ಸಂಕ್ರಾಂತಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಕಾಂತಿ: ಡಿಕೆಶಿಗೆ ನ್ಯೂ ಇಯರ್ ಗಿಫ್ಟ್..?

Published : Dec 24, 2019, 06:48 PM IST
ಸಂಕ್ರಾಂತಿಗೆ ಕರ್ನಾಟಕ ಕಾಂಗ್ರೆಸ್‌ನಲ್ಲಿ ಹೊಸ ಕಾಂತಿ: ಡಿಕೆಶಿಗೆ ನ್ಯೂ ಇಯರ್ ಗಿಫ್ಟ್..?

ಸಾರಾಂಶ

ಲೋಕಸಭೆ ಹಾಗೂ ವಿಧಾನಸಭೆ ಬೈ ಎಲೆಕ್ಷನ್ ನಲ್ಲಿ ಹೀನಾಯವಾಗಿ ಸೋಲುಕಂಡಿರುವ  ರಾಜ್ಯ ಕಾಂಗ್ರೆಸ್‌ ಘಟಕಕ್ಕೆ 'ಕಾಯಕಲ್ಪ' ನೀಡುವುದಕ್ಕೆ ಎಐಸಿಸಿ ಕೈ ಹಾಕಿದೆ.  ಈಗಾಗಲೇ ಅಭಿಪ್ರಾಯ ಸಂಗ್ರಹಣೆ ಮಾಡಿರುವ ಎಐಸಿಸಿ ವೀಕ್ಷಕರ ತಂಡ ಹೈಕಾಂಡ್ ಗೆ ವರದಿ ನೀಡಿದೆ. ವರದಿಯಂತೆ ಮಾಜಿ ಸಚಿವ, ಕನಕಪುರ ಕಾಂಗ್ರೆಸ್ ಶಾಸಕ ಡಿ.ಕೆ.ಶಿವಕುಮಾರ್ ಗೆ ಹೈಕಮಾಂಡ್ ಹೊಸ ವರ್ಷಕ್ಕೆ ಬಿಗ್ ಗಿಫ್ಟ್ ಕೊಡಲು ತಯಾರಿ ನಡೆಸಿದೆ. 

ಬೆಂಗಳೂರು, [ಡಿ.24]: ಕರ್ನಾಟಕ ಕಾಂಗ್ರೆಸ್ ನಲ್ಲಿ ಸಂಕ್ರಾಂತಿಗೆ ಹೊಸ ಕಾಂತಿಯಾವುದು ಬಹುತೇಕ ಖಚಿತವಾಗಿದೆ. ಲೋಕಸಭಾ ಹಾಗೂ ಬೈ ಎಲೆಕ್ಷನ್ ಸೋಲಿನ ಹೊಣೆಹೊತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಇದೀಗ ಆ ರಾಜೀನಾಮೆಯನ್ನು ಕಾಂಗ್ರೆಸ್ ಹೈಕಮಾಂಡ್ ಅಂಗೀಕರಿಸಿದ್ದು, ಹೊಸ ನಾಯಕನಿಗೆ ಕೆಪಿಸಿಸಿ ಪಟ್ಟಕಟ್ಟಲು ತಯಾರಿ ನಡೆಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.  ಜ.20 ರಿಂದ ಅಧಿವೇಶನ ಆರಂಭವಾಗಲಿದ್ದು, ಅಷ್ಟರೊಳಗೆ ಕೆಪಿಸಿಸಿಗೆ ಹೊಸ ಅಧ್ಯಕ್ಷರ ನೇಮಕವಾಗಲಿದೆ.

ನಾವಿನ್ನೂ ಸತ್ತಿಲ್ಲ : ಡಿ.ಕೆ.ಶಿವಕುಮಾರ್ ಎಚ್ಚರಿಕೆ !

ಎಐಸಿಸಿ ವೀಕ್ಷಕರ ಅಭಿಪ್ರಾಯಂದಂತೆ ಕೆಪಿಸಿಸಿಗೆ ಡಿ.ಕೆ. ಶಿವಕುಮಾರ್ ಅವರನ್ನ ಫೈನಲ್ ಮಾಡಲಾಗಿದ್ದು, ಜನವರಿ 2ನೇ ವಾರ ಡಿ.ಕೆ.ಶಿವಕುಮಾರ್ ಅವರನ್ನು ಕೆಪಿಸಿಸಿ ಪಟ್ಟಕ್ಕೇರಿಸುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.  ಇದಕ್ಕೆ ಡಿಕೆಶಿ ಕೂಡ ಗ್ರ್ಯಾಂಡ್ ಎಂಟ್ರಿಕೊಡಲು ಭರ್ಜರಿ ತಯಾರಿ ನಡೆಸಿದ್ದಾರೆ.

ಕಳೆದ ವಾರ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲೇ ಡಿ.ಕೆ.ಶಿವಕುಮಾರ್ ಅವರಿಗೆ ಗ್ರೀನ್ ಸಿಗ್ನಲ್ ಸಿಕ್ಕಿದ್ದು, ಜನವರಿಯಲ್ಲಿ 13ರ ನಂತರ ಹೈಕಮಾಂಡ್ ಅನುಮತಿ ನೀಡಲಿದೆ. ಈ ಬಗ್ಗೆ ಡಿಕೆಶಿ ತಮ್ಮ ಆಪ್ತರೊಂದಿಗೆ ಚರ್ಚೆ ಮಾಡಿದ್ದಾರೆ.

ಪ್ರಸ್ತುತ ಕಾಂಗ್ರೆಸ್ ಪರಿಸ್ಥಿತಿ ನೋಡಿದರೆ ಪ್ರಭಾವಿ ಸಮುದಾಯದ ಮುಖಂಡರು ನಾಯಕತ್ವ ವಹಿಸಿಕೊಳ್ಳಬೇಕಾದ ಅಗತ್ಯತೆ ಮತ್ತು ಅನಿವಾರ್ಯತೆ ಇದೆ.  ಡಿಕೆಶೀ ಪ್ರಬಲ ನಾಯಕರಾಗಿ ಹೊರಹೊಮ್ಮಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೆ ಕೆಪಿಸಿಸಿ ಹುದ್ದೆ ವಹಿಸುವುದು ಸೂಕ್ತ ಎನ್ನುವ ನಿರ್ಧಾರಕ್ಕೆ ಹೈಕಮಾಂಡ್ ಬಂದಿದೆ.

ಸಿದ್ದರಾಮಯ್ಯ ಮುಂದುವರಿಕೆ..?
ಹೌದು...ಬೈ ಎಲೆಕ್ಷನ್ ಸೋಲಿನ ಹೊಣೆಹೊತ್ತು ವಿಪಕ್ಷ ಹಾಗೂ ಶಾಸಕಾಂಗ ನಾಯಕ ಹುದ್ದೆಗೆ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರು. ಆದ್ರೆ, ಹೈಕಮಾಂಡ್ ಇದನ್ನು ಅಂಗೀಕರಿಸದೇ ನೀವೇ ಮುಂದುವರಿಯಬೇಕೆಂದು ಮನವೋಲಿಸುತ್ತಿದೆ.

ಸದ್ಯದ ಪರಿಸ್ಥಿತಿಯಲ್ಲಿ ಬದಲಾವಣೆ ಮಾಡುವ ಸಾಧ್ಯತೆಗಳು ಕಡಿಮೆ ಎಂದು ಹೇಳಲಾಗುತ್ತಿದೆ. ಆದರೆ ಕಾಂಗ್ರೆಸ್ ಪಕ್ಷವನ್ನು ಪುನರ್ ರಚನೆ ಮಾಡಲು ಹೈಕಮಾಂಡ್ ಸಿದ್ಧತೆ ನಡೆಸಿದ್ದು, ಡಿ.ಕೆ.ಶಿವಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ಮಾಡುವುದು ಬಹುತೇಕ ಖಚಿತವಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ