ಕೊರೋನಾ ಲಸಿಕೆ ವಿತರಣೆ ಅಭಿಯಾನದ ಬಗ್ಗೆ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್..!

By Suvarna NewsFirst Published Jan 16, 2021, 2:35 PM IST
Highlights

ಕೊರೋನಾ ಲಸಿಕೆ ವಿತರಣೆ ಅಭಿಯಾನಕ್ಕೆ ಸಂಬಂಧಿಸಿದಂತೆ  ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯೆ ಕೊಟ್ಟಿದ್ದಾರೆ.

ಬೆಂಗಳೂರು, (ಜ.16): ದೇಶಾದ್ಯಂತ ಕೊರೋನಾ ಲಸಿಕೆ ವಿತರಣೆ ಕಾರ್ಯಕ್ರಮಕ್ಕೆ ಇಂದು (ಶನಿವಾರ)  ಪ್ರಧಾನಿ ನರೇಂದ್ರ ಮೋದಿ ಚಾಲನೆ ಕೊಟ್ಟಿದ್ದಾರೆ. ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಲಸಿಕೆ ಅಭಿಯಾನಕ್ಕೆ, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಾಲನೆ ನೀಡಿದರು.

ಮೊದಲ ಹಂತದಲ್ಲಿ ದೇಶಾದ್ಯಂತ 3 ಕೋಟಿ ಜನರಿಗೆ ಲಸಿಕೆ ವಿತರಿಸಲಾಗುತ್ತದೆ. ಕೊವಿಶೀಲ್ಡ್ ಹಾಗೂ ಕೊವ್ಯಾಕ್ಸಿನ್ ಲಸಿಕೆಯನ್ನು ನೀಡಲಾಗುತ್ತದೆ.

ಲಸಿಕೆ ಅಭಿಯಾನಕ್ಕೆ ಚಾಲನೆ, ಭರವಸೆಯ ಮಾತುಗಳನ್ನಾಡಿದ ಸಿಎಂ

ಇನ್ನು  ಈ ಬಗ್ಗೆ ಮಾಜಿ ಸಿಎಂ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದು, ಕೊವಿಡ್-19 ವಿರುದ್ಧ ಆರಂಭವಾಗಿರುವ ಲಸಿಕೆ ವಿತರಣಾ ಅಭಿಯಾನಕ್ಕೆ ಶುಭಾಶಯ ಕೋರಿದ್ದಾರೆ. 

ಲಸಿಕೆ ಅಭಿಯಾನವು ಯಶಸ್ವಿಯಾಗಲಿ. ಜನರ ಜೀವಗಳನ್ನು ಉಳಿಸಲಿ. ಆ ಮೂಲಕ, ಭಾರತೀಯರಿಗೆ ಹೊಸ ಬದುಕು ಆರಂಭವಾಗಲಿ ಎಂದು ಟ್ವಿಟ್ಟರ್ ಮೂಲಕ ಶುಭ ಹಾರೈಸಿದ್ದಾರೆ.

Congratulations to everyone for the beginning of nationwide vaccination drive against .

Hope this becomes a success, save lives & renew the livelihoods of all Indians.

— Siddaramaiah (@siddaramaiah)
click me!