ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಬಗ್ಗೆ ಗುಟ್ಟು ಬಿಚ್ಚಿಟ್ಟ ಸಿದ್ದು..!

Published : Dec 18, 2020, 04:16 PM ISTUpdated : Dec 18, 2020, 04:55 PM IST
ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಬಗ್ಗೆ ಗುಟ್ಟು ಬಿಚ್ಚಿಟ್ಟ ಸಿದ್ದು..!

ಸಾರಾಂಶ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವನೆಗೆ ಸ್ಪರ್ಧೆ ಮಾಡ್ತಾರಾ ಇಲ್ವಾ ಎನ್ನುವ ಬಗ್ಗೆ ಅವರೇ ಪ್ರತಿಕ್ರಿಯಿಸಿದ್ದಾರೆ.

ಮೈಸೂರು, (ಡಿ.18): 2018ರ ಚುನಾವಣೆಯಲ್ಲಿ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲುಕಂಡಿದ್ದ ಸಿದ್ದರಾಮಯ್ಯ ಅವರು ಬಾದಾಮಿಯಲ್ಲಿ ಗೆಲುವು ಸಾಧಿಸಿದ್ದರು.

"

ಇದೀಗ ಮುಂದಿನ ವಿಧಾನಸಭಾ ಚುನಾವಣೆ ಬಾದಾಮಿ ಬಿಟ್ಟು ಬೇರೆ ಕ್ಷೇತ್ರದಿಂದ  ಸ್ಪರ್ಧೆ ಮಾಡ್ತಾರೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಇನ್ನು ಅವರು ಮುಂದಿನ ಚುನಾವಣೆ ಬಗ್ಗೆ ಸ್ವತಃ ಸಿದ್ದರಾಮಯ್ಯ ಅವರು ಮಾತನಾಡಿದ್ದಾರೆ.

ಬಾದಾಮಿಗೆ ಸಿದ್ದರಾಮಯ್ಯ ಗುಡ್‌ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!

ಇಂದು (ಶುಕ್ರವಾರ) ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿ, ನನಗೆ ಯಾವ ಆಸೆಗಳೂ ಇಲ್ಲ. ನಾನು ಇನ್ನು ಮುಂದಿನ ಚುನಾವಣೆಗೆ ನಿಲ್ಲಬೇಕಾ?, ಇಲ್ಲವಾ? ಎಂಬುದನ್ನು ತೀರ್ಮಾನಿಸಿಲ್ಲ. ಇನ್ನು ಆರು ತಿಂಗಳು, ವರ್ಷ ಬಿಟ್ಟು ಈ ಬಗ್ಗೆ ತೀರ್ಮಾನ ಮಾಡುತ್ತೇನೆ ಎಂದು ಸ್ಪಷ್ಟಪಡಿಸಿದರು.

ನನ್ನನ್ನು ಯಾರು, ಯಾವ ಕ್ಷೇತ್ರಕ್ಕೂ ಇದುವರೆಗೂ ಆಹ್ವಾನಿಸಿಲ್ಲ. ಚುನಾವಣೆಗೆ ನಿಲ್ಲುವುದರ ಬಗ್ಗೆ ಇನ್ನು ಆರು ತಿಂಗಳಲ್ಲಿ ತೀರ್ಮಾನ‌ ಮಾಡುತ್ತೇನೆ. ಚಾಮುಂಡೇಶ್ವರಿಯಲ್ಲಿ ಸೋತ ಬಳಿಕ ನಾನು‌ ಕ್ಷೇತ್ರಕ್ಕೆ ಹೋಗಿಲ್ಲ ಎಂಬುದು ಸತ್ಯ. ಇವತ್ತು ಆ ಕ್ಷೇತ್ರದ ಮುಖಂಡರ ಸಭೆ ಕರೆದಿದ್ದೇನೆ ಎಂದರು.

ಚಾಮುಂಡೇಶ್ವರಿಯಲ್ಲಿ ಪರ್ಯಾಯ ನಾಯಕನ ಕೂಗು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅದು ಒಳ್ಳೆಯ ಬೆಳವಣಿಗೆ, ನಾನೇನು ಶಾಶ್ವತ ಅಲ್ಲವಲ್ಲ. ಪರ್ಯಾಯ ನಾಯಕ ಬೇಕಲ್ವೇ. ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುತ್ತಿಲ್ಲ ನಿಜ. ನಾನು ಸೋತ ಬಳಿಕ ಇಲ್ಲಿ ಸಭೆ ನಡೆಸಿಲ್ಲ ಎಂದು ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!