
ಮಂಡ್ಯ, (ಫೆ.13): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಸಮಾವೇಶವನ್ನು ಕೈಬಿಟ್ಟಿದ್ದು, ಅದರ ಬದಲಾಗಿ ಬೇರೆ ಪ್ಲಾನ್ ಮಾಡಿಕೊಂಡಿದ್ದಾರೆ.
ಅಹಿಂದ ಸಮಾವೇಶದ ಬದಲಾಗಿ ಕಾಂಗ್ರೆಸ್ ಸಮಾವೇಶ ಮಾಡುವುದಾಗಿ ಸ್ವತಃ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಹೌದು... ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ನಾನೆಂದೂ ಎಲ್ಲಿಯೂ ಸಹ ಅಹಿಂದ ಸಮಾವೇಶ ಮಾಡುತ್ತೇನೆ ಎಂದು ಹೇಳಿಲ್ಲ. ನನಗೆ ಅಹಿಂದ ಸಮಾವೇಶದ ಅವಶ್ಯಕತೆ ಇಲ್ಲ. ನಾನು ಸೇರಿದಂತೆ ಕಾಂಗ್ರೆಸ್ ಪಕ್ಷವೇ ಅಹಿಂದ ಪರ ಇದೆ ಎಂದು ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ‘ಹಿಂದ’ ಹೋರಾಟ, ಮಾರ್ಚ್ ಅಂತ್ಯಕ್ಕೆ ಬೃಹತ್ ಸಮಾವೇಶ!
ಕಾಂಗ್ರಸ್ ಪಕ್ಷ ಸಹ ಅದಕ್ಕೆ ಬದ್ಧವಾಗಿ ಅಹಿಂದ ಪರ ಇದೆ. ಕೆಲವರಿಗೆ ನನ್ನ ಬಗ್ಗೆ ಭಯವಿದೆ, ಆ ಭಯಕ್ಕಾಗಿ ಸಿದ್ದರಾಮಯ್ಯ ಅಹಿಂದ ಸಮಾವೇಶ ಮಾಡುತ್ತಾರೆ ಎಂದು ಕಲ್ಪಿಸಿಕೊಂಡು ಹೇಳುತ್ತಾರೆ. ನಾನು ಅಹಿಂದ ಸಮಾವೇಶದ ಬದಲು ರಾಜ್ಯಾದ್ಯಂತ ಕಾಂಗ್ರೆಸ್ ಸಮಾವೇಶ ಮಾಡುವೆ ಎಂದು ಹೇಳಿದರು.
ಮಾರ್ಚ್ ಅಂತ್ಯಕ್ಕೆ ಅಹಿಂದ ಬೃಹತ್ ಸಮಾವೇಶ ಮಾಡುವ ಸಂಬಂಧ ಸಿದ್ದರಾಮಯ್ಯ ಅವರು ಎಚ್.ಸಿ. ಮಹಾದೇವಪ್ಪ ಅವರನ್ನ ಭೇಟಿ ಮಾಡಿದ್ದಾರೆ ಎನ್ನಲಾಗಿತ್ತು. ಸಿದ್ದರಾಮಯ್ಯನವರ ಅಹಿಂದ ನಡೆಗೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲವ ಮೂಡಿಸಿತ್ತು. ಅಷ್ಟೇ ಅಲ್ಲದೇ ಕೆಲವರೂ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.