
ಕೊಪ್ಪಳ(ಮೇ.06): ಹೆಂಡತಿ ರಕ್ಷಣೆ ಮಾಡದ ಮೋದಿ ದೇಶ ಹಾಗೂ ಹೆಣ್ಣು ಮಕ್ಕಳ ರಕ್ಷಣೆ ಹೇಗೆ ಮಾಡ್ತಾರೆ ಅಂತ ಕಾಂಗ್ರೆಸ್ ನಾಯಕ ವಿ.ಎಸ್ ಉಗ್ರಪ್ಪ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದಿದ್ದಾರೆ.
ಇಂದು(ಶನಿವಾರ) ಕೊಪ್ಪಳ ಜಿಲ್ಲೆಯ ಕುಕನೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ವಿ.ಎಸ್ ಉಗ್ರಪ್ಪ ಅವರು, ಹೆಂಡತಿ ನೋಡದ ಇವರು ರಾಮ ಭಕ್ತರಾ?.ಅಂಜನಾದ್ರಿಯಲ್ಲಿ ಆಂಜನೇಯ ಹುಟ್ಟಿದ್ದಾನೆ. ಅನ್ಯ ರಾಜ್ಯದವರು ತಮ್ಮ ರಾಜ್ಯದಲ್ಲಿ ಹುಟ್ಟಿದ್ದಾನೆ ಅಂತಾರೆ. ಧೈರ್ಯ ಇದ್ದರೆ ಬೊಮ್ಮಾಯಿ, ಬಿಜೆಪಿ ಅವರು ಅಂಜನಾದ್ರಿಯಲ್ಲೇ ಆಂಜನೇಯ ಹುಟ್ಟಿದ್ದು ಅಂತಾ ಪ್ರತಿಪಾದನೆ ಮಾಡಬೇಕಿತ್ತು. ಅದರ ಬದಲು ಬಜರಂಗದಳ ನಿಷೇಧ ಮಾಡ್ತೀವಿ ಅಂದಾಗ ಆಂಜನೇಯ ಹೆಸರಲ್ಲಿ ಮೋದಿ, ಬೊಮ್ಮಾಯಿ, ಬಿಜೆಪಿ ಭಾವೋದ್ವೇಗದ ಮಾತಾಡ್ತಾರೆ. ಬೆಲೆ ಏರಿಕೆ ಬಗ್ಗೆ ಬಿಜೆಪಿ ಕಿಂಚಿತ್ತೂ ಮಾತಾಡಲ್ಲ ಅಂತ ಬಿಜೆಪಿ ನಾಯಕರ ವಿರುದ್ಧ ಕೆಂಡಕಾರಿದ್ದಾರೆ.
ನಮ್ಮ ತಂದೆ ಜೊತೆಗೆ ಅಂಜನಾದ್ರಿ ಹನುಮ ಭಕ್ತರಿದ್ದಾರೆ, ಯಾರ ಭಯವೂ ಇಲ್ಲ: ಜನಾರ್ದನ ರೆಡ್ಡಿ ಪುತ್ರಿ ಬ್ರಹ್ಮಿಣಿ
ಕೊಪ್ಪಳ ಜಿಲ್ಲೆಯ ಕುಕನೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ರಾಯರೆಡ್ಡಿ ಪರ ವಿ.ಎಸ್ ಉಗ್ರಪ್ಪ ಅವರು ಮತಯಾಚನೆ ಮಾಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.