ಮೈದಾನ ತಯಾರಿದೆ, ಅಖಾಡಕ್ಕೆ ಧುಮುಕಿ: ಪರೋಕ್ಷವಾಗಿ ಜಾರಕಿಹೊಳಿಗೆ ಹೆಬ್ಬಾಳಕರ ಸವಾಲು

Published : Dec 06, 2022, 07:06 PM IST
ಮೈದಾನ ತಯಾರಿದೆ, ಅಖಾಡಕ್ಕೆ ಧುಮುಕಿ: ಪರೋಕ್ಷವಾಗಿ ಜಾರಕಿಹೊಳಿಗೆ ಹೆಬ್ಬಾಳಕರ ಸವಾಲು

ಸಾರಾಂಶ

ಭವಿಷ್ಯ ಅಂತೂ ನಾನು ಹೇಳಲ್ಲ. ಮುಂದೆ ನೀವೇ ನೋಡುತ್ತಿರಲ್ಲ. ಚುನಾವಣೆಯ ಫಲಿತಾಂಶ ಬಂದ ಮೇಲೆ ಎಲ್ಲ ಗೊತ್ತಾಗುತ್ತದೆ. ಅಲ್ಲಿವರೆಗೂ ಕಾಯಬೇಕಷ್ಟೇ ಎಂದು ಹೇಳಿದ ಲಕ್ಷ್ಮಿ ಹೆಬ್ಬಾಳಕರ 

ಬೆಳಗಾವಿ(ಡಿ.06): ‘ಮೈದಾನ್‌ ಓಪನ್‌ ಹೈ, ಖುಲ್ಲಾ ಹೈ, ಹಮ್‌ ಬಿ ತಯಾರ್‌ ಹೈ, ಆಪ್‌ ಬೀ ಖುದೋ ಮೈದಾನ್‌ ಮೇ’ - ಮೈದಾನ ತಯಾರಿದೆ. ಅಖಾಡಕ್ಕೆ ಧುಮುಕಿ ಎಂದು ರಾಜಕೀಯ ವಿರೋಧಿಗಳಿಗೆ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನೇರವಾಗಿ ಸವಾಲು ಹಾಕಿದ್ದಾರೆ.

ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಬದ್ಧವೈರಿ ರಮೇಶ ಜಾರಕಿಹೊಳಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಕ್ರಿಯವಾಗಿರುವ ಕುರಿತು ಸೋಮವಾರ ನಗರದಲ್ಲಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. ಈ ಮೂಲಕ ಪರೋಕ್ಷವಾಗಿ ರಾಜಕೀಯ ಬದ್ಧವೈರಿ ರಮೇಶ ಜಾರಕಿಹೊಳಿ ಅವರಿಗೆ ಪಂಥಾಹ್ವಾನ ನೀಡಿದರು.

'ಬೆಳಗಾವಿಗೆ ಬಂದೇ ಬರ್ತೀವಿ': ಮಹಾರಾಷ್ಟ್ರ ಸಚಿವನಿಂದ ಮತ್ತೆ ಉದ್ಧಟತನ

ನನಗೆ ಪುನರ್ಜನ್ಮ ಕೊಟ್ಟಕ್ಷೇತ್ರ ಎಂಬ ಕಾರಣಕ್ಕಾಗಿಯೇ ಚುನಾವಣೆ ಗೆದ್ದ ಮಾರನೇ ದಿನವೆ ನನ್ನ ಹುಟ್ಟಿದ ದಿನಾಂಕವನ್ನು ಮತದಾರರಿಗೋಸ್ಕರ ಬದಲಾವಣೆ ಮಾಡಿಕೊಂಡಿದ್ದೇನೆ. ಚುನಾವಣೆಯಲ್ಲಿ ಗೆದ್ದ ದಿನದಿಂದ ಚುನಾವಣೆಯನ್ನು ಯಾವ ರೀತಿ ಗೆಲ್ಲಬೇಕು, ಜನರ ಮನಸನ್ನು ಯಾವ ರೀತಿ ಗೆಲ್ಲಬೇಕು ಎಂಬುವುದರ ಬಗ್ಗೆ ಕಳೆದ ನಾಲ್ಕೂವರೆ ವರ್ಷಗಳಿಂದ ಶ್ರಮಿಸುತ್ತಲೇ ಬಂದಿದ್ದೇನೆ. ಅಲ್ಲದೇ ಈಗ ಚುನಾವಣೆಗೆ 90 ದಿನ ಇದೆ ಅಂತ ತಯಾರಿ ನಡೆಸುತ್ತಿಲ್ಲ. ಈಗ ಬಂದು ನಾನು ಬಿಲ್ಲು, ಬಾಣ, ಬತ್ತಳಿಕೆ ಅಂತೆಲ್ಲ ಇಲ್ಲ ಎಂದರು.

ಗ್ರಾಮೀಣ ಕ್ಷೇತ್ರದ ಮೇಲೆ ಹಲವರು ಕಣ್ಣು ಹಾಕಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಭವಿಷ್ಯ ಅಂತೂ ನಾನು ಹೇಳಲ್ಲ. ಮುಂದೆ ನೀವೇ ನೋಡುತ್ತಿರಲ್ಲ. ಚುನಾವಣೆಯ ಫಲಿತಾಂಶ ಬಂದ ಮೇಲೆ ಎಲ್ಲ ಗೊತ್ತಾಗುತ್ತದೆ. ಅಲ್ಲಿವರೆಗೂ ಕಾಯಬೇಕಷ್ಟೇ ಎಂದು ಹೇಳಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ