Siddu vs BJP ನೆಲದ ಸಮಾಜ ಸುಧಾರಕರನ್ನು ಬಿಜೆಪಿ ಅಂತರಂಗದಲ್ಲಿ ದ್ವೇಷಿಸುತ್ತಿದೆ, ಸಿದ್ದು ಗುದ್ದು

Published : Jan 19, 2022, 04:50 PM IST
Siddu vs BJP ನೆಲದ ಸಮಾಜ ಸುಧಾರಕರನ್ನು  ಬಿಜೆಪಿ  ಅಂತರಂಗದಲ್ಲಿ ದ್ವೇಷಿಸುತ್ತಿದೆ, ಸಿದ್ದು ಗುದ್ದು

ಸಾರಾಂಶ

* ಬಿಜೆಪಿ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ * ನೆಲದ ಸಮಾಜ ಸುಧಾರಕರನ್ನು  ಬಿಜೆಪಿ  ಅಂತರಂಗದಲ್ಲಿ ದ್ವೇಷಿಸುತ್ತಿದೆ ಎಂದ ಸಿದ್ದು * ಸರಣಿ ಟ್ವೀಟ್ ಮೂಲಕ ಬಿಜೆಪಿ ವಿರುದ್ಧ ಆಕ್ರೋಶ

ಬೆಂಗಳೂರು, (ಜ.19):  ಈ ನೆಲದ ಸಮಾಜ ಸುಧಾರಕರನ್ನು(Social reformers) ಕೋಮುವಾದಿ,ಜಾತಿವಾದಿ ಬಿಜೆಪಿ (BJP) ಅಂತರಂಗದಲ್ಲಿ ದ್ವೇಷಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ (Siddaramaiah) ವಾಗ್ದಾಳಿ ನಡೆಸಿದ್ದಾರೆ.

ಸರಣಿ ಟ್ವೀಟ್ (Twitter) ಮಾಡಿರುವ ಸಿದ್ದರಾಮಯ್ಯ,  ನಾರಾಯಣ ಗುರು, ಸುಭಾಷ್ ಚಂದ್ರಬೋಸ್ ಮಾತ್ರವಲ್ಲ. ಬುದ್ಧ, ಬಸವ, ಅಂಬೇಡ್ಕರ್, ಫುಲೆ, ಪೆರಿಯಾರ್, ಕನಕ, ಕಬೀರ ಸೇರಿದಂತೆ ಎಲ್ಲರನ್ನೂ ಅಂತರಂಗದಲ್ಲಿ ದ್ವೇಷಿಸುತ್ತಿದೆ. ಬಹಿರಂಗವಾಗಿ ಎಲ್ಲರನ್ನೂ ಕೊಂಡಾಡುತ್ತಾ ನಾಟಕವಾಡುತ್ತಿದೆ. ಈ ಆತ್ಮವಂಚನೆಯನ್ನು ನಿಲ್ಲಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Karnataka Politics: ಸಿದ್ದರಾಮಯ್ಯ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಜೋಶಿ

ನಾರಾಯಣ ಗುರು (Narayana Guru), ಸುಭಾಷ್ ಚಂದ್ರ ಬೋಸ್ ಇಲ್ಲವೇ ಚಿದಂಬರಂ ಬಗ್ಗೆ ಸೈದ್ಧಾಂತಿಕ ಇಲ್ಲವೇ ಬೇರೆ ವಿರೋಧವಿದ್ದರೆ ಕೇಂದ್ರ ಸರ್ಕಾರ ಧೈರ್ಯವಾಗಿ ಅದನ್ನು ಬಹಿರಂಗಪಡಿಸಲಿ. ಇದರ ಬದಲಿಗೆ ತನ್ನ ಸೈದ್ಧಾಂತಿಕ ವಿರೋಧ ಬಚ್ಚಿಟ್ಟುಕೊಂಡು ತಾಂತ್ರಿಕ ಕಾರಣ ನೀಡಿ ತಿಪ್ಪೆ ಸಾರಿಸುವ ಕೆಲಸ ಮಾಡಬಾರದು ಎಂದು ಸಿದ್ದರಾಮಯ್ಯ ಸವಾಲು ಹಾಕಿದರು.

ಕೇರಳದ ನಾರಾಯಣ ಗುರುಗಳ ಸ್ತಬ್ಧ ಚಿತ್ರವನ್ನು ಮಾತ್ರವಲ್ಲ, ಪಶ್ಚಿಮ ಬಂಗಾಳದ ಸುಭಾಷ್ ಚಂದ್ರ ಬೋಸ್ ಸ್ತಬ್ಧ ಚಿತ್ರ ಮತ್ತು ತಮಿಳುನಾಡಿನ ಸ್ವಾತಂತ್ರ್ಯ ಹೋರಾಟಗಾರ ಚಿದಂಬರನರ್ ಸ್ತಬ್ಧ ಚಿತ್ರಗಳನ್ನು ತಿರಸ್ಕರಿಸಲಾಗಿದೆ. ತಿರಸ್ಕೃತ ಮೂರು ರಾಜ್ಯಗಳಲ್ಲಿ ಬಿಜೆಪಿಯೇತರ ಪಕ್ಷಗಳ ಸರ್ಕಾರ ಇರುವುದು ಕೇವಲ ಕಾಕತಾಳಿಯ ಎನ್ನುವುದನ್ನು ನಂಬಬಹುದೇ? ಎಂದಿದ್ದಾರೆ.

ಶಂಕರಾಚಾರ್ಯರ ಪ್ರತಿಕೃತಿಯ ಸ್ತಬ್ಧ ಚಿತ್ರಕ್ಕೆ ವೈಯಕ್ತಿಕವಾಗಿ ನನ್ನ ವಿರೋಧ ಇಲ್ಲ. ಆದರೆ ಜಾತಿ ಮತ್ತು ಕೋಮು ಸಾಮರಸ್ಯವನ್ನು ಕಾಪಾಡಿಕೊಂಡು ಹೋಗಬೇಕಾದ ಕೇಂದ್ರ ಬಿಜೆಪಿ ಸರ್ಕಾರ, ಅನಗತ್ಯವಾಗಿ ಶಂಕರಾಚಾರ್ಯರ ಎದುರಿಗೆ ನಾರಾಯಣ ಗುರುಗಳನ್ನು ನಿಲ್ಲಿಸಿ ಇಬ್ಬರು ಮಹಾಪುರುಷರ ಅನುಯಾಯಿಗಳ ನಡುವೆ ಜಗಳ ತಂದುಹಾಕುವ ಅಗತ್ಯ ಏನಿತ್ತು? ಪ್ರಶ್ನೆ ಮಾಡಿದ್ದಾರೆ.

ಕೇರಳ ಸರ್ಕಾರ ಪ್ರಸ್ತುತ ಪಡಿಸಿದ್ದ ಜಟಾಯು ಸ್ತಬ್ದಚಿತ್ರಕ್ಕೆ ಒಪ್ಪಿಗೆ ನೀಡದೆ, ಅದರ ಮುಂದೆ ಶಂಕರಾಚಾರ್ಯರ ಪ್ರತಿಕೃತಿಯನ್ನು ಕೂರಿಸುವಂತೆ ಕೇಂದ್ರ ಸರ್ಕಾರ ಒತ್ತಡ ಹೇರಲು ಕಾರಣ ಏನು? ಕೇರಳ ಸರ್ಕಾರ ಸೂಚಿಸಿದ ನಾರಾಯಣ ಗುರುಗಳ ಪ್ರತಿಕೃತಿಯನ್ನು ನಿರಾಕರಿಸಲು ಕಾರಣ ಏನು? ಕೇಂದ್ರ ಬಿಜೆಪಿ ಸರ್ಕಾರ ಇದನ್ನು ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಸಮಾಜ ಸುಧಾರಕ ನಾರಾಯಣ ಗುರುಗಳ ಸ್ತಬ್ದಚಿತ್ರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ ಜೋಷಿ, ರಾಜ್ಯದ ಸಚಿವರಾದ ಸುನಿಲ್​ ಕುಮಾರ್​ ಮತ್ತು ಕೋಟ ಶ್ರೀನಿವಾಸ ಪೂಜಾರಿ ಮತ್ತು ಕರ್ನಾಟಕ ಬಿಜೆಪಿ ನಾಯಕರು ತರಹೇವಾರಿ ಹೇಳಿಕೆಗಳ ಮೂಲಕ ಬಿಜೆಪಿ ಎನ್ನುವುದು ಸುಳ್ಳುಗಳ ಕಾರ್ಖಾನೆ ಎಂದು ಸಾಬೀತುಪಡಿಸುತ್ತಿದ್ದಾರೆ ಎಂದು ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.

ಗಣರಾಜ್ಯೋತ್ಸವ ಸ್ತಬ್ದಚಿತ್ರಕ್ಕೆ 3 ವರ್ಷಗಳಿಗೊಮ್ಮೆ ಮಾತ್ರ ರಾಜ್ಯಗಳಿಗೆ ಅವಕಾಶ ಎಂದಾದರೆ ನಮ್ಮ ಕರ್ನಾಟಕಕ್ಕೆ ಸತತ 13ನೇ ಬಾರಿ ಸ್ತಬ್ಧಚಿತ್ರ ಪ್ರದರ್ಶನಕ್ಕೆ ಅವಕಾಶ ಹೇಗೆ ನೀಡಲಾಯಿತು? ಎನ್ನುವುದನ್ನು ಸಚಿವರಾದ ಶ್ರೀನಿವಾಸ ಪೂಜಾರಿ ಮತ್ತು ಸುನೀಲ್ ಕುಮಾರ್ ತಿಳಿಸಬೇಕು. ಇಂತಹ ಹಸಿ ಸುಳ್ಳುಗಳು ಸಚಿವರಿಗೆ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದ್ದಾರೆ.

3 ವರ್ಷಗಳಿಗೊಮ್ಮೆ ಮಾತ್ರ ಸ್ತಬ್ಧಚಿತ್ರಕ್ಕೆ ರಾಜ್ಯಗಳಿಗೆ ಅವಕಾಶ ಎನ್ನುತ್ತಾರೆ ರಾಜ್ಯದ ಇಬ್ಬರು ಸಚಿವರು, ಅಲಿಖಿತ ಪೂರ್ವನಿದರ್ಶನ ಇದೆ ಎನ್ನುತ್ತಾರೆ ಕೇಂದ್ರ ಸಚಿವರು, ಕೇರಳ ಸರ್ಕಾರವೇ ನಾರಾಯಣಗುರು ವಿರೋಧಿ ಎನ್ನುತ್ತಾರೆ ಬಿಜೆಪಿ ವಕ್ತಾರರು. ಇದರಲ್ಲಿ ಯಾವುದು ನಿಜ ಎನ್ನುವುದನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಬೇಕು ಎಂದು ಸಿದ್ದರಾಮಯ್ಯ ಟ್ವೀಟ್​ ಮೂಲಕ ಆಗ್ರಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ