ಟಿಕೆಟ್‌ ಗೊಂದಲ: ಕಾಂಗ್ರೆಸ್‌ ಕೋಲಾರ ಸಮಾವೇಶ ಮುಂದಕ್ಕೆ

Published : Mar 29, 2024, 06:57 AM IST
ಟಿಕೆಟ್‌ ಗೊಂದಲ: ಕಾಂಗ್ರೆಸ್‌ ಕೋಲಾರ ಸಮಾವೇಶ ಮುಂದಕ್ಕೆ

ಸಾರಾಂಶ

ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಇರುವ ಗೊಂದಲಗಳು ನಿವಾರಣೆಯಾದ ನಂತರ ಪ್ರಜಾಧ್ವನಿ ಸಮಾವೇಶ ಆಯೋಜಿಸುವ ಕುರಿತು ನಿರ್ಧರಿಸಿದ ಕಾಂಗ್ರೆಸ್‌ ನಾಯಕರು 

ಬೆಂಗಳೂರು(ಮಾ.29):  ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಗೊಂದಲ ನಿವಾರಣೆಯಾಗದ ಹಿನ್ನೆಲೆಯಲ್ಲಿ ಕೋಲಾರದಿಂದಲೇ ಶುಕ್ರವಾರ ಚಾಲನೆ ದೊರೆಯಬೇಕಿದ್ದ ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶ ಮುಂದೂಡಲಾಗಿದೆ. 

ದಿನದಿಂದ ದಿನಕ್ಕೆ ಕೋಲಾರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಜಟಿಲಗೊಳ್ಳುತ್ತಿದ್ದು, ಅದರ ನಿವಾರಣೆಗೆ ಕಾಂಗ್ರೆಸ್‌ ನಾಯಕರು ಹರಸಾಹಸಪಡುವಂತಾಗಿದೆ. ಸಚಿವ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್‌ ನೀಡುವುದನ್ನು ವಿರೋಧಿಸಿ ಶಾಸಕರು ರಾಜೀನಾಮೆಗೂ ಮುಂದಾಗಿದ್ದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅಸಮಧಾನಿತ ಶಾಸಕರೊಂದಿಗೆ ಸಭೆ ನಡೆಸಿದರೂ ಅಸಮಧಾನ ತಣಿದಿಲ್ಲ. ಹೀಗಾಗಿ ಕೋಲಾರದಲ್ಲಿ ಶುಕ್ರವಾರ ನಡೆಯಬೇಕಿದ್ದ ಕಾಂಗ್ರೆಸ್‌ ಪ್ರಜಾಧ್ವನಿ ಸಮಾವೇಶಗಳನ್ನು ಮುಂದೂಡಲಾಗಿದೆ. 

Lok Sabha Election 2024: ಕಾಂಗ್ರೆಸ್‌ ಕೋಲಾರ ಸರ್ಕಸ್‌: ಮನವೊಲಿಕೆಗೆ ಸಿಎಂ, ಡಿಸಿಎಂ ಹರಸಾಹಸ

ಕೋಲಾರ, ಚಿಕ್ಕಬಳ್ಳಾಪುರ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ಇರುವ ಗೊಂದಲಗಳು ನಿವಾರಣೆಯಾದ ನಂತರ ಪ್ರಜಾಧ್ವನಿ ಸಮಾವೇಶ ಆಯೋಜಿಸುವ ಕುರಿತು ಕಾಂಗ್ರೆಸ್‌ ನಾಯಕರು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ