‌ಆಯ್ಕೆ ಕಗ್ಗಂಟಾಗಿರುವ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ನಿವಾಸಕ್ಕೆ  ಕಿಮ್ಮನೆ ರತ್ನಾಕರ್ ಭೇಟಿ ನೀಡಿದರು. ಈ ವೇಳೆ ಟಿಕೆಟ್ ಆಕಾಂಕ್ಷಿಗಳೊಂದಿಗೆ  ಡಿಕೆ ಶಿವಕುಮಾರ್ ಸಮನ್ವಯ ಮಾತುಕತೆ ನಡೆಸಿದರು. ಆದರೆ ಎಐಸಿಸಿ ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ನೀಡಲು ನಿರ್ಧರಿಸಿದೆ . ಆದರೆ ಮಂಜುನಾಥ್ ಗೌಡರಿಂದಲೂ ಪ್ರಬಲ ಪೈಪೋಟಿ ಹಿನ್ನೆಲೆ ಡಿಕೆ ಶಿವಕುಮಾರ್‌ರಿಂದ ಎರಡೂ ಬಣಗಳನ್ನು ಒಗ್ಗೂಡಿಸಿ ಮಾತುಕತೆ ನಡೆಸಿದೆ. ಕಿಮ್ಮನೆ ರತ್ನಾಕರ್ ಗೆ ಟಿಕೆಟ್ ನೀಡಿದರೆ ಎಲ್ಲರೂ ಒಗ್ಗೂಡಿ ಕೆಲಸ ಮಾಡುವಂತೆ ಮಂಜುನಾಥ್ ಗೌಡ ಬಣಕ್ಕೆ ಸೂಚನೆ ನೀಡಲಾಗಿದೆ.

ಧಾರವಾಡ: ಬ್ರಾಹ್ಮಣ ಸಮಾಜಕ್ಕೆ ಟಿಕೆಟ್‌ ನೀಡಿದ ಪಕ್ಷಕ್ಕೆ ನಮ್ಮ ಬೆಂಬಲ: ವಿಪ್ರ ಅಧ್ಯಕ್ಷ ಆರ್‌ ಡಿ

ಇನ್ನು ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಮಾಜಿ ಸಚಿವ ಕಿಮ್ಮನೆ ರತ್ನಾಕರ್, ವರಿಷ್ಠರು ಏನು ತೀರ್ಮಾನ ತೆಗೆದುಕೊಂಡಿದ್ದಾರೋ ಗೊತ್ತಿಲ್ಲ. ನಮ್ಮಲ್ಲಿ ಮೂರು ಜನ ಅರ್ಜಿ ಹಾಕಿದ್ದಾರೆ. ಮೂರು ಜನರನ್ನ ಕೂರಿಸಿಕೊಂಡು ಒಂದು ಒಳ್ಳೇ ರೀತಿ ಚುನಾವಣೆ ನಡೆಸಿಕೊಂಡು  ಹೋಗಬೇಕಿದೆ. ವರಿಷ್ಠರು ಯಾರಿಗೆ ಟಿಕೆಟ್ ನೀಡಿದರೂ ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗಬೇಕಿದೆ ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Karnataka news live: ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ; ಚಿತ್ರನಟ ಹರೀಶ್ ಸ್ಥಳದಲ್ಲೇ ಸಾವು!
ಉಪ ಚುನಾವಣೆ ಮುಗಿದ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಸಂಪುಟ ಕಸರತ್ತು: ಇಂದು ದೆಹಲಿಯತ್ತ 25 ಶಾಸಕರು, ನಿಯೋಗದಲ್ಲಿ ಯಾರಿದ್ದಾರೆ, ಬೇಡಿಕೆಗಳೇನು?