ದೇವೇಗೌಡ್ರ ಭೇಟಿ ಬಳಿಕ ಸ್ಪೋಟಕ ಹೇಳಿಕೆ ಕೊಟ್ಟ ಕಾಂಗ್ರೆಸ್ ಹಿರಿಯ ನಾಯಕ..!

Published : Dec 14, 2020, 05:06 PM ISTUpdated : Dec 14, 2020, 08:00 PM IST
ದೇವೇಗೌಡ್ರ ಭೇಟಿ ಬಳಿಕ ಸ್ಪೋಟಕ ಹೇಳಿಕೆ ಕೊಟ್ಟ ಕಾಂಗ್ರೆಸ್ ಹಿರಿಯ ನಾಯಕ..!

ಸಾರಾಂಶ

 ಡಿಕೆ ಶಿವಕುಮಾರ್ ಅವರು ಖುದ್ದು ಭೇಟಿ ಮಾಡಿ ಬೇಡ ಅಂದ್ರು ಅದ್ಯಾವುದಕ್ಕೂ ಕೇರ್ ಮಾಡದೆ ಕಾಂಗ್ರೆಸ್ ಹಿರಿಯ ನಾಯಕ ದೇವೇಗೌಡ್ರನ್ನ ಭೇಟಿಯಾಗಿದ್ದಾರೆ. ಬಳಿಕ ಮಾತನಾಡಿದ್ದು ಹೀಗೆ...

ಬೆಂಗಳೂರು, (ಡಿ.14): ಕಾಂಗ್ರೆಸ್‌ ಕಾರ್ಯಚಟುವಟಿಕೆಗಳಿಂದ ಅಂತರ ಆಯ್ದುಕೊಂಡಿರುವ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಇಂದು (ಸೋಮವಾರ) ಜೆಡಿಎಸ್​ ವರಿಷ್ಠ ಹೆಚ್.​​ಡಿ. ದೇವೇಗೌಡ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದರು.

ಇಬ್ರಾಹಿಂ ಪದ್ಮನಾಭನಗರದಲ್ಲಿರುವ ದೇವೇಗೌಡರ ನಿವಾಸದ ಭೇಟಿ ಬೆನ್ನಲ್ಲೇ ಹಿರಿಯ ನಾಯಕರ ನಡುವಣ ಮಹತ್ವದ ಸಭೆಯಲ್ಲಿ ಕುಮಾರಸ್ವಾಮಿ ಅವರು ಕೂಡ ಜೊತೆಗೂಡಿದರು. ಸುಮಾರು ಒಂದೂಕಾಲು ಗಂಟೆಯಿಂದ ಇಬ್ರಾಹಿಂ ಜೊತೆ ದೇವೇಗೌಡರು ಸಮಾಲೋಚನೆ ನಡೆಸಿದರು.

ಡಿಕೆಶಿ ಖುದ್ದು ಭೇಟಿಯಾಗಿ ಬೇಡವೆಂದ್ರೂ ದೇವೇಗೌಡ್ರ ಮನೆಗೆ ಹೋದ ಕಾಂಗ್ರೆಸ್ ಹಿರಿಯ ನಾಯಕ...!

ಇನ್ನು ಸಭೆ ಬಳಿಕ ಮಾತನಾಡಿದ ಇಬ್ರಾಹಿಂ, ನನ್ನ ದೇವೇಗೌಡ್ರ ನಡುವೆ ತಂದೆ, ಮಕ್ಕಳ ಭಾಂದವ್ಯವಿದೆ. ಪಕ್ಷಕ್ಕೆ ಸೇರ್ಪಡೆಯಾದರೆ ತಂದೆ ಮಗನಿಗೆ ಬೇಡ ಎನ್ನುತ್ತಾರಾ? ಎಂದು ಹೇಳುವ ಮೂಲಕ ಪರೋಕ್ಷವಾಗಿ ಜೆಡಿಎಸ್ ಸೇರ್ಪಡೆಗೆ ಆಸಕ್ತಿ ತೋರಿದಂತಿದೆ.

 ನಾನು ಸದ್ಯ ಪ್ರವಾಸಕ್ಕೆ ಹೊರಡುತ್ತೇನೆ. ಬಳಿಕವೇ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುತ್ತೇನೆ. ಕಾಂಗ್ರೆಸ್ ಪಕ್ಷದ ಸಿದ್ಧಾಂತದ ಬಗ್ಗೆ ನನಗೆ ಭಿನ್ನಾಭಿಪ್ರಾಯವಿದೆ. ವೈಯುಕ್ತಿಕ ಯಾರೊಂದಿಗೂ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು. 

ದೇಶದ ಜನರಿಗೆ ಒಳ್ಳೆಯದಾಗುವಂತೆ ನಡೆಯುವುದೇ ನನ್ನ ಉದ್ದೇಶ ಅಷ್ಟೇ. ನಾನು ಯಾವತ್ತೂ ಮುಸ್ಲಿಂ ನಾಯಕನಲ್ಲ, ಆ ರೀತಿ ಕರೆಯಿಸಿಕೊಳ್ಳುವ ಆಸೆ ನನಗೆ ಇಲ್ಲ. ಕಾಂಗ್ರೆಸ್​​ ಪೋಸ್ಟರ್​​​ನಲ್ಲಿ ಎಲ್ಲೂ ಸಾಬ್ರ ಫೋಟೋನೇ. ಯಾಕಿಲ್ಲ ಎಂದು ಪ್ರಶ್ನಿಸಿದರು.

ಈಗಾಗಲೇ ಎಚ್‌ಡಿ ಕುಮಾರಸ್ವಾಮಿ ಅವರು ಸಿ.ಎಂ. ಇಬ್ರಾಹಿಂದ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ಮಾಡಿದ್ದರು. ಅದರ ಮುಂದುವರೆದ ಭಾಗವಾಗಿ ಇಬ್ರಾಹಿಂ ಅವರು ದೇವೇಗೌಡ ಅವರನ್ನ ಭೇಟಿ ಮಾಡಿದ್ದು ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಸತಿ ಯೋಜನೆಗಳಿಗೆ ಸಹಾಯಧನ ಹೆಚ್ಚಳಕ್ಕೆ ಚಿಂತನೆ: ಸಚಿವ ಜಮೀರ್‌ ಅಹಮದ್‌
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ