
ಬೆಂಗಳೂರು, [ನ.01]: ಮಾಜಿ ಸಚಿವ ಡಿಕೆ ಶಿವಕುಮಾರ್ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಈ ಹಿನ್ನೆಲೆಯಲ್ಲಿ ಡಿಕೆಶಿ ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆ ದಾಖಲಾಗಿದ್ದಾರೆ.
ಬಿಪಿ ಮತ್ತು ಶುಗರ್ ಸಂಬಂಧಿಸಿದಂತೆ ಇಂದು [ಶುಕ್ರವಾರ] ಲಗೇಜ್ ಸಮೇತರಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅಡ್ಮೀಟ್ ಆಗುವ ಸಾಧ್ಯತೆಗಳಿವೆ.
ಡಿಕೆಶಿ ಆರೋಗ್ಯ ಏರುಪೇರು: ಗಾಲಿ ಕುರ್ಚಿಯಲ್ಲೇ ಸ್ಕ್ಯಾನಿಂಗ್ಗೆ!
ಈ ಹಿಂದೆ ಡಿಕೆಶಿ ಇಡಿ ವಶದಲ್ಲಿದ್ದಾಗಲೂ ಕೂಡ ಅವರಿಗೆ ಆಗಾಗ ಬಿಪಿ, ಶುಗರ್ ಸಮಸ್ಯೆ ಕಾಡುತ್ತಿತ್ತು. ಇದ್ರಿಂದ ಡಿಕೆಶಿ ಅವರನ್ನು ದೆಹಲಿಯಲ್ಲಿರುವ RML ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.
ಇದೀಗ ಮತ್ತೆ ಅದೇ ಬಿಪಿ, ಶುಗರ್ ಸಮಸ್ಯೆಯಿಂದಾಗಿ ಡಿಕೆ ಶಿವಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಂದು ಪ್ರಮುಖ ಅಂಶ ಅಂದ್ರೆ ಹವಾಲಾ ಹಣ ಪ್ರಕಾರಣದಲ್ಲಿ ತಿಹಾರ್ ಜೈಲಿನಲ್ಲಿದ್ದ ಡಿಕೆಶಿಗೆ ದೆಹಲಿ ಹೈಕೋರ್ಟ್ ಆರೋಗ್ಯದ ಸಮಸ್ಯೆ ಕಾರಣಕ್ಕೆ ಜಾಮೀನು ಮಂಜೂರು ಮಾಡಿರುವುದನ್ನು ಇಲ್ಲಿ ಸ್ಮರಿಸಬಹುದು.
ಈ ಒಂದೇ ಒಂದು ಕಾರಣಕ್ಕೆ ಡಿಕೆಶಿಗೆ ಜಾಮೀನು ಸಿಕ್ಕಿದ್ದು: ಏನದು?
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.