
ಬೆಂಗಳೂರು (ಸೆ.22): ವಿಧಾನಪರಿಷತ್ ಸದಸ್ಯ ರವಿಕುಮಾರ್ ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರಗಳಿಗೆ ಮೂಗು ತೂರಿಸುವ ಚಾಳಿಯನ್ನು ಬಿಟ್ಟು ರಾಜ್ಯದ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಿರುಗೇಟು ನೀಡಿದ್ದಾರೆ.
ಕೆ.ಎನ್. ರಾಜಣ್ಣ ಹಾಗೂ ಟಿ.ಬಿ. ಜಯಚಂದ್ರ ಅವರ ನಡುವೆ ಮುನಿಸಿದೆ ಎಂದಿರುವ ರವಿಕುಮಾರ್ ಹೇಳಿಕೆಯನ್ನು ಖಂಡಿಸಿರುವ ಸಲೀಂ, ‘ಅವರು ಮೊದಲು ಬಿಜೆಪಿ ಪಕ್ಷದ ಒಳಗಿನ ಅಸಮಾಧಾನ ಮತ್ತು ಯಡಿಯೂರಪ್ಪ ಸರ್ಕಾರದ ಹಗರಣಗಳು, ಕೊರೋನಾ ಅವ್ಯವಹಾರ, ನೆರೆ ಹಾವಳಿಯಿಂದ ಜನರಿಗೆ ಆಗಿರುವ ತೊಂದರೆ, ಕೇಂದ್ರಕ್ಕೆ ರಾಜ್ಯದ ಬಗ್ಗೆ ಇರುವ ಮಲತಾಯಿ ಧೋರಣೆ ಬಗ್ಗೆ ಧ್ವನಿ ಎತ್ತಲಿ’ ಎಂದು ಒತ್ತಾಯಿಸಿದಿದ್ದಾರೆ
'ಕೆ.ಆರ್.ಪೇಟೆ ಗೆದ್ದಂತೆ ಶಿರಾದಲ್ಲಿಯೂ ಬಿಜೆಪಿಗೆ ಗೆಲುವು ಖಚಿತ' .‘
ರವಿಕುಮಾರ್ ಮಾತು ಉತ್ತರ ಕುಮಾರನ ಪೌರುಷ ಒಲೆ ಮುಂದೆ ಎಂಬಂತಿದೆ. ಮೊದಲು ಅಧಿವೇಶನದಲ್ಲಿ ಕಿತ್ತಾಡಿದ ನಿಮ್ಮ ಶಾಸಕರು, ಸಚಿವರಿಗೆ ಬುದ್ದಿ ಹೇಳಿ. ಜನರ ಸಮಸ್ಯೆಗಳ ಬಗ್ಗೆ ಗಮನ ಕೊಡಲು ವಿಫಲವಾಗಿರುವ ಬಿಜೆಪಿ ಭ್ರಷ್ಟಾಚಾರದಲ್ಲಿ ಮುಳುಗಿ ಹೋಗಿದೆ. ಅದರ ಬಗ್ಗೆ ಮಾತನಾಡಿ’ ಎಂದು ಪ್ರಕಟಣೆ ಮೂಲಕ ಸವಾಲು ಎಸೆದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.