ಮೋದಿ, ಬಿಜೆಪಿಗರ ಹುಟ್ಟುಗುಣ ವಿಷ ಕಾರುವುದು: ಬಿ.ಕೆ.ಹರಿಪ್ರಸಾದ್‌

Published : Apr 29, 2023, 01:27 PM IST
ಮೋದಿ, ಬಿಜೆಪಿಗರ ಹುಟ್ಟುಗುಣ ವಿಷ ಕಾರುವುದು: ಬಿ.ಕೆ.ಹರಿಪ್ರಸಾದ್‌

ಸಾರಾಂಶ

ವಿವಾದಾತ್ಮಕ ಹೇಳಿಕೆ ನೀಡಲು ಯತ್ನಾಳ್‌ ಅವರಿಗೆ ಬಿಜೆಪಿಯವರು ತರಬೇತಿ ನೀಡಿದಂತಿದೆ. ಯತ್ನಾಳ್‌ ಪದೇ ಪದೇ ಅಮಿತ್‌ ಶಾ ಅವರನ್ನು ನೋಡಿಕೊಂಡೇ ವಿಷದ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ನೋಡಿಯೇ ಆ ಪದ ನೆನಪಾಗಿರಬಹುದು ಎಂದು ಹೇಳಿದರು. ಬಿಜೆಪಿಯವರ ಹೇಳಿಕೆಗಳೇ ವಿಷ ಕಾರುವಂತಿರುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರು ಹಳ್ಳಿ ಭಾಷೆಯಲ್ಲಿ ಹೇಳಿದ್ದಾರೆ: ಬಿ.ಕೆ.ಹರಿಪ್ರಸಾದ್‌ 

ಬೆಂಗಳೂರು(ಏ.29):  ‘ಬಿಜೆಪಿಯವರ ಹುಟ್ಟುಗುಣವೇ ವಿಷ ಕಾರುವುದು. ಕೆ.ಎಸ್‌.ಈಶ್ವರಪ್ಪ, ಬಸನಗೌಡ ಪಾಟೀಲ್‌ ಯತ್ನಾಳ್‌ ಅಷ್ಟೇಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಗುಣವೇ ವಿಷ ಕಾರುವುದು’ ಎಂದು ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. 

ಸೋನಿಯಾ ಗಾಂಧಿ ಅವರು ವಿಷ ಕನ್ಯೆ ಎಂಬ ಯತ್ನಾಳ್‌ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ವಿವಾದಾತ್ಮಕ ಹೇಳಿಕೆ ನೀಡಲು ಯತ್ನಾಳ್‌ ಅವರಿಗೆ ಬಿಜೆಪಿಯವರು ತರಬೇತಿ ನೀಡಿದಂತಿದೆ. ಯತ್ನಾಳ್‌ ಪದೇ ಪದೇ ಅಮಿತ್‌ ಶಾ ಅವರನ್ನು ನೋಡಿಕೊಂಡೇ ವಿಷದ ಹೇಳಿಕೆ ನೀಡುತ್ತಿದ್ದಾರೆ. ಅವರನ್ನು ನೋಡಿಯೇ ಆ ಪದ ನೆನಪಾಗಿರಬಹುದು ಎಂದು ಹೇಳಿದರು. ಬಿಜೆಪಿಯವರ ಹೇಳಿಕೆಗಳೇ ವಿಷ ಕಾರುವಂತಿರುತ್ತದೆ. ಮಲ್ಲಿಕಾರ್ಜುನ ಖರ್ಗೆ ಅವರು ಹಳ್ಳಿ ಭಾಷೆಯಲ್ಲಿ ಹೇಳಿದ್ದಾರೆ ಎಂದರು.

ಬಿಜೆಪಿ ಸರ್ಕಾರದ ಎರಡೂ ಎಂಜಿನ್‌ ಫೇಲ್‌: ಎಂ.ಬಿ.ಪಾಟೀಲ ವಾಗ್ದಾಳಿ

ಅಮಿತ್‌ ಶಾ ಅವರು ರಾಜ್ಯದಲ್ಲಿ ದೊಂಬಿ ಗಲಾಟೆ ಮಾಡಿಸಿ ಚುನಾವಣೆ ಗೆಲ್ಲಲು ಪ್ಲ್ಯಾನ್‌ ಮಾಡಿದ್ದಾರೆ. ಈ ಬಗ್ಗೆ ಯಾರೂ ಮಾತನಾಡಲ್ಲ. ಸ್ವತಃ 27 ಗಂಭೀರ ಪ್ರಕರಣ ಎದುರಿಸುತ್ತಿದ್ದ ಯೋಗಿ ಆದಿತ್ಯಾನಾಥ್‌ ಅವರ ಸರ್ಕಾರದ ಮಾದರಿ ಅನುಷ್ಠಾನಗೊಳಿಸುತ್ತೇವೆ ಎನ್ನುತ್ತಾರೆ. ಉತ್ತರ ಪ್ರದೇಶ ಮಾದರಿ ಮಾಡುವುದು ಬೇಕಿಲ್ಲ. ನಮ್ಮ ಕರ್ನಾಟಕದ ಮಾಡೆಲ್‌ ಬೇಕಿದ್ದರೆ ಅವರು ಮಾಡಿಕೊಳ್ಳಲಿ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪ್ರಧಾನಿಗೆ ಪತ್ರ ಬರೆಯುವುದರಲ್ಲಿ ಸಿದ್ದರಾಮಯ್ಯ, ಡಿಕೆಶಿ ನಿಸ್ಸೀಮರು: ಬಿ.ವೈ.ವಿಜಯೇಂದ್ರ
ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ