
ಬಾಗಲಕೋಟೆ, (ಡಿ.13): ಈಗ ಚುನಾವಣೆ ಇರೋದು ಕಾಂಗ್ರೆಸ್ BJP ನಡುವೆ. JDS ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಇಂದು (ಭಾನುವಾರ) ಗುಳೇದಗುಡ್ಡ ಪಟ್ಟಣದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ JDS ಅಪ್ಪ ಮಕ್ಕಳ ಆಸ್ತಿ. ದೇವೇಗೌಡರು, ಕುಮಾರಸ್ವಾಮಿ ಹೇಳಿದ್ದೇ ನಿಜ. ಏನಾದರೂ ಅವರ ವಿರುದ್ಧ ನಡೆದರೆ ಹೊರಹಾಉತ್ತಾರೆ. ನನ್ನಂಥವನನ್ನೇ ಪಕ್ಷದಿಂದ ಹೊರಹಾಕಿದರು ಎಂದು ಹೇಳಿದರು.
ರಾಷ್ಟ್ರ ರಾಜಕಾರಣಕ್ಕೆ ಹೋಗುವ ಬಗ್ಗೆ ಸಿದ್ದರಾಮಯ್ಯ ಅಚ್ಚರಿ ಹೇಳಿಕೆ...!
ನಾನು ಅಹಿಂದ ಎಂದು ಮಾತಾಡಿದ್ದಕ್ಕೆ ಹೊರಹಾಕಿದರು. ದೇವೇಗೌಡರು ಅಹಿಂದ ಬೇಡ ಎಂದರು. ನಾನು ಯಾರೇ ಬಂದರೂ ನಿಲ್ಲಿಸೋದಿಲ್ಲ ಎಂದು ಉತ್ತರಿಸಿದೆ. ದೇವರೆ ಬಂದು ಹೇಳಿದರೂ ನಿಲ್ಲಿಸೋದಿಲ್ಲ ಅಂದೆ. ಅದಕ್ಕೇ ನನ್ನನ್ನು ಉಚ್ಚಾಟನೆ ಮಾಡಿಬಿಟ್ರು ಎಂದು ತಿಳಿಸಿದರು.
ಆಮೇಲೆ ಕಾಂಗ್ರೆಸ್ಗೆ ಬಂದೆ. ಅಲ್ಲಿ ಎಲ್ಲರೂ ಸ್ವಾಗತ ಮಾಡಿದರು. ಜೊತೆಗೆ, ನನ್ನನ್ನು ಮುಖ್ಯಮಂತ್ರಿಯಾಗಿ ನೀವೆಲ್ಲರೂ ಮಾಡಿದ್ರಿ ಎಂದು ತಿಳಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.