
ಬೆಂಗಳೂರು (ಆ.17) : ರಾಜ್ಯದಲ್ಲಿ ಸರ್ಕಾರ ಬಡವರ ಪರವಾದ ಒಂದು ಕೆಲಸವನ್ನೂ ಮಾಡುತ್ತಿಲ್ಲ.
ಎರಡು ವರ್ಷದಿಂದ ಬಡವರಿಗೆ ಒಂದು ಮನೆಯನ್ನೂ ನೀಡಿಲ್ಲ. ಬಡವರ ರಕ್ತ ಹೀರುತ್ತಿರುವ ಬಿಜೆಪಿಯನ್ನು ಮೊದಲು ಅಧಿಕಾರದಿಂದ ತೊಲಗಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಒಂದು ವರ್ಷ ಮಾತ್ರ ಇರಬಹುದು. ನಾವೇನೂ ಈ ಸರ್ಕಾರವನ್ನು ತೆಗೆಯುವುದಿಲ್ಲ. ಅವರಾಗಿಯೇ ಬಿದ್ದರೆ ನಾವು ಸುಮ್ಮನಿರುವುದಿಲ್ಲ ಎಂದು ಹೇಳಿದರು.
ಅನ್ನಭಾಗ್ಯ ಅಕ್ಕಿ ಕಡಿತಕ್ಕೆ ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಯಡಿಯೂರಪ್ಪ ದಾರಿಯಲ್ಲಿ ಸಾಗುತ್ತೇನೆ ಎನ್ನುತ್ತಾರೆ. ಯಡಿಯೂರಪ್ಪ ಅವಧಿಯಲ್ಲಿ ಅವರು ಹಾಗೂ ಅವರ ಮಗ ಲೂಟಿ ಮಾಡಿದ್ದು ಬಿಟ್ಟರೆ ಬೇರೆ ಯಾವ ಕೆಲಸವನ್ನೂ ಮಾಡಿಲ್ಲ. ನೀವೂ ಲೂಟಿ ಹೊಡೆಯುತ್ತೀರಾ? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಲೇವಡಿ ಮಾಡಿದರು.
ವಸತಿ ಇಲಾಖೆಯಲ್ಲಿ ಒಂದು ಮನೆಯನ್ನೂ ಮಂಜೂರು ಮಾಡದ ಬಗ್ಗೆ ಕಿಡಿ ಕಾರಿದ ಅವರು, ವಸತಿ ಸಚಿವ ವಿ. ಸೋಮಣ್ಣ ಅವರು ಕೇವಲ ಸುಳ್ಳು ಹೇಳುತ್ತಾ ಬಡವರನ್ನು ವಂಚಿಸುತ್ತಿದ್ದಾರೆ. ಎರಡು ವರ್ಷದ ಅವಧಿಯಲ್ಲಿ ಒಂದು ಮನೆಯನ್ನೂ ವಿತರಣೆ ಮಾಡಿಲ್ಲ. ಈ ಸರ್ಕಾರದಲ್ಲಿ ಹಣವಿಲ್ಲವೇ ಅಥವಾ ಕಮಿಷನ್ ಬಂದಿಲ್ಲವೇ ಎಂದು ಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.