
ವಿಜಯಪುರ, (ಜ.31): ಕಾಂಗ್ರೆಸ್ ಹಿರಿಯ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಅವರು ತಮ್ಮದೇ ಪಕ್ಷ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ರಾಜ್ಯದಿಂದ 26 ಮಂಗಳಮುಖಿಯರು ಆಯ್ಕೆಯಾಗಿ ಹೋಗಿದ್ದಾರೆ. ಪ್ರಧಾನಿ ಮೋದಿಯನ್ನ ಪ್ರಶ್ನಿಸುವ ತಾಕತ್ತು ಇವರಿಗಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ವ್ಯಂಗ್ಯವಾಡಿದರು.
ಬಿಜೆಪಿ ಪರ ಜಮೀರ್ ಬ್ಯಾಟಿಂಗ್, ತಮ್ಮದೇ ಪಕ್ಷದ ಹಿರಿಯ ನಾಯಕಗೆ ಖಾನ್ ಟಾಂಗ್
ವಿಜಯಪುರದ ಮುದ್ದೇಬಿಹಾಳ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಜಿಎಸ್ಟಿ ಪಾಲು ಕೇಳುವ ಧೈರ್ಯ ಯಾವೊಬ್ಬ ಸಂಸದರು ಮಾಡ್ತಿಲ್ಲ. 30 ಸಾವಿರ ಕೋಟಿ ಜಿಎಸ್ಟಿ ಪಾಲು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಬೇಕಿದೆ. ಅವಕಾಶ ಸಿಕ್ಕರು ತೆರಿಗೆ ಸಂಗ್ರಹಿಸೊ ಕೆಲಸ ಸಿಎಂ ಬಿಎಸ್ವೈ ಮಾಡ್ತಿಲ್ಲ. ಬಿಎಸ್ವೈ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದಾರೆ ಎಂದು ಸಿಎಂ ವಿರುದ್ಧ ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್, ಬಿಜೆಪಿ ಎರೆಡು ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿರುವ ಇಬ್ರಾಹಿಂ, ರಾಜ್ಯದಲ್ಲಿ ಆಡಳಿತದಲ್ಲಿದ್ದೇವೆ ಎನ್ನುವ ಅರಿವು ಬಿಜೆಪಿಗಿಲ್ಲ. ವಿರೋಧ ಪಕ್ಷದಲ್ಲಿದ್ದೀವಿ ಅನ್ನೋ ಅರಿವು ಕಾಂಗ್ರೆಸ್ ನವರಿಗಿಲ್ಲ ಎಂದರು.
ಈಗಾಗಲೇ ಕಾಂಗ್ರೆಸ್ನಿಂದ ಅಂತರ ಕಾಪಾಡಿಕೊಂಡಿರುವ ಸಿ.ಎಂ.ಇಬ್ರಾಹಿಂ, ಜೆಡಿಎಸ್ ಸೇರ್ಪಡೆಗೆ ಮುಂದಾಗಿದ್ದಾರೆ. ಈಗಾಗಲೇ ದೇವೇಗೌಡ್ರ ಜೊತೆ ಎರಡು ಸುತ್ತಿನ ಮಾತುಕತೆಗಳು ಮುಗಿದಿದ್ದು, ಅಧಿಕೃತ ಸೇರ್ಪಡೆಯೊಂದೇ ಬಾಕಿ ಇದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.