RR ನಗರದಲ್ಲಿ JDS-BJP ಹೊಂದಾಣಿಕೆ? ಜೊತೆಗೆ ಗಂಭೀರ ಅನುಮಾನ

Kannadaprabha News   | Asianet News
Published : Nov 11, 2020, 08:23 AM IST
RR ನಗರದಲ್ಲಿ JDS-BJP ಹೊಂದಾಣಿಕೆ? ಜೊತೆಗೆ ಗಂಭೀರ ಅನುಮಾನ

ಸಾರಾಂಶ

ಆರ್‌ ಆರ್‌ ನಗರದಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಮಾಡಿಕೊಂಡಿತ್ತೆನ್ನಲಾಗಿದ್ದು ಇದೀಗ ಜೊತೆಗೆ ಮತ್ತೊಂದು ಅನುಮಾನವೂ ವ್ಯಕ್ತವಾಗಿದೆ

ಬಾಗಲಕೋಟೆ/ಬೆಂಗಳೂರು (ನ.11):   ಆರ್‌.ಆರ್‌.ನಗರ ಉಪ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್‌ ಹೊಂದಾಣಿಕೆ ಆಗಿರುವಂತಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಶಂಕೆ ವ್ಯಕ್ತಪಡಿಸಿದ್ದಾರೆ. 

ಆರ್‌.ಆರ್‌.ನಗರದಲ್ಲಿ ಜೆಡಿಎಸ್‌ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಿತ್ತು, ಅಲ್ಲಿ ಜೆಡಿಎಸ್‌ ಹೆಚ್ಚಿನ ಮತಗಳನ್ನೇ ಪಡೆದಿಲ್ಲ, ಡಿಪಾಸಿಟ್‌ ಕೂಡ ಕಳೆದುಕೊಂಡಿದೆ. ಕುಮಾರಸ್ವಾಮಿಗೆ ಬಿಜೆಪಿ ಗೆಲ್ಲಬೇಕಿತ್ತು. ಹಾಗಾಗಿ ಉಪ ಚುನಾವಣೆ ವೇಳೆ ನನ್ನನ್ನು ಟಾರ್ಗೆಟ್‌ ಮಾಡಿದ್ದರು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇವಿಎಂ ಮೇಲೆ ಸಿದ್ದು ಪರೋಕ್ಷ ಅನುಮಾನ!

ಬಿಹಾರ ಚುನಾವಣೆಯಲ್ಲಿ ಮಹಾಘಟಬಂಧನ್‌ ಪರ ಸಮೀಕ್ಷೆಗಳು ಬಂದಿದ್ದವು. ಎಲ್ಲೂ ಎನ್‌ಡಿಎ ಚುನಾವಣೆಯಲ್ಲಿ ಗೆಲ್ಲುತ್ತದೆ ಎಂದು ಹೇಳಿರಲಿಲ್ಲ. ಆರಂಭಿಕ ಹಂತದಲ್ಲಿ 40 ಸ್ಥಾನಗಳಲ್ಲಿ ಮಹಾಗಠಬಂಧನ್‌ ಮುಂದಿತ್ತು. ಆದರೆ ನಂತರ ಮಹಾಗಠಬಂಧನ್‌ ಹಿಂದೆ ಬಿತ್ತು.

ಉಪಕದನ ಸೋಲಿನ ಹಿಂದೆ ಕೈ ನಾಯಕರದ್ದೇ ಪ್ಲಾನ್ ಇದೆಯಾ..? ...

ಇದು ತೀವ್ರ ಅನುಮಾನಕ್ಕೆ ಕಾರಣವಾಗಿದೆ ಎಂದು ಪರೋಕ್ಷವಾಗಿ ಇವಿಎಂ(ಮತಯಂತ್ರ) ಮೇಲೆ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗ್ರಾಪಂ ಅಧ್ಯಕ್ಷರೂ ಮತ್ತು ಹಸಿರು ಪೆನ್ನೂ...!
Karnataka News Live: ನಾನೀಗ ಮನೆಯನ್ನು ಕಂಟ್ರೋಲ್‌ ಮಾಡಲಾಗ್ತಿಲ್ಲ, ವಿಲನ್‌ ಬಂದ್ರು ಎಂದು ನಡುಗಿದ Bigg Boss