ಜಯಚಂದ್ರಗೆ ಟಿಕೆಟ್ ನೀಡಲು ನಿರಾಕರಿಸಿತ್ತಾ ಕಾಂಗ್ರೆಸ್..?

Kannadaprabha News   | Asianet News
Published : Oct 09, 2020, 08:43 AM ISTUpdated : Oct 09, 2020, 08:44 AM IST
ಜಯಚಂದ್ರಗೆ ಟಿಕೆಟ್ ನೀಡಲು ನಿರಾಕರಿಸಿತ್ತಾ ಕಾಂಗ್ರೆಸ್..?

ಸಾರಾಂಶ

ಕಾಂಗ್ರೆಸ್‌ನಲ್ಲಿ ಟಿಕೆಟ್ ವಿಚಾರದ ಬಗ್ಗೆ ಸಾಕಷ್ಟು ಚರ್ಚೆಗಳಾಗುತ್ತಿದ್ದು,  ಜಯಚಂದ್ರಗೆ ಟಿಕೆಟ್ ನೀಡಲು ಹಿರಿಯ ಮುಖಂಡರು ನಿರಾಕರಿಸಿದ್ದರು ಎನ್ನಲಾಗುತ್ತಿದೆ. 

 ಬೆಂಗಳೂರು (ಅ.09):  ಶಿರಾ ಕ್ಷೇತ್ರಕ್ಕೆ ಟಿ.ಬಿ. ಜಯಚಂದ್ರ ಅವರಿಗೆ ಟಿಕೆಟ್‌ ನೀಡುವುದು ಬೇಡ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೆವಾಲಾ ಅವರು ಹೇಳಿರಲಿಲ್ಲ. ಹೊಸ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಕೇಳಿದ್ದರು. ಟಿ.ಬಿ. ಜಯಚಂದ್ರ ಅವರ ಬಗ್ಗೆ ತಿಳಿಸಿದ ಬಳಿಕ ಹೈಕಮಾಂಡ್‌ನವರೇ ಟಿಕೆಟ್‌ ಅಂತಿಮಗೊಳಿಸಿದ್ದಾರೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಶಿರಾ ಕ್ಷೇತ್ರಕ್ಕೆ ಹೊಸ ಅಭ್ಯರ್ಥಿ ಯಾರೂ ಇಲ್ಲವೇ ಎಂದು ಸುರ್ಜೆವಾಲಾ ಕೇಳಿದ್ದರು. ಆದರೆ, ಟಿ.ಬಿ. ಜಯಚಂದ್ರ ಅವರು ಪಕ್ಷದ ಹಿರಿಯ ನಾಯಕರು. 1978ರಲ್ಲೇ ಶಾಸಕರಾಗಿದ್ದವರು. ಜೊತೆಗೆ ರಾಜೇಶ್‌ಗೌಡ ನಾಮ್‌ಕೆವಾಸ್ತೆ ನಮ್ಮ ಪಕ್ಷದಲ್ಲಿದ್ದವರು ಎಂದು ಹೇಳಿದ್ದೆವು’ ಎಂದರು.

ಸಿದ್ದರಾಮಯ್ಯನವರ ಮೊರೆ ಹೋದ ಆರ್‌.ಆರ್‌. ನಗರ ಬೈ ಎಲೆಕ್ಷನ್ ಅಭ್ಯರ್ಥಿ..! ..

‘ಈ ಹಿಂದೆ ರಾಜೇಶ್‌ಗೌಡ ನನ್ನ ಬಳಿ ಬಂದು ಟಿಕೆಟ್‌ ಕೇಳಿದ್ದರು. ಟಿ.ಬಿ. ಜಯಚಂದ್ರ ಇರುವ ಹಿನ್ನೆಲೆಯಲ್ಲಿ ನಿಮಗೆ ಟಿಕೆಟ್‌ ಕೊಡಲು ಸಾಧ್ಯವಿಲ್ಲ ಎಂದು ರಾಜೇಶ್‌ ಗೌಡ ಅವರಿಗೆ ಹೇಳಿದ್ದೆವು. ರಾಜೇಶ್‌ಗೌಡ ನಮ್ಮ ಪಕ್ಷದಲ್ಲಿ ನಾಮಕಾವಾಸ್ತೆ ಇದ್ದು ಜೆಡಿಎಸ್‌, ಬಿಜೆಪಿ ಪಕ್ಷದಲ್ಲೂ ಟಿಕೆಟ್‌ ಕೇಳಿದ್ದರು. ಈ ಎಲ್ಲ ವಿಚಾರವನ್ನು ಸುರ್ಜೆವಾಲಾ ಅವರಿಗೆ ತಿಳಿಸಿದ ಮೇಲೆ ಟಿ.ಬಿ. ಜಯಚಂದ್ರ ಅವರಿಗೆ ಟಿಕೆಟ್‌ ಅಂತಿಮ ಮಾಡಲಾಗಿದೆ’ ಎಂದು ಸ್ಪಷ್ಟಪಡಿಸಿದರು.

ತುಮಕೂರು ಕಾಂಗ್ರೆಸ್‌ನಲ್ಲಿ ಗೊಂದಲಗಳಿಲ್ಲ

‘ಇನ್ನು ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ನಾಯಕರೆಲ್ಲರೂ ಒಟ್ಟಾಗಿ ಹೋರಾಟ ಮಾಡುತ್ತಿದ್ದಾರೆ. ಅಲ್ಲಿನ ಮನಸ್ತಾಪಗಳು ಎಲ್ಲವೂ ಸರಿ ಹೋಗಿವೆ. ಡಾ.ಜಿ. ಪರಮೇಶ್ವರ್‌, ಕೆ.ಎನ್‌. ರಾಜಣ್ಣ ಸೇರಿ ಎಲ್ಲರೂ ಟಿ.ಬಿ. ಜಯಚಂದ್ರ ಪರವಾಗಿ ಕೆಲಸ ಮಾಡುತ್ತಿದ್ದಾರೆ. ಜೆಡಿಎಸ್‌ ಹಾಗೂ ಬಿಜೆಪಿಯನ್ನು ಸೋಲಿಸುವುದೇ ಗುರಿಯಾಗಿಸಿ ಹೋರಾಡುತ್ತಿದ್ದಾರೆ’ ಎಂದು ಸ್ಪಷ್ಟಪಡಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಸದ ಭೀಮ್ ಆರ್ಮಿ ಸಹ ಸಂಸ್ಥಾಪಕ ಚಂದ್ರಶೇಖರ್ ಅಜಾದ್ ವಿರುದ್ಧ ಮಾಜಿ ಗರ್ಲ್‌ಫ್ರೆಂಡ್ ಬಾಂಬ್
ಜನರೊಂದಿಗೆ ಸಂಪರ್ಕ ಸಾಧಿಸಿ, ಸೋಶಿಯಲ್ ಮೀಡಿಯಾ ಬಳಸಿ: ಸಂಸದರಿಗೆ ಮೋದಿ ಕರೆ