'ದೇಶಕ್ಕೆ 6 ವರ್ಷಗಳ ಹಿಂದೆಯೇ ಕೋವಿಡ್ ಬಂದಿದೆ'

Published : Sep 27, 2020, 09:59 PM ISTUpdated : Sep 27, 2020, 10:28 PM IST
'ದೇಶಕ್ಕೆ 6 ವರ್ಷಗಳ ಹಿಂದೆಯೇ ಕೋವಿಡ್ ಬಂದಿದೆ'

ಸಾರಾಂಶ

 ಕೋವಿಡ್ ಮನುಷ್ಯನಿಗೆ 6 ತಿಂಗಳ ಹಿಂದೆ ಬಂದಿದೆ. ಆದರೆ ದೇಶಕ್ಕೆ 6 ವರ್ಷಗಳ ಹಿಂದೆಯೇ ಕೋವಿಡ್ ಬಂದಿದೆ ಎಂದು ಸಿಎಂ ಇಬ್ರಾಹಿಂ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು, (ಸೆ.27): ದೇಶಕ್ಕೆ ಆರು ವರ್ಷಗಳ ಹಿಂದೆಯೇ ಕೋವಿಡ್ ಬಂದಿದೆ ಎಂದು ಮಾಜಿ ಶಾಸಕ ಸಿಎಂ ಇಬ್ರಾಹಿಂ ಅವರು ಬಿಜೆಪಿ ಸರ್ಕಾರವನ್ನು ಲೇವಡಿ ಮಾಡಿದ್ದಾರೆ.

ಇಂದು ಕಾಂಗ್ರೆಸ್ ಪಕ್ಷದಿಂದ ಆರಮನೆ ಮೈದಾನದಲ್ಲಿ ರಾಜ್ಯ ಕಾಂಗ್ರೆಸ್ ನೂತನ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಪಕ್ಷದ ಹಾಲಿ, ಮಾಜಿ ಶಾಸಕರು, ಸಂಸದರು, ಪರಿಷತ್ ಸದಸ್ಯರು, ಲೋಕಸಭೆ, ವಿಧಾನಸಭೆ ಪರಾಜಿತ ಅಭ್ಯರ್ಥಿಗಳು ಪಕ್ಷದ ಜಿಲ್ಲಾಧ್ಯಕ್ಷರು, ಮುಂಚೂಣಿ ಘಟಕಗಳ ಮುಖಂಡರು ಭಾಗಿಯಾಗಿದ್ದಾರೆ. ಪಕ್ಷ ಸಂಘಟನೆ ಕುರಿತು ಸಭೆಯಲ್ಲಿ ಹಿರಿಯರು ಸಲಹೆ ಮತ್ತು ಸೂಚನೆ ನೀಡಿದ್ದಾರೆ.

ಬಂದ್ ಆಗುತ್ತಿದೆ ಕರ್ನಾಟಕ, ಪೂನಂ ಪಾಂಡೆಯ ಮತ್ತೊಂದು ನಾಟಕ; ಸೆ.27ರ ಟಾಪ್ 10 ಸುದ್ದಿ! 

ಈ ವೇಳೆ ಭಾಷಣ ಮಾಡಿದ ಸಿಎಂ ಇಬ್ರಾಹಿಂ, ಕೋವಿಡ್ ಮನುಷ್ಯನಿಗೆ 6 ತಿಂಗಳ ಹಿಂದೆ ಬಂದಿದೆ. ಆದರೆ ದೇಶಕ್ಕೆ 6 ವರ್ಷಗಳ ಹಿಂದೆಯೇ ಕೋವಿಡ್ ಬಂದಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು.

 ಡಿಕೆ ಶಿವಕುಮಾರ್ ಅವರನ್ನು ನಾನು ಅಂಭಿನಂದಿಸುತ್ತೇನೆ. ಕೊರೋನಾ ಸಂದರ್ಭದಲ್ಲಿ ತುಂಬಾ ಓಡಾಡಿ ಕೆಲಸ ಮಾಡುತ್ತಿದ್ದಾರೆ. ಬೂತ್ ಮಟ್ಟದಲ್ಲಿ ಕಾಂಗ್ರೆಸ್ ಬಲ ಪಡಿಸಿದರೆ ನಿಜವಾಗಿಯೂ ನಾವು ಅಧಿಕಾರಕ್ಕೆ ಬರುತ್ತೇವೆ. ಡಿಸೆಂಬರ್ ನಲ್ಲಿ ರಾಜಕೀಯದಲ್ಲಿ ಬದಲಾವಣೆ ಆಗುತ್ತೆ ಎಂದು ಭವಿಷ್ಯ ನುಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ