ಸಚಿವರ ವಿರುದ್ಧ ಮತ್ತೆ ಶಾಸಕ ಲೆಟರ್‌ಬಾಂಬ್‌: ಸಿಎಂಗೆ ಕೈ ಶಾಸಕ ಬಿ.ಆರ್‌.ಪಾಟೀಲ್‌ ಪತ್ರ

Published : Nov 29, 2023, 05:23 AM IST
ಸಚಿವರ ವಿರುದ್ಧ ಮತ್ತೆ ಶಾಸಕ ಲೆಟರ್‌ಬಾಂಬ್‌:  ಸಿಎಂಗೆ ಕೈ ಶಾಸಕ ಬಿ.ಆರ್‌.ಪಾಟೀಲ್‌ ಪತ್ರ

ಸಾರಾಂಶ

ಕಾಂಗ್ರೆಸ್‌ ಸರ್ಕಾರದ ಕಿರಿಯ ಸಚಿವರು ಹಿರಿಯ ಶಾಸಕರಿಗೆ ಗೌರವ ಕೊಡುತ್ತಿಲ್ಲ ಎಂದು ಈ ಹಿಂದೆ ಮುಖ್ಯಮಂತ್ರಿ ಅವರಿಗೆ ‘ಪತ್ರ ಬಾಂಬ್‌’ ಸಿಡಿಸಿದ್ದ ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಈ ಬಾರಿ ಸಚಿವದ್ವಯರ ವಿರುದ್ಧ ಮತ್ತೊಂದು ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ. 

ಬೆಂಗಳೂರು (ನ.29): ಕಾಂಗ್ರೆಸ್‌ ಸರ್ಕಾರದ ಕಿರಿಯ ಸಚಿವರು ಹಿರಿಯ ಶಾಸಕರಿಗೆ ಗೌರವ ಕೊಡುತ್ತಿಲ್ಲ ಎಂದು ಈ ಹಿಂದೆ ಮುಖ್ಯಮಂತ್ರಿ ಅವರಿಗೆ ‘ಪತ್ರ ಬಾಂಬ್‌’ ಸಿಡಿಸಿದ್ದ ಆಳಂದ ಕಾಂಗ್ರೆಸ್‌ ಶಾಸಕ ಬಿ.ಆರ್‌. ಪಾಟೀಲ್‌ ಈ ಬಾರಿ ಸಚಿವದ್ವಯರ ವಿರುದ್ಧ ಮತ್ತೊಂದು ಪತ್ರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿದ್ದಾರೆ. ಕಾಮಗಾರಿಯೊಂದರ ಸಂಬಂಧ ತಮ್ಮ ಬಗ್ಗೆ ಅನುಮಾನ ಬರುವಂತೆ ಸಚಿವ ಕೃಷ್ಣ ಬೈರೇಗೌಡ ಸದನದಲ್ಲೇ ಮಾತನಾಡಿದ್ದರು. 

ಈ ಬಗ್ಗೆ ಪರಿಶೀಲನೆ ಸಭೆ ನಡೆಸುವುದಾಗಿ ಹೇಳಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ ಖರ್ಗೆ ಕಾರಣಾಂತರದಿಂದ ಅದನ್ನು ಮಾಡಿಲ್ಲ. ಹೀಗಾಗಿ ತಮ್ಮ ವಿರುದ್ಧ ಅನುಮಾನ ಮೂಡುವಂತಾಗಿದೆ. ಇದು ಪರಿಹಾರವಾಗಲು ಸದರಿ ಕಾಮಗಾರಿ ಬಗ್ಗೆ ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿಯವರಿಗೆ ಬರೆದ ಪತ್ರದಲ್ಲಿ ಅವರು ಆಗ್ರಹಿಸಿದ್ದಾರೆ. ತನಿಖೆ ನಡೆಯದ ಹೊರತು ತಾವು ಬೆಳಗಾವಿ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳುವುದಿಲ್ಲ. ಒಂದು ವೇಳೆ ಆರೋಪ ಸಾಬೀತಾದರೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿಯೂ ಪಾಟೀಲ್‌ ಪತ್ರದಲ್ಲಿ ತಿಳಿಸಿದ್ದಾರೆ.

ಪುಲ್ವಾಮಾ ದಾಳಿಯಾಗದಿದ್ದರೆ ಮೋದಿ ಗೆಲ್ಲುತ್ತಿರಲಿಲ್ಲ: ಶಾಸಕ ಬಾಲಕೃಷ್ಣ ಕೀಳು ಹೇಳಿಕೆ

ಪತ್ರದಲ್ಲೇನಿದೆ?: 2013ರಲ್ಲಿ ನಾನು ಶಾಸಕನಾಗಿದ್ದ ವೇಳೆ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತಕ್ಕೆ (ಕೆಆರ್‌ಐಡಿಎಲ್‌) ನೀಡಲಾಗಿದ್ದ ಕಾಮಗಾರಿಗಳು ವಿಳಂಬ, ಕೆಲ ಕಾಮಗಾರಿಗಳು ಕಳಪೆ ಮತ್ತು ಅರ್ಧಂಬರ್ಧವಾಗಿರುವ ಬಗ್ಗೆ ಕಳೆದ ವಿಧಾನಸಭಾ ಅಧಿವೇಶನದಲ್ಲಿ ನಾನು ಪ್ರಶ್ನೆ ಮಾಡಿದ್ದೆ. ಈ ಬಗ್ಗೆ ಸದನದಲ್ಲಿ ಸಂಬಂಧಪಟ್ಟ ಸಚಿವರಾದ ಪ್ರಿಯಾಂಕ್‌ ಖರ್ಗೆ ಅವರ ಗಮನ ಸೆಳೆದಾಗ, ಅವರ ಪರವಾಗಿ ಸಚಿವ ಕೃಷ್ಣ ಬೈರೇಗೌಡ ಅವರು, ‘ಇಷ್ಟೆಲ್ಲ ಗೊತ್ತಿದ್ದರೂ ಕಾಮಗಾರಿಗಳನ್ನು ಯಾಕೆ ಕೊಟ್ಟಿದ್ದೀರಿ’ ಎಂದು ವಾದ ಮಾಡಿದ್ದರು ಎಂದು ಬಿ.ಆರ್‌.ಪಾಟೀಲ್‌ ಪತ್ರದಲ್ಲಿ ಬರೆದಿದ್ದಾರೆ.

ಈ ವಾದದ ಮೂಲಕ ಸಚಿವ ಕೃಷ್ಣ ಬೈರೇಗೌಡ ನನ್ನ ಮೇಲೆ ಅನುಮಾನ ಬರುವಂತೆ ಮಾಡಿದ್ದಾರೆ. ಇದರಿಂದಾಗಿ ಕೆಆರ್‌ಐಡಿಎಲ್‌ನಿಂದ ನಾನು ಹಣ ಪಡೆದು ಕಾಮಗಾರಿ ಕೊಟ್ಟಿದ್ದೇನೆಂಬ ಅರ್ಥ ಬರುವಂತಾಗಿದೆ. 2013ರಲ್ಲಿ ನಾನು ಶಾಸಕನಾಗಿದ್ದ ವೇಳೆ ಬೇರೆ ಸಂಸ್ಥೆಗಳಿಗೆ ಕಾಮಗಾರಿ ನೀಡಿದರೆ ವಿಳಂಬವಾಗುತ್ತದೆ ಎಂಬ ಕಾರಣದಿಂದ ಕೆಲವು ಕಾಮಗಾರಿಗಳನ್ನು ಕೆಆರ್‌ಐಡಿಎಲ್‌ಗೆ ನೀಡಲಾಗಿತ್ತು. ಆದರೆ, ಸಚಿವರು ಎಲ್ಲ ಗೊತ್ತಿದ್ದೂ ಕೆಆರ್‌ಐಡಿಎಲ್‌ಗೆ ಕಾಮಗಾರಿ ಏಕೆ ಕೊಟ್ಟಿದ್ದೀರಿ ಎಂದು ಪ್ರಶ್ನಿಸುವ ಮೂಲಕ ನನ್ನ ಬಗ್ಗೆಯೇ ಅನುಮಾನ ಬರುವಂತೆ ಮಾಡಿದ್ದಾರೆ. ಇದಾದ ನಂತರ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಈ ಕಾಮಗಾರಿಗಳ ಬಗ್ಗೆ ಗಮನ ವಹಿಸಿ ಪ್ರತ್ಯೇಕವಾಗಿ ಪ್ರಗತಿ ಪರಿಶೀಲನಾ ಸಭೆ ನಡೆಸುವುದಾಗಿ ಹೇಳಿದ್ದರು. 

ಆದರೆ ಈವರೆಗೆ ಕಾರಣಾಂತರದಿಂದ ಸಭೆ ನಡೆದಿಲ್ಲ ಎಂದಿದ್ದಾರೆ. ಇದೆಲ್ಲದರಿಂದಾಗಿ ನನ್ನ ಬಗ್ಗೆಯೇ ಆರೋಪ ಬಂದಿದೆ. ಇಂತಹ ಆರೋಪ ಹೊತ್ತುಕೊಂಡು ನಾನು ಡಿ.4ರಿಂದ ಆರಂಭವಾಗುವ ಬೆಳಗಾವಿ ಅಧಿವೇಶನದಲ್ಲಿ ಪಾಲ್ಗೊಂಡರೆ ನನ್ನ ಮೇಲೆ ಮಾಡಿರುವ ಆರೋಪಗಳನ್ನು ಒಪ್ಪಿಕೊಂಡಂತಾಗುತ್ತದೆ. ಇದು ನೈತಿಕ ದೃಷ್ಟಿಯಿಂದ ಸರಿಯೂ ಅಲ್ಲ, ಆದ್ದರಿಂದ ಈ ವಿಚಾರದ ಸತ್ಯಾಸತ್ಯತೆ ಹೊರಗೆ ಬರುವಂತೆ ತನಿಖೆ ಮಾಡಲು ಆದೇಶ ನೀಡಿ ಆರೋಪದಿಂದ ಮುಕ್ತರನ್ನಾಗಿ ಮಾಡಬೇಕು. ಒಂದು ವೇಳೆ ನನ್ನ ಮೇಲಿನ ಆರೋಪ ಸಾಬೀತಾದರೆ ಇವತ್ತೇ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ. ಆದ್ದರಿಂದ ತುರ್ತು ತನಿಖೆ ಆಯೋಗ ರಚಿಸಬೇಕು ಎಂದು ಬಿ.ಆರ್‌. ಪಾಟೀಲ್‌ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದಾರೆ.

ನಿಮ್ಮ ಜೊತೆ ನಾನಿರುತ್ತೇನೆ: ದಾಸರಹಳ್ಳಿ ಕ್ಷೇತ್ರದ ಮುಖಂಡರಿಗೆ ಎಚ್‌ಡಿಕೆ ಧೈರ್ಯ

ಬಿ.ಆರ್‌.ಪಾಟೀಲ್‌ ಬರೆದ ಪತ್ರ ತಲುಪಿಲ್ಲ: ಬಿ.ಆರ್‌. ಪಾಟೀಲರು ಬರೆದ ಪತ್ರದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿ.ಆರ್‌. ಪಾಟೀಲ್‌ ಬರೆದಿರುವ ಪತ್ರ ಇನ್ನೂ ತಲುಪಿಲ್ಲ. ಪತ್ರದಲ್ಲಿ ಏನು ಬರೆಯಲಾಗಿದೆ ಎಂಬುದನ್ನು ನೋಡುತ್ತೇನೆ ಎಂದಷ್ಟೇ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ