
ಬೆಂಗಳೂರು, (ಏ.19): ಕೊರೋನಾ ನಿಯಂತ್ರಣಕ್ಕೆ ಇಂದು (ಸೋಮವಾರ) ಬೆಂಗಳೂರಿನ ಎಲ್ಲಾ ಪಕ್ಷದ ಜನಪ್ರತಿನಿಧಿಗಳ ಸಭೆ ಅಂತ್ಯವಾಗಿದೆ.
ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಸಿಎಂ ಇಬ್ರಾಹಿಂ, ಲಸಿಕೆ ಹಾಕಿಸಿಕೊಂಡ ಬಳಿಕವೂ ಜನ ಸಾಯ್ತಿದ್ದಾರೆ. ಇದಕ್ಕೇನು ಪರಿಹಾರ? ಹೀಗಾಗಿ ಲಾಕ್ಡೌನ್ ಪ್ರಯೋಜನ ಇಲ್ಲ ಅಭಿಪ್ರಾಯ ವ್ಯಕ್ತಪಡಿಸಿದರು.
ಕರ್ನಾಟಕದಲ್ಲಿ ಅರ್ಧ ಬಂದ್..ಬಂದ್..: ಹರಿದಾಡುತ್ತಿರುವ Fake ಮಾರ್ಗಸೂಚಿ
ಸರ್ಕಾರ ಗೊಂದಲದಲ್ಲಿದೆ. ಆಕ್ಸಿಜನ್, ವೆಂಟಿಲೇಟರ್, ಇಂಜೆಕ್ಷನ್ ಕೊರತೆ ಇದೆ. ಇದರ ಬಗ್ಗೆ ಸ್ಪಷ್ಟ ಉತ್ತರ ಕೊಡಲಿಲ್ಲ. ಸರ್ಕಾರ 144 ಸೆಕ್ಷನ್ ಹೇರಲಿ. ಲಾಕ್ಡೌನ್ ಬದಲು 144 ಸೆಕ್ಷನ್ ಹಾಕಲಿ. ಸತ್ತ ಮೇಲೆ ಮರ್ಯಾದೆಯಿಂದ ಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸಲಹೆ ನೀಡಿದರು.
ಇನ್ನಷ್ಟು ಚಿತಾಗಾರಗಳು, ಸ್ಮಶಾನಗಳನ್ನು ಮಾಡುವಂತೆ ಸಲಹೆ ಕೊಟ್ಡಿದ್ದೇವೆ. ಎಲ್ರೂ ನಮ್ಮ ಸಲಹೆ ಕೊಟ್ಟಿದ್ದೇವೆ. ಲಾಕ್ಡೌನ್ ಬೇಡ ಅಂದಿದ್ದೇವೆ. ತಕ್ಷಣ ಚೌಟ್ರಿಗಳನ್ನು ಆಸ್ಪತ್ರೆಗಳಾಗಿ ಪರಿವರ್ತಿಸಲಿ. ಇಲ್ಲದಿದ್ದರೆ ಸಮಸ್ಯೆ ಆಗುತ್ತದೆ. ಜನ ಸಾಯ್ತಿದಾರೆ, ತಪ್ಪಾದ್ರೆ ಒಪ್ಪಿಕೊಳ್ಳಿ ಎಂದರು,
ಸಭೆಯಲ್ಲೇ ಸಾಮಾಜಿಕ ಅಂತರ ಇಲ್ಲ. ಇವ್ರೇ ಸಾಮಾಜಿಕ ಅಂತರ ಪಾಲಿಸ್ತಿಲ್ಲ. ಜನ ಇನ್ನು ಹೇಗೆ ಪಾಲಿಸ್ತಾರೆ? 144 ಸೆಕ್ಷನ್ ಜಾರಿಗೆ ಸಲಹೆ ಕೊಟ್ಟಿದ್ದೇವೆ. ಪೊಲೀಸರಿಗೆ ಜನರ ನಿರ್ಬಂಧಿಸಲು ಸೂಚಿಸಿ ಅಂದಿದ್ದೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.