ಮಠ-ಮಂದಿರ ವಿವಾದಕ್ಕೆ ಕಾಂಗ್ರೆಸ್‌ ಕಾರಣ- ಸಚಿವ ಶಿವರಾಮ ಹೆಬ್ಬಾರ್‌

Published : Feb 01, 2023, 09:00 AM IST
ಮಠ-ಮಂದಿರ ವಿವಾದಕ್ಕೆ ಕಾಂಗ್ರೆಸ್‌ ಕಾರಣ- ಸಚಿವ ಶಿವರಾಮ ಹೆಬ್ಬಾರ್‌

ಸಾರಾಂಶ

ಮಠ ಮಂದಿರಗಳನ್ನು ವಿವಾದಕ್ಕೆ ಈಡುಮಾಡುವ ಕೆಲಸ ಕಾಂಗ್ರೆಸ್‌ ಮಾಡಿದೆ. ಚುನಾವಣೆಯಲ್ಲಿ ಒಂದು ಜಾತಿಯನ್ನು ಉಪಯೋಗ ಮಾಡಿಕೊಳ್ಳಲು ಇಂತಹ ಕಾರ್ಯಕ್ಕೆ ಇಳಿಯುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಹೇಳಿದರು.

ಶಿರಸಿ (ಫೆ.1) : ಮಠ ಮಂದಿರಗಳನ್ನು ವಿವಾದಕ್ಕೆ ಈಡುಮಾಡುವ ಕೆಲಸ ಕಾಂಗ್ರೆಸ್‌ ಮಾಡಿದೆ. ಚುನಾವಣೆಯಲ್ಲಿ ಒಂದು ಜಾತಿಯನ್ನು ಉಪಯೋಗ ಮಾಡಿಕೊಳ್ಳಲು ಇಂತಹ ಕಾರ್ಯಕ್ಕೆ ಇಳಿಯುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್‌ ಹೇಳಿದರು.

ತಾಲೂಕಿನ ಬಿಸ್ಲಕೊಪ್ಪದಲ್ಲಿ ಮಾತನಾಡಿದ ಅವರು, ಅತ್ತಿವೇರಿ ಮಾತೆಯವರ ಬಗ್ಗೆ ಏಕವಚನ ಬಳಸಿದ್ದೇನೆ ಎಂದು ನನ್ನ ಮೇಲೆ ಕಾಂಗ್ರೆಸ್‌ ಪ್ರಮುಖರು ಆರೋಪ ಮಾಡುತ್ತಿದ್ದಾರೆ. ರಾಜಕಾರಣದಲ್ಲಿ ನಾನು ಗುರುಗಳು, ಹಿರಿಯರು ಅಥವಾ ವಿರೋಧಿಗಳ ಬಗ್ಗೆ ಅಗೌರವ ತೋರಿಲ್ಲ. ಅಂತಹ ಶಬ್ದ ಬಳಸಿಲ್ಲ ಎಂದರು.

ಕನ್ನಡದ ಒಂದಿಂಚು ನೆಲವನ್ನೂಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ; ಶಿವರಾಮ್ ಹೆಬ್ಬಾರ್

ಕಾಂಗ್ರೆಸ್‌ ವಿನಾಕಾರಣ ಇದನ್ನು ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಪತ್ರಿಕಾಗೋಷ್ಠಿ ಮಾಡುತ್ತಿದೆ. ಚುನಾವಣೆಯಲ್ಲಿ ಗೆಲ್ಲಲು ಈ ರೀತಿಯ ಅಪಪ್ರಚಾರದ ತಂತ್ರ ಹೂಡುತ್ತಿದೆ ಎಂದ ಅವರು, ವಿರೋಧ ಪಕ್ಷದವರು ಅವರ ಕೆಲಸ ಮಾಡಲಿ. ಆದರೆ ಇಂತಹ ಸನ್ನಿವೇಶದಿಂದ ನಾನು ವಿಚಲಿತ ಆಗುತ್ತೇನೆ ಎಂದ ತಿಳಿದಿದ್ದರೆ ಅದು ಸಾಧ್ಯವಿಲ್ಲ ಎಂದರು.

1994ರಿಂದ 2000ರ ವರೆಗೆ 6 ವರ್ಷ ಬಿಜೆಪಿ ಜಿಲ್ಲಾಧ್ಯಕ್ಷನಾಗಿ ನಾನು ಕೆಲಸ ಮಾಡಿದ್ದೇನೆ. ಆಗ ಈ ಮೂಲ ಬಿಜೆಪಿಯೇ ಆಗಿದೆ ಎಂದರು.

ವರ್ತೂರ ಪ್ರಕಾಶ್‌ ಅವರ ಬಗ್ಗೆ ಮಾತನಾಡಿದ ಸಚಿವರು, ಮಾನಸಿಕ ಸ್ಥಿತಿ ಸರಿ ಇಲ್ಲದವರು ಮಾತ್ರ ಬೇರೆಯವರ ವೈಯಕ್ತಿಕ ಜೀವನದ ಬಗ್ಗೆ ಟೀಕೆ ಮಾಡುತ್ತಾರೆ. ಹಾಗಾಗಿ ವರ್ತೂರ ಯಾವ ಸ್ಥಿತಿಯಲ್ಲಿ ಮಾತನಾಡಿದ್ದಾರೆ ಗೊತ್ತಿಲ್ಲ. ಆ ಸ್ಥಿತಿ ತಿಳಿದುಕೊಂಡು ಉತ್ತರ ನೀಡುತ್ತೇನೆ ಎಂದು ಪ್ರತಿಕ್ರಿಯಿಸಿದರು.

Uttara Kannada: ಮರಾಠಿಗರಿಗೆ ಕಸಾಪ ತಕ್ಕ ಪಾಠ ಕಲಿಸಲಿ: ಸಚಿವ ಹೆಬ್ಬಾರ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Budget 2026 ದೇಶದ ಆರ್ಥಿಕತೆಯನ್ನೇ ನಾಶಪಡಿಸುವ ಬಜೆಟ್; ಮಮತಾ ಬ್ಯಾನರ್ಜಿ ಆಕ್ರೋಶ
Union Budget ಬಗ್ಗೆ ಸುಳ್ಳು ಹಬ್ಬಿಸಬೇಡಿ; ಅಂಕಿ-ಅಂಶಗಳಿದ್ದರೆ ಚರ್ಚೆಗೆ ಬನ್ನಿ ರಾಹುಲ್ ಗಾಂಧಿಗೆ ಸೀತಾರಾಮನ್ ಸವಾಲು!