ಗದಗ ಜಿಲ್ಲಾಧಿಕಾರಿಯ ಸರಳತೆಗೆ ಕಾಂಗ್ರೆಸ್ ಹಿರಿಯ ನಾಯಕ ಫಿದಾ...!

Published : Aug 09, 2020, 04:00 PM IST
ಗದಗ ಜಿಲ್ಲಾಧಿಕಾರಿಯ ಸರಳತೆಗೆ ಕಾಂಗ್ರೆಸ್ ಹಿರಿಯ ನಾಯಕ ಫಿದಾ...!

ಸಾರಾಂಶ

ಉನ್ನತ ಹುದ್ದೆ ಸಿಕ್ಕಿದಾಕ್ಷಣ ಹೆಚ್ಚಿನಾ ಎಲ್ಲಾ ಜನ ಅಸ್ಪತ್ರೆಯ ವಿಷಯ ಬಂದಾಗ ಉತ್ತಮ ಗುಣಮಟ್ಟದ ಖಾಸಗಿ ಆಸ್ಪತ್ರೆಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಾರೆ.  ಆದ್ರೆ, ಗದಗ ಜಿಲ್ಲಾಧಿಕಾರಿಯ ನಡೆ ಎಲ್ಲರ ಮೆಚ್ಚುಗೆಗೆ ಕಾರಣವಾಗಿದೆ.

ಗದಗ, (ಆ.09): ಸರ್ಕಾರಿ ಆಸ್ಪತ್ರೆ ಎಂದರೆ ಮೂಗು ಮುರಿಯುವವರೇ ಹೆಚ್ಚು. ಅದರಲ್ಲೂ ಕೊರೋನಾ ಬಂದ್ಮೇಲಂತೂ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಒಂದಿಲ್ಲೊಂದು ಭಯಾನಕ ವರದಿಗಳು ಬರುತ್ತಲೇ ಇವೆ. 

ಆದರೆ. ಇಲ್ಲೆದರ ನಡುವೆ ಗದಗ ಜಿಲ್ಲಾಧಿಕಾರಿ ಸುಂದರೇಶ್ ಅವರು  ತಮ್ಮ ಪತ್ನಿಯನ್ನು ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸುವ ಮೂಲಕ  ಸರಳತೆ ಮೆರೆದಿದ್ದಾರೆ. ಅಲ್ಲದೇ ಇತರರಿಗೂ ಮಾದರಿಯಾಗಿದ್ದಾರೆ.

ನಾರ್ಮಲ್ ಹೆರಿಗೆಗೆ ಫೇಮಸ್‌ ಇಲ್ಲಿನ ಸರ್ಕಾರಿ ಆಸ್ಪತ್ರೆ..!

ಗದಗದ ಕೆಸಿ ರಾಣಿ ರಸ್ತೆಯ ದುಂಡಪ್ಪ, ಮಾನ್ವಿ ಸರ್ಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇಂದು (ಭಾನುವಾರ) ಬೆಳಗ್ಗೆ ಶಸ್ತ್ರಚಿಕಿತ್ಸೆ ಮೂಲಕ ಇವರ ಪತ್ನಿಯ ಹೆರಿಗೆ ಮಾಡಲಾಗಿದ್ದು, ಅವರು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಆರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ಹೇಳಿದ್ದಾರೆ.

ಕೊರೋನಾ ವೈರಸ್ ಭೀತಿಯಿಂದ ಸರ್ಕಾರಿ ಆಸ್ಪತ್ರೆಗೆ ಹೋಗಲು ಭಯ ಪಡುವ ಈ ದಿನಗಳಲ್ಲಿಯೂ ಜಿಲ್ಲಾಧಿಕಾರಿಯವರು ಸರ್ಕಾರಿ ಆಸ್ಪತ್ರೆಯನ್ನೇ ಆಯ್ಕೆ ಮಾಡಿಕೊಂಡಿರುವುದಕ್ಕೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ಇನ್ನು ಈ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ ಎಚ್‌ಕೆ ಪಾಟೀಲ್ ಟ್ವೀಟ್ ಮೂಲಕ ಪ್ರತಿಕ್ರಿಯಿಸಿ ಜಿಲ್ಲಾಧಿಕಾರಿಗಳ ನಡೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

2026ರಲ್ಲೇ ಮಾತನಾಡುತ್ತೇನೆ: ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆಯ ಹಿಂದಿನ ರಹಸ್ಯವೇನು?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ