
ಬೆಳಗಾವಿ, [ಜ.27]: ಬೆಳಗಾವಿ ಜಿಲ್ಲೆಯ ಕೆಲ ರಾಜಕೀಯ ನಾಯಕರ ನಡೆಯೇ ತಿಳಿಯುತ್ತಿಲ್ಲ. ಬೆಳಗಾವಿ ಗ್ರಾಮೀಣ ಕ್ಷೇತ್ರ ಮರಾಠಿಗರ ಸ್ವತ್ತು ಎಂದು ರಮೇಶ್ ಜಾರಕಿಹೊಳಿ ಹೇಳಿದ್ರೆ.
ಮತ್ತೊಂದೆಡೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಕ್ಷೇತ್ರ ಕನ್ನಡ ಮತ್ತು ಮರಾಠಿ ಭಾಷಿಕರ ಸಂಗಮ ಎಂದು ಬಣ್ಣಿಸಿದ್ಧಾರೆ. ಈ ಮೂಲಕ ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.
ಮರಾಠಿ ಮಾತನಾಡಿದ್ದನ್ನು ಕೇಳಿದ್ದಕ್ಕೆ ಹೆಬ್ಬಾಳ್ಕರ್ ಪುತ್ರನಿಂದ ಯುವಕನಿಗೆ ಧಮ್ಕಿ!
ಇಂದು [ಸೋಮವಾರ] ಬೆಳಗಾವಿ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಶಿವಾಜಿ ಪುತ್ಥಳಿ ಪ್ರತಿಷ್ಠಾಪನೆ ಮಾಡಿ ಮರಾಠಿಯಲ್ಲಿ ಭಾಷಣ ಮಾಡಿದ್ದಾರೆ. ಈ ಮೂಲಕ ಪರಭಾಷೆ ಅಭಿಮಾನ ತೋರ್ಪಡಿಸಿದ್ದಾರೆ.
ರಾಜಕಾರಣಕ್ಕಾಗಿ ಶಿವಾಜಿ ಪುತ್ಥಳಿ ಸ್ಥಾಪಿಸುತ್ತಿಲ್ಲ. ಸಂಸ್ಕೃತಿ ಉಳಿವಿಗೆ ಮೂರ್ತಿ ಸ್ಥಾಪನೆ ಮಾಡುತ್ತಿದ್ದೇನೆ. ಕೇವಲ ಮೂರ್ತಿ ಪ್ರತಿಷ್ಠಾಪಿಸಿದರೆ ಸಾಲದು, ಸಂಪ್ರದಾಯ ಸಾರಬೇಕು ಎಂದರು.
ರಾಜಕಾರಣಿಗಳನ್ನು ಸ್ವಾರ್ಥಿಗಳೆನ್ನುತ್ತಾರೆ. ಆದರೆ, ಪ್ರತಿಯೊಂದು ಗ್ರಾಮದಲ್ಲೂ ಹಣ ಕೊಟ್ಟು ಮೂರ್ತಿ ಪ್ರತಿಷ್ಠಾಪನೆ ಮಾಡುತ್ತಿದ್ದೇನೆ. ಲಕ್ಷ್ಮೀ ಹೆಬ್ಬಾಳ್ಕರ್ಗೆ ರಾಣಿ ಚೆನ್ನಮ್ಮ ಮತ್ತು ಜೀಜಾ ಮಾತಾ ಅಂತಾರೆ. ಇಚ್ಛಾಶಕ್ತಿ ಇಟ್ಟುಕೊಂಡು ರಾಜಕೀಯದಲ್ಲಿ ಕೆಲಸ ಮಾಡುತ್ತೇನೆ ಹೇಳಿದರು.
ಸರ್ಕಾರಕ್ಕೆ 15 ಕೋಟಿ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಆದ್ರೆ ಸರ್ಕಾರ ಮೂರೂವರೆ ಕೋಟೆಯನ್ನು ಬಿಡುಗಡೆ ಮಾಡಿದೆ. ಸರ್ಕಾರ ಅಸ್ಥಿರವಾಗಿದ್ದಾಗಲೇ ಮೂರೂವರೆ ಕೋಟಿ ಅನುದಾನ ತಂದಿದ್ದೇನೆ. ಶಾಸಕಿಯಾದ 18 ತಿಂಗಳಲ್ಲಿ 12 ಕೋಟಿ ರೂ ಅನುದಾನ ತಂದಿದ್ದೇನೆ ಎಂದು ತಮ್ ಕೆಲಸದ ಬಗ್ಗೆ ಹೇಳಿಕೊಂಡರು.
ಇಷ್ಟೆಲ್ಲಾ ಮರಾಠಿಯಲ್ಲಿ ಮಾತನಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್, ಮರಾಠಿ ಭಾಷಿಕರ ಮತ ಓಲೈಕೆಗಾಗಿ ಮುಂದಾಗಿದಂತೂ ಸತ್ಯ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.