
ವಿಜಯಪುರ, (ನ.17): ಕಾಂಗ್ರೆಸ್ ಪ್ರಭಾವಿ ನಾಯಕ ಎಂ.ಬಿ. ಪಾಟೀಲ್ ಅವರು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿಗೆ ಇದೀಗ ಸ್ಪಷ್ಟನೆ ಸಿಕ್ಕಿದೆ.
ಇಂದು (ಮಂಗಳವಾರ) ಸುದ್ದಿಗಾರರೊಂದಿಗೆ ಮಾತನಾಡಿ ಎಂ.ಬಿ.ಪಾಟೀಲ್, ಬಿಜೆಪಿ ಸೇರ್ಪಡೆ ವಿಚಾರವಾಗಿ ಸ್ಪಷ್ಟನೆ ಕೊಟ್ಟಿದ್ದು,ನಾನು ಬೇರೆ ಪಕ್ಷದವರು ನನ್ನನ್ನ ಸಂಪರ್ಕಿಸಿಲ್ಲ. ನಾನು ಯಾರನ್ನೂ ಸಂಪರ್ಕಿಸಿಲ್ಲ. ನಾನು ಬಿಜೆಪಿಗೆ ಹೋಗುತ್ತೇನೆ ಎನ್ನುವುದು ಸುಳ್ಳು ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದರು.
ಕಾಂಗ್ರೆಸ್ ತೊರೆಯುತ್ತಾರಾ ಎಂ.ಬಿ.ಪಾಟೀಲ್ ..?
ನಾನು ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಇಂದೂ ಇದ್ದೇನೆ. ಮುಂದೆಯೂ ಕಾಂಗ್ರೆಸ್ ನಲ್ಲೇ ಇರುತ್ತೇನೆ ಎಂದು ಹೇಳಿದರು.
ವಿಜಯಪುರ ಜಿಲ್ಲೆಯ ಶಾಸಕರಾಗಿರುವ ಎಂ.ಬಿ.ಪಾಟೀಲ್ 2018ರ ವಿಧಾನಸಭಾ ಚುನಾವಣೆ ಬಳಿಕ ಅಷ್ಟಾಗಿ ಕಾಂಗ್ರೆಸ್ ಕಾರ್ಯಚಟುವಟಿಕೆಗಳ ಕಾಣಿಸಿಕೊಂಡಿಲ್ಲ. ಮೈತ್ರಿ ಸರ್ಕಾರ ರಚನೆ ನಂತರ ಮೈತ್ರಿ ಸ್ಥಾನಕ್ಕಾಗಿ ಬಂಡಾಯ ಎದ್ದಿದ್ದರು. ಅಂದಿನಿಂದ ಅದ್ಯಾಕೋ ಪಕ್ಷದಿಂದ ಅಂತರ ಕಾಪಾಡಿಕೊಂಡಿದ್ದಾರೆ.
ಇದರಿಂದಪಾಟೀಲರು ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರೆ ಎನ್ನುವ ಸುದ್ದಿ ರಾಜ್ಯ ರಾಜ್ಯರಾಜಕಾಣದಲ್ಲಿ ಹರಿದಾಡುತ್ತಿತ್ತು. ಆದ್ರೆ, ಇದೀಗ ಎಂ.ಬಿ.ಪಾಟೀಲ್ ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.