
ಬೆಂಗಳೂರು (ಜೂ.13): ನಾನು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮಾತನಾಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನನಗೆ ಎಚ್ಚರಿಕೆ ನೀಡಿಲ್ಲ ಎಂದು ಶಾಸಕ ಜಮೀರ್ ಅಹಮದ್ ಖಾನ್ ಸಮಜಾಯಿಷಿ ನೀಡಿದ್ದಾರೆ.
‘ಕುಮಾರಸ್ವಾಮಿ ಹೇಗೆ ಮಾತಾಡುತ್ತಾರೋ ನಾನೂ ಅದೇ ರೀತಿ ಮಾತನಾಡುತ್ತೇನೆ. ಅವರ ಜೊತೆ ನನಗೆ ಅಂತಹ ಸ್ನೇಹ ಸಂಬಂಧವಿದೆ.
ಜಮೀರ್ ನಾಲಿಗೆ ಹಿಡಿತದಲ್ಲಿಟ್ಟುಕೊಂಡು ಮಾತಾಡಲಿ: ನಿಖಿಲ್ ಗರಂ ..
ಮುಖ್ಯಮಂತ್ರಿ ಆಗಿದ್ದಾಗಲೂ ಏಕವಚನದಲ್ಲೇ ಮಾತನಾಡುತ್ತಿದ್ದರು. ಶಿವಕುಮಾರ್ ಅವರು ನನಗೆ ವಾರ್ನಿಂಗ್ ಕೊಟ್ಟಿಲ್ಲ. ಮಾತನಾಡುವಾಗ ನೋಡಿಕೊಂಡು ಮಾತನಾಡಿ ಎಂದಿದ್ದಾರೆ’ ಎಂದು ಸ್ಪಷ್ಟಪಡಿಸಿದ್ದಾರೆ
ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ನಾನು ಪಕ್ಷದ ಬಗ್ಗೆ ಮಾತನಾಡಿಲ್ಲ. ವೈಯಕ್ತಿಕವಾಗಿ ಮಾತನಾಡಿದ್ದೇನೆ. ಇದು ಇಲ್ಲಿಗೇ ಮುಗಿದ ವಿಚಾರ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.