
ಮಂಗಳೂರು, (ಜುಲೈ.02): ಸಿಸಿಬಿಯಿಂದ ಸಚಿವ ಶ್ರೀರಾಮುಲು ಪಿಎ ರಾಜಣ್ಣ ಬಂಧನಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಯುಟಿ ಖಾದರ್ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಇಂದು (ಶುಕ್ರವಾರ) ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಖಾದರ್,ಈ ಘಟನೆ ರಾಜ್ಯ ಸರ್ಕಾರ ಯಾವ ರೀತಿ ನಡೀತಾ ಇದೆ ಅನ್ನೋದಕ್ಕೆ ಉದಾಹರಣೆ. ಜನರು ಎಲ್ಲವನ್ನೂ ನೋಡ್ತಾ ಇದಾರೆ, ಸರಿಯಾದ ಸಮಯದಲ್ಲಿ ತೀರ್ಮಾನ ಕೊಡ್ತಾರೆ ಎಂದರು.
"
ಅರೆಸ್ಟ್ ಆಗಿದ್ದ ರಾಮುಲು ಆಪ್ತ ರಿಲೀಸ್, ಅನುಮಾನ ಮೂಡಿಸಿದ ಸಿಸಿಬಿ ನಡೆ
2008ರಲ್ಲಿ ಇವರು ಅಧಿಕಾರಕ್ಕೆ ಬಂದಾಗಲೂ ಇಂಥದ್ದೇ ಸಮಸ್ಯೆ ಇತ್ತು. ಮತ್ತೆ ಸ್ಪಷ್ಟ ಬಹುಮತ ಇಲ್ಲದೇ ಇದ್ರೂ ಅಧಿಕಾರಕ್ಕೆ ಬಂದು ಮತ್ತೆ ಜನರನ್ನ ವಂಚಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ತಮ್ಮ ಹೆಸರಿನಲ್ಲಿ ಹಣ ಡೀಲ್ ಮಾಡುತ್ತಿದ್ದಾನೆ ಎಂದು ಸ್ವತಃ ಸಿಎಂ ಪುತ್ರಿ ಬಿವೈ ವಿಜಯೇಂದ್ರ ಅವರು ಸಿಸಿಬಿ ದೂರು ನೀಡಿದ್ದರು. ಇದರ ಅನ್ವಯ ಸಿಸಿಬಿ ಪೊಲೀಸರು ನಿನ್ನೆ(ಜುಲೈ 01) ಸಂಜೆ ರಾಜಣ್ಣ ಅವರನ್ನ ವಶಕ್ಕೆ ಬಂದಿಸಿದ್ದರು. ಇದೀಗ ವಿಚಾರಣೆ ನಡೆಸಿ ಮತ್ತೆ ನೋಟಿಸ್ ಕೊಟ್ಟಾಗ ವಿಚಾರಣೆಗೆ ಹಾಜರಾಗಲು ಸೂಚಿಸಿ ಕಳುಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.