'ಬೈ ಎಲೆಕ್ಷನ್ ರಿಸಲ್ಟ್ ನಂತ್ರ ಸಿಎಂ ಬದಲಾವಣೆ, ದೆಹಲಿ ಮಾಹಿತಿ ಆಧಾರದ ಮೇಲೆ ಹೇಳ್ತಿದ್ದೇನೆ'

Published : Nov 04, 2020, 04:59 PM ISTUpdated : Nov 04, 2020, 07:21 PM IST
'ಬೈ ಎಲೆಕ್ಷನ್ ರಿಸಲ್ಟ್ ನಂತ್ರ ಸಿಎಂ ಬದಲಾವಣೆ, ದೆಹಲಿ ಮಾಹಿತಿ ಆಧಾರದ ಮೇಲೆ ಹೇಳ್ತಿದ್ದೇನೆ'

ಸಾರಾಂಶ

ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ . ದೆಹಲಿ ಮಾಹಿತಿ ಆಧಾರದ ಮೇಲೆ ಹೇಳ್ತಿದ್ದೇನೆ ಎಂದು ಮಾಜಿ ಸಿಎಂ ಹೇಳುವ ಮೂಲಕ ರಾಜ್ಯ ರಾಜಕಾರಣದಲ್ಲಿ ಸಂಚನ ಮೂಡಿಸಿದ್ದಾರೆ.

ಬೆಂಗಳೂರು, (ನ.04): ಜಿದ್ದಾಜಿದ್ದಿನ ಕಣವಾಗಿದ್ದ ಶಿರಾ ಹಾಗೂ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಶಾಂತಿಯುತವಾಗೇನೋ ಮುಗಿದಿದೆ. ಚಳಿ, ಮಳೆ, ಬಿಸಿಲನ್ನೂ ಲೆಕ್ಕಿಸದೇ ಮತ ಬೇಟೆಯಲ್ಲಿ ತೊಡಗಿದ್ದ ಅಭ್ಯರ್ಥಿಗಳು ಈಗ ಸೋಲು- ಗೆಲುವಿನ ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

"

ನವೆಂಬರ್ 10ಕ್ಕೆ ಫಲಿತಾಂಶ ಪ್ರಕಟವಾಗಿದೆ. ಆದ್ರೆ, ಅದಕ್ಕೂ ಮೊದಲು ಅಭ್ಯರ್ಥಿಗಳ ಪರ ಬಾಜಿದಾರರು ಸೋಲು-ಗೆಲುವಿನ ಲೆಕ್ಕಾಚಾರ ಜೋರಾಗಿದೆ.ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ರಾಜಕಾರಣದಲ್ಲಿ ಹೊಸ ಬಾಂಬ್ ಸಿಡಿಸಿದ್ದಾರೆ.

ಶಿರಾ, ಆರ್‌ಆರ್‌ ನಗರ ಬೈ ಎಲೆಕ್ಷನ್ ರಿಸಲ್ಟ್: ಪಕ್ಷದ ಆಂತರಿಕ ವರದಿ ತೆರೆದಿಟ್ಟ ಸಿಟಿ ರವಿ

ಇಂದು (ಬುಧವಾರ) ಮೈಸೂರಿನಲ್ಲಿ ಮಾತನಾಡಿದ ಅವರು, ಉಪಚುನಾವಣೆ ಫಲಿತಾಂಶದ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಆಗಲಿದೆ ಎಂದು ಹೇಳುವ ಮೂಲಕ ಸಂಚಲನ ಮೂಡಿಸಿದ್ದಾರೆ.

ಬಿಜೆಪಿಯಲ್ಲಿ ಸಿಎಂ ಬದಲಾವಣೆ ಮಾಡುತ್ತಾರೆ. ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯೋದಿಲ್ಲ. ನನಗೆ ಈ ಬಗ್ಗೆ ಕಾನ್ಫಿಡೆಂಟ್ ಇದೆ. ಯಡಿಯೂರಪ್ಪ ಬದಲಾಗ್ತಾರೆ. ದೆಹಲಿ ಮಾಹಿತಿ ಆಧಾರದ ಮೇಲೆ ಹೇಳ್ತಿದ್ದೇನೆ ಎಂದು ಹೇಳಿದರು.

ನಾನು ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದು, ಅದು ಒಂದು ಕಾರಣ ಇರಬಹುದು. ಹಲವು ದಿನದಿಂದ ಸಿಎಂ ಬದಲಾವಣೆ ಮಾಡುವ ಚಿಂತನೆಯಲ್ಲಿ ಬಿಜೆಪಿ ಇದೆ. ಹಾಗಾಗಿ ಉಪಚುನಾವಣೆ ಫಲಿತಾಂಶದ ನಂತರ ಯಡಿಯೂರಪ್ಪ ಸಿಎಂ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕುಡುಕರ ಲಿವರ್‌ ಚಿಕಿತ್ಸೆಗೆ ಹಣ ಕೇಳಿದ ಶಾಸಕರು: ಪರಿಷತ್‌ನಲ್ಲಿ ಸ್ವಾರಸ್ಯಕರ ಚರ್ಚೆ
ಸಾಲುಮರದ ತಿಮ್ಮಕ್ಕ ಹೆಸರಲ್ಲಿ ಪ್ರತಿ ವರ್ಷ ಪ್ರಶಸ್ತಿ ಪ್ರದಾನ: ಸಿಎಂ ಸಿದ್ದರಾಮಯ್ಯ