ಬಿಜೆ​ಪಿಗೆ ವಿನಯ ಕುಲ​ಕರ್ಣಿ ಈಗ ಮತ್ತಷ್ಟು ಹತ್ತಿ​ರ?

Kannadaprabha News   | Asianet News
Published : Oct 08, 2020, 07:55 AM IST
ಬಿಜೆ​ಪಿಗೆ ವಿನಯ ಕುಲ​ಕರ್ಣಿ ಈಗ ಮತ್ತಷ್ಟು ಹತ್ತಿ​ರ?

ಸಾರಾಂಶ

ಕಾಂಗ್ರೆಸ್ ಮುಖಂಡ ವಿನಯ್ ಕುಲಕರ್ಣಿ ಶೀಘ್ರವೇ ಬಿಜೆಪಿ ಸೇರಲಿದ್ದಾರೆ. ಇನ್ನಷ್ಟು ಬಿಜೆಪಿ ಪಾಳಯಕ್ಕೆ ಹತ್ತಿರವಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

ಬೆಂಗಳೂರು (ಅ.08):  ಕಾಂಗ್ರೆಸ್ಸಿನ ಮಾಜಿ ಸಚಿವ ವಿನಯ್‌ ಕುಲಕರ್ಣಿ ಅವರು ತಾವು ಬಿಜೆಪಿಗೆ ಹೋಗುವುದಿಲ್ಲ ಎಂಬುದಾಗಿ ಬಹಿರಂಗವಾಗಿ ಹೇಳಿಕೆ ಕೊಟ್ಟಿದ್ದರೂ ತೆರೆಮರೆಯಲ್ಲಿ ಬಿಜೆಪಿಗೆ ಮತ್ತಷ್ಟು ಹತ್ತಿರವಾಗುತ್ತಿದ್ದಾರೆ.

ಕುಲಕರ್ಣಿ ಅವರನ್ನು ಬಿಜೆಪಿಗೆ ಕರೆತರುವುದರಿಂದ ಧಾರವಾಡ ಜಿಲ್ಲೆಯ ಸ್ಥಳೀಯ ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿರುವುದರಿಂದ ಆ ಮುಖಂಡರನ್ನು ಮನವೊಲಿಸುವ ಪ್ರಕ್ರಿಯೆ ಆರಂಭವಾಗಿದೆ. ಇದರ ಹೊಣೆಯನ್ನು ಸ್ಥಳೀಯ ಸಂಸದರೂ ಆಗಿರುವ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಮತ್ತು ರಾಜ್ಯದ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಅವರಿಗೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಹಾಗೆ ನೋಡಿದರೆ ಪ್ರಹ್ಲಾದ್‌ ಜೋಶಿ ಮತ್ತು ಶೆಟ್ಟರ್‌ಗೆ ವಿನಯ್‌ ಕುಲಕರ್ಣಿ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳುವ ಬಗ್ಗೆ ಪೂರ್ಣ ಸಹಮತ ಇಲ್ಲದಿದ್ದರೂ ಪಕ್ಷದ ರಾಷ್ಟ್ರೀಯ ನಾಯಕರ ಸಲಹೆ ಹಿನ್ನೆಲೆಯಲ್ಲಿ ಸ್ಥಳೀಯ ಮುಖಂಡರನ್ನು ಮನವೊಲಿಸುವ ಕೆಲಸಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ.

ಬಿಜೆಪಿ ಸೇರಲು ವಿನಯ್ ಕುಲಕರ್ಣಿ ಸರ್ಕಸ್; ಸಿಪಿ ಯೋಗೇಶ್ವರ್ ಸಾಥ್

ಈ ಹಿಂದಿನ ಲೋಕ​ಸಭೆ ಚುನಾ​ವ​ಣೆ​ಯಲ್ಲಿ ಜೋಶಿ ಎದುರು ಕುಲ​ಕರ್ಣಿ ಸೋತಿದ್ದು ಇಲ್ಲಿ ಗಮ​ನಾ​ರ್ಹ.

ವಿನಯ ಕುಲ​ಕರ್ಣಿ ಅವರು ಮಂಗ​ಳ​ವಾ​ರ​ವಷ್ಟೇ ‘ನಾನು ಬಿಜೆಪಿ ಸೇರಲ್ಲ. ದಿಲ್ಲಿಗೆ ಹೋಗಿ ಯಾರನ್ನೂ ಭೇಟಿ​ಯಾಗಿ ಲಾಬಿ ನಡೆ​ಸಿಲ. ರಾಜ​ಸ್ಥಾ​ನಕ್ಕೆ ಕುದುರೆ ವ್ಯಾಪಾ​ರಕ್ಕೆ ಬಂದಿ​ದ್ದೇ​ನೆ’ ಎಂದಿ​ದ್ದ​ರು.

ಬಿಜೆಪಿ ಮುಖ​ಂಡ ಯೋಗೇ​ಶ​ಗೌಡ ಗೌಡರ ಕೊಲೆ ಪ್ರಕ​ರ​ಣ​ದಲ್ಲಿ ಸಿಬಿಐ ತನಿಖೆ ತೂಗು​ಕತ್ತಿ ಕುಲ​ಕರ್ಣಿ ಮೇಲೆ ತೂಗು​ತ್ತಿದ್ದು, ಈ ಹಂತ​ದಲ್ಲೇ ಅವರು ಬಿಜೆಪಿ ಸೇರುವ ಯತ್ನ ನಡೆ​ದಿದೆ ಎಂಬ ಗುಲ್ಲು ಹರ​ಡಿ​ದ್ದು ಧಾರ​ವಾಡ ಜಿಲ್ಲೆ​ಯಲ್ಲಿ ಸಂಚ​ಲನ ಮೂಡಿ​ಸಿ​ತ್ತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!