'ಸಿ.ಡಿ. ಬರಲಿ, ಯಾರು ಯಾವ ಪಾತ್ರ ಮಾಡಿದ್ದಾರೋ ನೋಡೋಣ'

Published : Jan 15, 2021, 04:37 PM IST
'ಸಿ.ಡಿ. ಬರಲಿ, ಯಾರು ಯಾವ ಪಾತ್ರ ಮಾಡಿದ್ದಾರೋ ನೋಡೋಣ'

ಸಾರಾಂಶ

ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬಸನಗೌಡ ಪಾಟೀಲ್ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿ ಬಾಂಬ್ ಸ್ಫೋಟಿಸಿದ್ದಾರೆ. ಇನ್ನು ಈ ಬಗ್ಗೆ ಕಾಂಗ್ರೆಸ್ ನಾಯಕ ಪ್ರತಿಕ್ರಿಯಿಸಿದ್ದು ಹೀಗೆ.

ವಿಜಯಪುರ, (ಜ.15): ಸಚಿವ ಸ್ಥಾನ ಸಿಗದಿದ್ದಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಬಿಎಸ್ ಯಡಿಯೂರಪ್ಪ ವಿರುದ್ಧ ಸಿಡಿ ಬಾಂಬ್ ಸ್ಫೋಟಿಸಿದ್ದು, ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚನ ಮೂಡಿಸಿದೆ.

ಕಣ್ಣಿನಿಂದ ನೋಡಲಾಗದಂತಹ ಸಿಡಿ ಇದೆ. ಬಿಎಸ್ ಯಡಿಯೂರಪ್ಪ ಮನೆಯಲ್ಲಿ ಆ ಸಿಡಿಯನ್ನು ಮಾಡಿದ್ದೇ ಅವರ ಮೊಮ್ಮಗ. ಹಿಂದೆ ಇದ್ದದ್ದೇ ಆ ಸಿಡಿ, ಯಾರೊಂದಿಗೆ ಇದೆ ಅಂತ ತಮಗೆಲ್ಲಾ ಅದು ಗೊತ್ತೇ ಇದೆ. ನಾನು ಆ ಬಗ್ಗೆ ಏನು ಹೇಳಬೇಕಿಲ್ಲ. ಈ ಸಿಡಿಯನ್ನು ಮುಂದಿಟ್ಟು ಯಡಿಯೂರಪ್ಪನವರನ್ನು ಬ್ಲ್ಯಾಕ್​ಮೇಲ್ ಮಾಡಿ ಹಲವರು ಸಚಿವರಾಗುತ್ತಿದ್ದಾರೆ ಎಂದು ಆರೋಪಿಸಿದ್ದರು. ಯತ್ನಾಳ್ ಅವರ ಈ ಹೇಳಿಕೆ ಇದೀಗ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

'ಯತ್ನಾಳ್ ಬಿಜೆಪಿ ಸೇರ್ಪಡೆ ಬೇಡವೆಂದ್ರೂ ಬಿಎಸ್‌ವೈ ಕೇಳಲಿಲ್ಲ, ಈಗ ಅವರಿಗೆ ಮುಳುವು' 

ಇನ್ನು ಈ ಬಗ್ಗೆ ಪ್ರತಿಕ್ರಿಯಿಸುರವ ಕಂಗ್ರೆಸ್ ನಾಯಕ ಟಿ.ಬಿ.ಜಯಚಂದ್ರ, ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುರಿತಾದ ಸಿ.ಡಿ.ಇದೆ ಎಂದು ಸುದ್ದಿ ಬರುತ್ತಿದೆ. ಬಸನಗೌಡ ಪಾಟೀಲ ಯತ್ನಾಳ್ ಅವರು ನನ್ನ ಬಳಿ ಸಿ.ಡಿ. ಇದ್ದಿದ್ದರೆ ಉಪಮುಖ್ಯಮಂತ್ರಿ ಆಗುತ್ತಿದ್ದೆ ಎಂದಿದ್ದಾರೆ. ಇಷ್ಟು ಬಹಿರಂಗವಾಗಿ ಮಾತನಾಡಿದ ಮೇಲೆ ಸಿ.ಡಿ. ಹೊರ ಬಂದೇ ಬರುತ್ತದೆ ಎಂದರು.

ಯಾರ ಬಳಿ ಇಲ್ಲ ಎಂದರೂ ನಮ್ಮ ಸ್ನೇಹಿತ ಎಚ್‌. ವಿಶ್ವನಾಥ್ ಬಳಿ ಸಿ.ಡಿ. ಇದ್ದೇ ಇರುತ್ತದೆ. ಅದರಲ್ಲಿ ಏನಿದೆ, ಯಾರು ಯಾವ ಪಾತ್ರ ಮಾಡಿದ್ದಾರೆ ಎನ್ನುವುದನ್ನು ಆ ಮೇಲೆ ನೋಡೋಣ ಎಂದು ವ್ಯಂಗ್ಯವಾಡಿದರು.

ಬಿಜೆಪಿ ಮುಖಂಡರೇ ಸಿ.ಡಿ. ವಿಚಾರವಾಗಿ ಇಷ್ಟೊಂದು ನೇರವಾಗಿ ಹೇಳುತ್ತಿದ್ದಾರೆ ಎಂದರೆ ಇದರಲ್ಲಿ ಏನೋ ಇದೆ. ಈಗ ಇದೆಲ್ಲವೂ ಹೊರಗೆ ಬರಲು ಆರಂಭವಾಗಿದೆ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!