
ಬೆಂಗಳೂರು, (ಆ.16): ಡಿಜೆ ಹಳ್ಳಿ ಕೆಜಿ ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಮನೆ ಕಳೆದುಕೊಂಡು ಸಂತ್ರಸ್ತರಾದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರುತ್ತಾರೆ ಅನ್ನೋ ಸುದ್ದಿ ಹಬ್ಬಿದೆ.ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮೇಲಿನ ರಾಜಕೀಯ ದ್ವೇಷದಿಂದ ಎಸ್'ಡಿಪಿಐ ಜೊತೆಗೆ ಕೈಜೋಡಿಸಿ ಕೆಲವರು ದಾಳಿ ನಡೆಸಿರುವ ಸಾಧ್ಯತೆಗಳಿವೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
"
ಕಾಂಗ್ರೆಸ್ಗೆ ರೀ ಎಂಟ್ರಿ ಕೊಡ್ತಿದ್ದಾರೆ ಮಹಾನಾಯಕನ ಪುತ್ರ...!
ಜೆಡಿಎಸ್ ನಾಯಕರಾಗಿದ್ದ ಶ್ರೀನಿವಾಸ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಮಾತಿನಂತೆ 2017ರಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. 2018ರಲ್ಲಿ ಜೆಡಿಎಸ್ ಟಿಕೆಟ್ ಪಡೆದು ಪ್ರತಿ ಸ್ಪರ್ಧಿಯಾಗಿದ್ದ ಪ್ರಸನ್ನ ಕುಮಾರ್ ಅವರನ್ನು ಸೋಲಿಸಿದ್ದರು. ಇದೀಗ ಗಲಭೆಯಲ್ಲಿ ಮನೆ ಕಳೆದುಕೊಂಡರೂ ಕಾಂಗ್ರೆಸ್ ಅಖಂಡ ಶ್ರೀನಿವಾಸ ಮೂರ್ತಿ ಅವರ ಬೆಂಬಲಕ್ಕೆ ನಿಂತಿಲ್ಲ. ಇದರಿಂದ ಶ್ರೀನಿವಾಸ ಮೂರ್ತಿ ಅಸಮಾಧಾನಗೊಂಡಿದ್ದಾರೆ ಎನ್ನಲಾಗುತ್ತಿದೆ.
ಸ್ಪಷ್ಟನೆ ಕೊಟ್ಟ ಅಖಂಡ
ಬಿಜೆಪಿ ಸೇರುತ್ತಾರೆ ಅನ್ನೋ ಸುದ್ದಿಗಳಿಗೆ ಅಖಂಡ ಶ್ರೀನಿವಾಸ ಮೂರ್ತಿ ಸ್ಪಷ್ಟನೆ ನೀಡಿದ್ದು, ನಾನು ಕಾಂಗ್ರೆಸ್ನಲ್ಲಿ ಇದ್ದೇನೆ, ಕಾಂಗ್ರೆಸ್ನಲ್ಲಿಯೇ ಇರ್ತೇನೆ ಎಂದಿದ್ದಾರೆ.
ಗಲಭೆಯ ಪ್ರಕರಣದಿಂದ ಬೇಸರಗೊಂಡ ಶಾಸಕ ಶ್ರೀನಿವಾಸ ಮೂರ್ತಿ, ನಾನು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ಬಿಟ್ಟು ಹೋಗುವುದಿಲ್ಲ. ಬಿಜೆಪಿ ಸೇರುವುದಿಲ್ಲ. ಇದೊಂದು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದರು.
ಇನ್ನು ಇದೇ ವೇಳೆ ಘಟನೆಯ ಬಗ್ಗೆ ಪ್ರತಿಕ್ರಿಯೆಸಿದ ಶಾಸಕರು, ನಾನು ಎಲ್ಲರೊಂದಿಗೆ ಚೆನ್ನಾಗಿದ್ದೇನೆ. ನನ್ನ ಮನೆಯನ್ನೆ ಸುಡುವ ದ್ವೇಷವೇನಿತ್ತು? ನನ್ನ ಪರಿಸ್ಥಿತಿಯೇ ಹೀಗಿದ್ದರೆ ಜನ ಸಾಮಾನ್ಯರ ಗತಿಯೇನು? ಈ ಬಗ್ಗೆ ಸಿಬಿಐ ತನಿಖೆ ನಡೆಸಬೇಕು. ಅಪರಾಧಿಗಳಿಗೆ ತಕ್ಕ ಶಿಕ್ಷೆ ಆಗಲೇಬೇಕು ಎಂದು ಆಗ್ರಹಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.