ಸಚಿವ ಸ್ಥಾನದಿಂದ ಅಶ್ವತ್ಥನಾರಾಯಣ ವಜಾಕ್ಕೆ ಐವನ್‌ ಆಗ್ರಹ

Published : Feb 20, 2023, 01:30 AM IST
ಸಚಿವ ಸ್ಥಾನದಿಂದ ಅಶ್ವತ್ಥನಾರಾಯಣ ವಜಾಕ್ಕೆ ಐವನ್‌ ಆಗ್ರಹ

ಸಾರಾಂಶ

ಸಿದ್ದರಾಮಯ್ಯ ಅವರನ್ನು ಹೊಡೆದು ಕೊಲ್ಲಲು ಕರೆ ನೀಡಿರುವ ಅಶ್ವತ್ಥ ನಾರಾಯಣ ಅವರೇ ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದಿರುವ ಜಗದೀಶ್‌ ಶೆಟ್ಟರ್‌ ಅವರನ್ನೂ ಹೊಡೆದು ಕೊಲ್ತೀರಾ? ಟಿಪ್ಪುವಿನಂತೆ ವೇಷಭೂಷಣ ಧರಿಸಿ ಟಿಪ್ಪು ದೇಶಪ್ರೇಮಿ ಎಂದ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರಿಗೂ ನಿಮ್ಮ ಹೇಳಿಕೆ ಇದು ಅನ್ವಯಿಸುತ್ತಾ ಎಂದು ಪ್ರಶ್ನಿಸಿದ ಐವನ್‌ ಡಿಸೋಜ. 

ಮಂಗಳೂರು(ಫೆ.20): ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟಿಪ್ಪುವಿನಂತೆ ಹೊಡೆದು ಹಾಕಬೇಕು ಎಂಬ ಪ್ರಚೋದನಕಾರಿ ಹೇಳಿಕೆ ನೀಡಿರುವ ಸಚಿವ ಅಶ್ವತ್ಥನಾರಾಯಣ ವಿರುದ್ಧ ಪೊಲೀಸ್‌ ಇಲಾಖೆ ಕಾನೂನು ಕ್ರಮ ಕೈಗೊಳ್ಳಬೇಕು. ಸಚಿವ ಸಂಪುಟದಿಂದ ಅವರನ್ನು ವಜಾಗೊಳಿಸಬೇಕು ಎಂದು ಕೆಪಿಸಿಸಿ ಉಪಾಧ್ಯಕ್ಷ, ಮಾಜಿ ಎಂಎಲ್ಸಿ ಐವನ್‌ ಡಿಸೋಜ ಒತ್ತಾಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಹೊಡೆದು ಕೊಲ್ಲಲು ಕರೆ ನೀಡಿರುವ ಅಶ್ವತ್ಥ ನಾರಾಯಣ ಅವರೇ ಟಿಪ್ಪು ಪುಸ್ತಕಕ್ಕೆ ಮುನ್ನುಡಿ ಬರೆದಿರುವ ಜಗದೀಶ್‌ ಶೆಟ್ಟರ್‌ ಅವರನ್ನೂ ಹೊಡೆದು ಕೊಲ್ತೀರಾ? ಟಿಪ್ಪುವಿನಂತೆ ವೇಷಭೂಷಣ ಧರಿಸಿ ಟಿಪ್ಪು ದೇಶಪ್ರೇಮಿ ಎಂದ ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಅವರಿಗೂ ನಿಮ್ಮ ಹೇಳಿಕೆ ಇದು ಅನ್ವಯಿಸುತ್ತಾ ಎಂದು ಪ್ರಶ್ನಿಸಿದರು.

MANGALURU LIT FEST 2023: ಮುಂದಿನ 25 ವರ್ಷ ಅಮೃತ ಕಾಲ; ಭಾರತ ಅತ್ಯುನ್ನತ ಸ್ಥಾನಕ್ಕೆ : ಆರ್‌.ಜಗನ್ನಾಥ್‌

ಸಿದ್ದರಾಮಯ್ಯ ಅವರನ್ನು ನಿರ್ಭೀತಿಯಿಂದ ಕೆಲಸ ಮಾಡದಂತೆ ತಡೆಯುವ ಹುನ್ನಾರ ಇದು ಮತ್ತು ಜನರಿಗೆ ಅಪರಾಧ ಮಾಡಲು ಪ್ರಚೋದನೆ ನೀಡುವ ಹೇಯ ಕೃತ್ಯ. ಇಂಥವರಿಗೆ ಅಧಿಕಾರದಲ್ಲಿ ಮುಂದುವರಿಯುವ ಯಾವ ನೈತಿಕತೆಯೂ ಇಲ್ಲ. ಅಶ್ವತ್ಥನಾರಾಯಣ ವಿರುದ್ಧ ಕ್ರಮ ಕೈಗೊಳ್ಳದೆ ಇದ್ದರೆ ಬೀದಿಗಿಳಿದು ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಕಾಂಗ್ರೆಸ್‌ ಮುಖಂಡರಾದ ಕೋಡಿಜಾಲ್‌ ಇಬ್ರಾಹಿಂ, ಅಪ್ಪಿ, ಸಬಿತಾ ಮಿಸ್ಕಿತ್‌, ಪ್ರಕಾಶ್‌ ಸಾಲ್ಯಾನ್‌, ಭಾಸ್ಕರ ರಾವ್‌, ಸುಹೈಲ್‌ ಕಂದಕ್‌, ಮನುರಾಜ, ಸಲೀಂ ಮಕ್ಕಾ, ಸಿ.ಎಂ.ಮುಸ್ತಫಾ, ಯು.ಪಿ.ಇಬ್ರಾಹಿಂ ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಯಾವುದೇ ಕ್ಷಣದಲ್ಲಾದರೂ ಡಿ.ಕೆ. ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಉದಯ ಕದಲೂರು ಓಪನ್ ಹೇಳಿಕೆ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ