ಇಡಿ ವಿಚಾರಣೆ ವೇಳೆ ಕಸ್ಟಡಿಯಲ್ಲಿದ್ದ ಪೊಲೀಸ್ ಠಾಣೆಗೆ ಡಿಕೆಶಿ ಭೇಟಿ: ಕಾರಣವೇನು..?

Published : Jan 26, 2020, 10:05 PM IST
ಇಡಿ ವಿಚಾರಣೆ ವೇಳೆ ಕಸ್ಟಡಿಯಲ್ಲಿದ್ದ ಪೊಲೀಸ್ ಠಾಣೆಗೆ ಡಿಕೆಶಿ ಭೇಟಿ: ಕಾರಣವೇನು..?

ಸಾರಾಂಶ

ಕೆಪಿಸಿಸಿ ಅಧ್ಯಕ್ಷ ಹುದ್ದೆ ಸಂಬಂಧ ಕಳೆದೆರಡು ದಿನಗಳಿಂದ ದೆಹಲಿಯಲ್ಲಿ ಠಿಕಾಣಿ ಹೂಡಿರುವ ಡಿಕೆ ಶಿವಕುಮಾರ್, ಇಡಿ ವಿಚಾರಣೆ ವೇಳೆ ಕಸ್ಟಡಿಯಲ್ಲಿದ್ದ ಅದೇ ಪೊಲೀಸ್ ಠಾಣೆಗೆ ಹೋಗಿದ್ದಾರೆ. ಕಾರಣವೇನು..? ಈ ಕೆಳಗಿನಂತಿದೆ ನೋಡಿ..

 ನವದೆಹಲಿ (ಜ.26):  ಮಾಜಿ ಸಚಿವ ಡಿಕೆ ಶಿವಕುಮಾರ್ ಭಾನುವಾರ ದೆಹಲಿಯ ತುಘಲಕ್ ರಸ್ತೆ ಹಾಗೂ ಖಾನ್ ಮಾರ್ಕೆಟ್ ಠಾಣೆಗಳಿಗೆ ಭೇಟಿ ನೀಡಿದ್ದಾರೆ.

 ತುಘಲಕ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿ ಪಿಎಸ್ಒ ಗೋವಿಂದ್ ಚೌಹಾಣ್ ಹಾಗೂ ಖಾನ್ ಮಾರ್ಕೆಟ್ ಪೊಲೀಸ್ ಠಾಣೆಯ ಸುನೀಲ್ ಕುಮಾರ್ ಅವರನ್ನು ಮಾಜಿ ಸಚಿವ ಡಿಕೆ ಶಿವಕುಮಾರ್ ಭಾನುವಾರ ಭೇಟಿ ಮಾಡಿ ಧನ್ಯವಾದ ತಿಳಿಸಿದ್ದಾರೆ.

ಮಿಣಿ ಮಿಣಿ ಮಿಂಚಿದ ಕನ್ನಡ ಕ್ವೀನ್ಸ್, ಕಿವೀಸ್ ಮಣಿಸಿದ ಕೊಹ್ಲಿ ಬಾಯ್ಸ್; ಜ.26ರ ಟಾಪ್ 10 ಸುದ್ದಿ!

 ದೆಹಲಿ ನಿವಾಸದಲ್ಲಿ ಸಿಕ್ಕ ಅಕ್ರಮ ಹಣದ ಕುರಿತು ಇಡಿ ವಿಚಾರಣೆ ವೇಳೆ ತುಘಲಕ್ ಪೊಲೀಸ್ ಠಾಣೆಯಲ್ಲಿ ಡಿಕೆಶಿ ಇದ್ದರು. ಈ ವೇಳೆ ಡಿಕೆಶಿಗೆ ಅಲ್ಲಿನ ಪೊಲೀಸರು ಒಳ್ಳೆ ರೀತಿಯಿಂದ ನೋಡಿಕೊಂಡಿದ್ದಕ್ಕೆ ಅಭಿನಂದನೆ ತಿಳಿಸಲು ಡಿಕೆಶಿ ತುಘಲಕ್ ಪೊಲೀಸ್ ಠಾಣೆ ಹೋಗಿದ್ದಾರೆ. ಬಳಿಕ ಗಣರಾಜ್ಯೋತ್ಸವ ಪೆರೇಡ್ ವೀಕ್ಷಿಸಲು ತೆರಳಿದರು.

ಐಟಿ ವಿಚಾರಣೆ ವೇಳೆ 13 ದಿನಗಳ ಕಾಲ ತುಘಲಕ್ ಪೊಲೀಸ್ ಠಾಣೆಯಲ್ಲಿಯಲ್ಲಿದ್ದ ಸಂದರ್ಭದಲ್ಲಿ ನನಗೆ ನೈತಿಕ ಬೆಂಬಲ ನೀಡಿದ್ದಕ್ಕಾಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಧನ್ಯವಾದ ತಿಳಿಸಿದ್ದೇನೆಂದು ಸ್ವತಃ ಡಿಕೆ ಶಿವಕುಮಾರ್ ಅವರು ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ
'ಅಹಿಂದ ಕಿಂಗ್ ಸಿದ್ದರಾಮಯ್ಯ' ಜೀವಂತ ಇರುವಾಗಲೇ ಪರ್ಯಾಯ ನಾಯಕತ್ವದ ಕೂಗು ಏಕೆ?: ಬೈರತಿ ಸುರೇಶ್