ಕಾಂಗ್ರೆಸ್‌ ಕಟ್ಟಾಳು ಖರ್ಗೆಗೆ ಈ ಬಾರಿ ರಾಜ್ಯಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಒಲಿದು ಬರುತ್ತಾ?

Published : Jun 12, 2020, 12:39 PM ISTUpdated : Jun 12, 2020, 12:46 PM IST
ಕಾಂಗ್ರೆಸ್‌ ಕಟ್ಟಾಳು ಖರ್ಗೆಗೆ ಈ ಬಾರಿ ರಾಜ್ಯಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಒಲಿದು ಬರುತ್ತಾ?

ಸಾರಾಂಶ

11 ಬಾರಿ ನೇರ ಚುನಾವಣೆ ಗೆದ್ದಿದ್ದ ಮಲ್ಲಿಕಾರ್ಜುನ ಖರ್ಗೆ ಒಂದು ಬಾರಿ ಸೋತ ನಂತರ ಹೈಕಮಾಂಡ್‌ ಕೃಪೆಯಿಂದ ದಿಲ್ಲಿ ರಾಜಕಾರಣಕ್ಕೆ ಮರಳಿದ್ದಾರೆ. ಮುಂದಿನ ಕೆಲ ತಿಂಗಳಲ್ಲಿ ಗುಲಾಂ ನಬಿ ಆಜಾದ್‌ ಅವಧಿ ಕೊನೆಗೊಳ್ಳಲಿದೆ. ಇವರ ಸ್ಥಾನಕ್ಕೆ ಮಲ್ಲಿಕಾರ್ಜುನ ಖರ್ಗೆ ಬರ್ತಾರಾ? 

11 ಬಾರಿ ನೇರ ಚುನಾವಣೆ ಗೆದ್ದಿದ್ದ ಮಲ್ಲಿಕಾರ್ಜುನ ಖರ್ಗೆ ಒಂದು ಬಾರಿ ಸೋತ ನಂತರ ಹೈಕಮಾಂಡ್‌ ಕೃಪೆಯಿಂದ ದಿಲ್ಲಿ ರಾಜಕಾರಣಕ್ಕೆ ಮರಳಿದ್ದಾರೆ. ಮುಂದಿನ ಕೆಲ ತಿಂಗಳಲ್ಲಿ ಗುಲಾಂ ನಬಿ ಆಜಾದ್‌ ಅವಧಿ ಕೊನೆಗೊಳ್ಳಲಿದೆ.

ಮತ್ತು ಮನಮೋಹನ್‌ ಸಿಂಗ್‌ ಆರೋಗ್ಯ ಕೂಡ ಅಷ್ಟಕಷ್ಟೇ. ಹೇಗಿದ್ದರೂ ಟೀಮ್‌ ಸೋನಿಯಾ ಜೊತೆಗೆ ಮತ್ತು ರಾಹುಲ್‌ ಗಾಂ​ಧಿ ಟೀಮ್‌ ಜೊತೆಗೂ ಖರ್ಗೆ ಚೆನ್ನಾಗಿದ್ದಾರೆ. ಬೇಡದ ವಿಷಯಗಳಿಗೆ ತಲೆ ಹಾಕದ ಖರ್ಗೆ ಹೈಕಮಾಂಡ್‌ ಕೊಟ್ಟಸೂಚನೆ ಅಕ್ಷರಶಃ ಪಾಲಿಸುವ ನಿಷ್ಠಾವಂತ ಕಾಂಗ್ರೆಸಿಗ. 5 ವರ್ಷ ಲೋಕಸಭೆಯ ವಿರೋಧ ಪಕ್ಷದ ನಾಯಕನಾಗಿ ಖರ್ಗೆ ಒಳ್ಳೆಯ ಸಂಸದೀಯ ಪಟು ಎಂದು ಹೆಸರು ಪಡೆದಿದ್ದರು. ಅವರ ಉರ್ದು ಮಿಶ್ರಿತ ಹಿಂದಿ ಹಾಗೂ ವಿಷಯ ಅಧ್ಯಯನ ಮಾಡಿಕೊಂಡು ಹೋಗುವ ಪರಿಗೆ ಮೋದಿ ಕೂಡ ತಲೆದೂಗಿದ್ದಾರೆ.

ಬಿಎಸ್‌ವೈ ಶಿಫಾರಸಿಗೆ ನಕಾರ; ಇದು 3 ನೇ ಶಾಕ್‌ ಟ್ರೀಟ್‌ಮೆಂಟ್..!

ಹೀಗಾಗಿ ಖರ್ಗೆ ಸಾಹೇಬರಿಗೆ ಈಗ ರಾಜ್ಯಸಭೆ ವಿರೋಧ ಪಕ್ಷದ ನಾಯಕನ ಸ್ಥಾನ ಒಲಿದು ಬಂದರೂ ಆಶ್ಚರ್ಯವಿಲ್ಲ. ಅಂದಹಾಗೆ, 5 ವರ್ಷ ಲೋಕಸಭೆಯಲ್ಲಿ ವಿರೋಧ​ ಪಕ್ಷದ ನಾಯಕರಾದರೂ ಕೂಡ ಖರ್ಗೆ ಅವರಿಗೆ ಕೆಂಪು ಗೂಟದ ಕಾರು, ಪಾರ್ಲಿಮೆಂಟ್‌ನಲ್ಲಿ ಪ್ರತ್ಯೇಕ ಆಫೀಸು ಸಿಕ್ಕಿರಲಿಲ್ಲ. ಏಕೆಂದರೆ ಅವರ ಹುದ್ದೆ ಸಂವಿಧಾನಬದ್ಧ ಆಗಿರಲಿಲ್ಲ. ಈ ಸಲ ಸಿಗಬಹುದು.

- ಪ್ರಶಾಂತ್ ನಾತು, ಸುವರ್ಣ ನ್ಯೂಸ್ ದೆಹಲಿ ಪ್ರತಿನಿಧಿ 

ಇಂಡಿಯಾ ಗೇಟ್, ದೆಹಲಿಯಿಂದ ಕಂಡ ರಾಜಕಾರಣ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?
ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್