ಕೇಂದ್ರ ಸಚಿವರೊಂದಿಗೆ ಕಾಣಿಸಿಕೊಂಡ ರಾಜ್ಯ ಕಾಂಗ್ರೆಸ್ ಮುಖಂಡ

Published : Jan 19, 2019, 07:37 AM IST
ಕೇಂದ್ರ ಸಚಿವರೊಂದಿಗೆ ಕಾಣಿಸಿಕೊಂಡ ರಾಜ್ಯ ಕಾಂಗ್ರೆಸ್ ಮುಖಂಡ

ಸಾರಾಂಶ

ಅತೃಪ್ತ ಕಾಂಗ್ರೆಸ್ ಮುಖಂಡರೋರ್ವರು ಕೇಂದ್ರ ಸಚಿವರೊಂದಿಗೆ ಕಾಣಿಸಿಕೊಂಡಿದ್ದು ಇದರಿಂದ ಪಕ್ಷ ಬಿಡುವ ಸೂಚನೆಗಳು ಪಕ್ಕಾ ಆದಂತಾಗಿದೆ. ಚುನಾವಣೆಗೆ ಸ್ಪರ್ಧಿಸದಂತೆ ನಿಷೇಧ ಹೇರಬಹುದಾದ ಆತಂಕವೂ ಅತೃಪ್ತ ಮುಖಂಡ ರಮೇಶ್ ಜಾರಕಿಹೊಳಿಗೆ ಎದುರಾಗಿದೆ. 

ಬೆಂಗಳೂರು :  ವಿಪ್‌ ಉಲ್ಲಂಘಿಸಿ ಶಾಸಕಾಂಗ ಸಭೆಗೆ ಗೈರು ಹಾಜರಾಗಿರುವುದರಿಂದ ಅದರಿಂದ ಮುಂದಾಗಬಹುದಾದ ಕಾನೂನಾತ್ಮಕ ತೊಂದರೆಗಳಿಗೆ ಸಂಬಂಧಿಸಿದಂತೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ಸಿನ ಅತೃಪ್ತ ಶಾಸಕರ ನಾಯಕತ್ವ ವಹಿಸಿಕೊಂಡಿದ್ದ ರಮೇಶ್‌ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಮುಂಬೈಯಲ್ಲಿ ಬಿಜೆಪಿ ರಾಷ್ಟ್ರೀಯ ನಾಯಕರೂ ಆಗಿರುವ ಕೇಂದ್ರ ಸಚಿವ ಪಿಯೂಷ್‌ ಗೋಯಲ್‌ ಅವರೊಂದಿಗೆ ಸಮಾಲೋಚನೆ ನಡೆಸಿದ್ದಾರೆ ಎನ್ನಲಾಗಿದೆ.

ರಮೇಶ್‌ ಜಾರಕಿಹೊಳಿ ಸೇರಿದಂತೆ ನಾಲ್ವರು ಕಾಂಗ್ರೆಸ್‌ ಶಾಸಕರು ಶಾಸಕಾಂಗ ಸಭೆಯಿಂದ ದೂರ ಉಳಿದಿದ್ದರು. 

ಹೀಗಾಗಿ, ಅವರ ವಿರುದ್ಧ ಕಾಂಗ್ರೆಸ್‌ ಪಕ್ಷ ಉಚ್ಚಾಟನೆಯಂಥ ಕಠಿಣ ಕ್ರಮಕ್ಕೆ ಮುಂದಾಗಬಹುದು. ಜೊತೆಗೆ ಅದರಿಂದ ಈ ನಾಲ್ವರು ಆರು ವರ್ಷಗಳ ಕಾಲ ಯಾವುದೇ ಚುನಾವಣೆಗೆ ಸ್ಪರ್ಧಿಸದಂತೆ ನಿರ್ಬಂಧ ಹೇರಬಹುದು ಎಂಬ ಆತಂಕದ ಹಿನ್ನೆಲೆಯಲ್ಲಿ ಪಿಯೂಷ್‌ ಗೋಯಲ್‌ ಅವರೊಂದಿಗೆ ಚರ್ಚೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

‘ನೆಕ್ಸ್ಟ್‌ ಸಿಎಂ’ ಬೆಟ್ಟಿಂಗ್‌ ನಿಯಂತ್ರಿಸಿ: ವಿ.ಸುನೀಲ್‌ ಕುಮಾರ್‌ ಆಗ್ರಹ
ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ