
ಬೆಂಗಳೂರು, (ಅ.26): ಸುಮಾರು ಒಂದುವರೆ ತಿಂಗಳು ತಿಹಾರ್ ಜೈಲುವಾಸ ಅನುಭವಿಸಿ ಹೊರ ಬಂದಿರುವ ಡಿ ಕೆ ಶಿವಕುಮಾರ್ ಅವರನ್ನು ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಸಮುದಾಯ ಜನರು ಅದ್ಧೂರಿಯಾಗಿ ಸ್ವಾಗತ ಕೋರಿದ್ದಾರೆ.
ಸರಿ ಸುಮಾರು ಎರಡು ತಿಂಗಳ ನಂತರ ಬೆಂಗಳೂರಿಗೆ ಆಗಮಿಸುತ್ತಿರುವ ಡಿ ಕೆ ಶಿವಕುಮಾರ್ ಅವರಿಗೆ ಬರಮಾಡಿಕೊಂಡಿರುವ ರೀತಿ ನೋಡಿದ್ರೆ ಈ ಶಕ್ತಿ ಪ್ರದರ್ಶನದ ಉದ್ದೇಶ ಏನು ಎಂಬ ಚರ್ಚೆಗಳು ರಾಜ್ಯ ರಾಜಕಾರಣದಲ್ಲಿ ಶುರುವಾಗಿದೆ.
ಡಿಕೆಶಿಗೆ ಕಾಂಗ್ರೆಸ್ ಅಧ್ಯಕ್ಷ ಹುದ್ದೆ? ಸಿದ್ದರಾಮಯ್ಯ ಹೇಳಿದ್ದಿಷ್ಟೇ
ಕೆಂಪೇಗೌಡ ವಿಮಾನ ನಿಲ್ದಾಣದಿಂದ ಡಿಕೆಶಿಯನ್ನು ಅಭಿಮಾನಿಗಳು, ಕಾರ್ಯಕರ್ತರು ಹುಮ್ಮಸ್ಸಿನಿಂದ ಘೋಷಣೆಗಳನ್ನು ಕೂಗುತ್ತಾ ಹಾರ, ತುರಾಯಿ ಹಾಕಿ ಗ್ರ್ಯಾಂಡ್ ವೆಲ್ಕಮ್ ಮಾಡಿದರು. ಇದು ಮುಂಬರುವ ಉಪಚುನಾವಣೆಗೆ ನಡೆಯುತ್ತಿರುವ ಕಾಂಗ್ರೆಸ್ ಶಕ್ತಿ ಪ್ರದರ್ಶನ ಎನ್ನಲಾಗುತ್ತಿದೆ.
ಮತ್ತೊಂದೆಡೆ ಡಿಕೆ ಶಿವಕುಮಾರ್ ಅವರು ತಮ್ಮ ಬಲ ಏನು ಎನ್ನುವುದು ಹೈಕಮಾಂಡ್ಗೆ ರವಾನಿಸಲು ಈ ಶಕ್ತಿ ಪ್ರದರ್ಶನ ಮಾಡುತ್ತಿದ್ದಾರೆ ಎನ್ನುವ ಮಾತುಗಳೂ ಸಹ ಕೇಳಿಬರುತ್ತಿವೆ.
ಡಿಕೆಶಿಗೆ ಕೆಪಿಸಿಸಿ ಸಾರಥ್ಯ
ಯಾಕಂದ್ರೆ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಹೀನಾಯ ಸೋಲು ಕಂಡಿದೆ. ಇದ್ರಿಂದ ಕೆಪಿಸಿಸಿಗೆ ಒಬ್ಬ ಸ್ಟ್ರಾಂಗ್ ಲೀಡರ್ ಅವಶ್ಯವಿದೆ. ಈ ಹಿನ್ನೆಲೆಯಲ್ಲಿ ಟ್ರಬಲ್ ಶೂಟರ್ ಕೆಪಿಸಿಸಿಗೆ ಸೂಕ್ತ ನಾಯಕ ಎನ್ನುವುದು ಹೈಕಮಾಂಡ್ಗೆ ಮನವರಿಕೆಯಾಗಿದೆ.
ಡಿ ಕೆ ಶಿವಕುಮಾರ್ ಪ್ರಭಾವಿ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರವೇ ಆದರೂ, ಕೆಪಿಸಿಸಿ ಅಧ್ಯಕ್ಷ ಹುದ್ದೆಗಾಗಿ ಈ ಹಿಂದೆ ನಡೆಸಿದ್ದ ಲಾಬಿ ಫಲ ನೀಡಿರಲಿಲ್ಲ. ಆದ್ರೆ, ಡಿಕೆಶಿ ಜೈಲಿ ಹೋಗಿದಾಗಿನಿಂದ ಅವರ ಬೆನ್ನಿಗೆ ಒಕ್ಕಲಿಗ ಸಮುದಾಯ ನಿಂತಿದೆ. ಇದು ಪಕ್ಷಕ್ಕೂ ಪ್ಲಾಸ್ ಆಗಲಿದೆ ಎನ್ನುವುದು ಕಾಂಗ್ರೆಸ್ ಹೈಕಮಾಂಡ್ಗೆ ಗೊತ್ತಾಗಿದೆ.
ಒಟ್ಟಿನಲ್ಲಿ ಈ ಶಕ್ತಿ ಪ್ರದರ್ಶನದ ಮೂಲಕ ಮತ್ತೆ ತಾನೇನು ಅನ್ನೋದನ್ನು ಪ್ರೂವ್ ಮಾಡಲು ಹೊರಟಿದ್ದಾರಾ? ಅಥವಾ ಕೆಪಿಸಿಸಿ ಅಧ್ಯಕ್ಷರಾಗಲು ಬಲ ಪ್ರದರ್ಶನ ಮಾಡಿದ್ದಾರಾ? ಎನ್ನುವುದಕ್ಕೆ ಮುಂದಿನ ದಿನಗಳಲ್ಲಿ ತಿಳಿಯಲಿದೆ.
ಅಕ್ಟೋಬರ್ 26ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.