ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ಸಾಲ: ಆದೇಶಕ್ಕೆ ತಿದ್ದುಪಡಿಗೆ ಮಾಜಿ ಸಚಿವ ಆಗ್ರಹ

Published : May 25, 2020, 10:01 PM IST
ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ಸಾಲ: ಆದೇಶಕ್ಕೆ ತಿದ್ದುಪಡಿಗೆ ಮಾಜಿ ಸಚಿವ ಆಗ್ರಹ

ಸಾರಾಂಶ

ರೈತರಿಗೆ ಶೂನ್ಯ ಬಡ್ಡಿದರದಲ್ಲಿ 3 ಲಕ್ಷ ಸಾಲ ನೀಡಿರುವ ಆದೇಶದಲ್ಲಿ ಕೆಲ ಅಂಶಗಳನ್ನು ತಿದ್ದುಪಡಿ ಮಾಡುವಂತೆ ಮಾಜಿ ಸಚಿವರೊಬ್ಬರು ಸಿಎಂ ಬಿಎಸ್ ಯಡಿಯೂಪರಪ್ಪ ಅವರಿಗೆ ಪತ್ರ ಬರೆದು ಆಗ್ರಹಸಿದ್ದಾರೆ.

ಬೆಂಗಳೂರು, (ಮೇ 25): ಲಾಕ್‌ಡೌನ್ ಜಾರಿಯಲ್ಲಿರುವಾಗಲೇ ರೈತರ ಸಾಲ ವಸೂಲಿ ಕುರಿತು ಸರ್ಕಾರ ಹೊರಡಿಸಿರುವ ಆದೇಶ ಹಿಂದಕ್ಕೆ ಪಡೆಯುವಂತೆ ಮಾಜಿ ಸಚಿವ ಆರ್. ವಿ. ದೇಶಪಾಂಡೆ ಅವರು ಸಿಎಂಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

 ಶೂನ್ಯ ಬಡ್ಡಿ ದರದ ಸಾಲ ಮರುಪಾವತಿಗೆ, ಸಾಲ ಪಡೆಯಲು ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್‌ನ್ನು ಆಧಾರವಾಗಿಟ್ಟು ಕೊಳ್ಳಬಾರದು. ಹಿಂದಿನ ನಿಯಮಾವಯಂತೆ ಸಾಲ ಮರುಪಾವತಿ ಹಾಗೂ ಸಾಲ ನೀಡಿಕೆಗೆ ಸರ್ಕಾರ ಮುಂದಾಗಬೇಕು ಎಂದು ಮಾಜಿ ಸಚಿವ ಆರ್.ವಿ. ದೇಶಪಾಂಡೆ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಪತ್ರದಲ್ಲಿ ಒತ್ತಾಯಿಸಿದ್ದಾರೆ.

ರೈತ ಸರ್ಕಾರಿ ನೌಕರನಾಗಿದ್ದರೂ ಸಿಗುತ್ತೆ 3 ಲಕ್ಷ ಬಡ್ಡಿ ರಹಿತ ಕೃಷಿ ಸಾಲ

ಕೃಷಿ ಭೂಮಿ ಇದ್ದ ಕ್ಷೇತ್ರದಲ್ಲಿ ವಾಸವಾಗಿರದೆ ಇರುವವರಿಂದ ಶೇ. 7ರಷ್ಟು ಬಡ್ಡಿ ವಸೂಲಿ ಮಾಡುವಂತೆ ಹಾಗೂ ಆ ಕ್ಷೇತ್ರದಲ್ಲಿ ವಾಸವಾಗಿರದೇ ಇರುವವರಿಗೆ ಹೊಸ ಸಾಲ ನೀಡದಂತೆ ಸರ್ಕಾರಿ ಆದೇಶ ನೀಡಲಾಗಿದೆ. ತಕ್ಷಣ ಸರ್ಕಾರದ ಆದೇಶಕ್ಕೆ ತಿದ್ದುಪಡಿ ತರಬೇಕೆಂದು ದೇಶಪಾಂಡೆ ಅವರು ಒತ್ತಾಯಿಸಿದ್ದಾರೆ.

ಕೃಷಿ ಸಾಲವನ್ನು ಕೃಷಿ ಚಟುವಟಿಕೆಗೆ ನೀಡಲಾಗುತ್ತದೆಯೇ ಹೊರತು ಅವರ ಮನೆಯನ್ನು ಆಧಾರವಾಗಿಟ್ಟುಕೊಂಡು ಸಾಲ ನೀಡುವುದಿಲ್ಲ. ಆದರೆ ಹೊಸ ಆದೇಶದಲ್ಲಿ ಸಾಲ ನೀಡುವಾಗ ಸಹಕಾರ ಸಂಘಗಳು ಆಧಾರ್ ಕಾರ್ಡ್ ವಿಳಾಸವನ್ನು ಪರಿಗಣಿಸಿ ಸಾಲ ನೀಡಬೇಕೆಂದು ಆದೇಶಿಸಲಾಗಿದೆ, ಇದು ರೈತರು ಹಾಗೂ ಸಹಕಾರ ಸಂಘಗಳ ನಡುವಿನ ತಿಕ್ಕಾಟಕ್ಕೆ ಕಾರಣವಾಗುತ್ತದೆ.

ಕೂಡಲೇ ಸರ್ಕಾರ ಇದಕ್ಕೆ ತಿದ್ದುಪಡಿ ತಂದು ಕೃಷಿ ಚಟುವಟಿಕೆ ನಡೆಸುವ ಪ್ರತಿಯೊಬ್ಬರಿಗೂ ಸಾಲ ನೀಡಲು ಸೂಚಿಸಬೇಕಾಗಿ ಮನವಿ ಮಾಡುತ್ತೇನೆ. ಅಲ್ಲದೆ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಿಸುವಾಗ ಪಡಿತರ ಚೀಟಿಯಲ್ಲಿನ ವಿಳಾಸ ಹಾಗೂ ಆಧಾರ್ ಕಾರ್ಡ್ ವಿಳಾಸವನ್ನೇ ಸಾಲ ನೀಡಲು, ಸಾಲ ಮರುಪಾತಿಗೆ ಪ್ರಮುಖ ಆಧಾರವನ್ನಾಗಿ ಪರಿಗಣಿಸಬಾರದು. ಇದನ್ನು ಪುನರ್ ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

CM-DCM ಬ್ರೇಕ್‌ಫಾಸ್ಟ್ ಮೀಟಿಂಗ್ ಬಳಿಕ ಸಿದ್ದರಾಮಯ್ಯ ಪುತ್ರ ಶಾಕಿಂಗ್ ಹೇಳಿಕೆ
ಸಿಎಂ ಸಿದ್ದರಾಮಯ್ಯಗೆ ಸುಪ್ರೀಂಕೋರ್ಟ್‌ ನೋಟೀಸ್: ವರುಣಾ ಕ್ಷೇತ್ರದ ಆಯ್ಕೆ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ