ಬಿಜೆಪಿಯಲ್ಲಿ ವರ್ಚಸ್ಸು ಕಡಿಮೆಯಾಗಿದ್ದರಿಂದ ಬೊಮ್ಮಾಯಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ: ಕೋನರಡ್ಡಿ

Published : Oct 29, 2023, 12:39 PM ISTUpdated : Oct 29, 2023, 12:46 PM IST
ಬಿಜೆಪಿಯಲ್ಲಿ ವರ್ಚಸ್ಸು ಕಡಿಮೆಯಾಗಿದ್ದರಿಂದ ಬೊಮ್ಮಾಯಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ: ಕೋನರಡ್ಡಿ

ಸಾರಾಂಶ

ಬಿಜೆಪಿಯಲ್ಲಿ ಬಸವರಾಜ ಬೊಮ್ಮಾಯಿ  ವರ್ಚಸ್ಸು ಕಡಿಮೆಯಾಗಿರುವುದರಿಂದ ಅವರಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗೊಳಗಾಗಿದೆ.

ಹುಬ್ಬಳ್ಳಿ(ಅ.29): ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹೃದಯಾಘಾತವಾಗಿರುವುದನ್ನು ಶಾಸಕ ಎನ್‌.ಎಚ್‌. ಕೋನರಡ್ಡಿ ವ್ಯಂಗ್ಯವಾಡಿದ್ದಾರೆ. ಬಿಜೆಪಿಯಲ್ಲಿ ಬೊಮ್ಮಾಯಿ ವರ್ಚಸ್ಸು ಕಡಿಮೆಯಾಗಿರುವುದರಿಂದ ಅವರಿಗೆ ಹಾರ್ಟ್‌ ಅಟ್ಯಾಕ್‌ ಆಗಿದೆ ಎಂದು ಭಾಷಣದಲ್ಲಿ ಹೇಳಿದ್ದಾರೆ. ಇದು ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗೊಳಗಾಗಿದೆ.

ಇಲ್ಲಿನ ಆರ್‌.ಎನ್‌.ಶೆಟ್ಟಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಕಾಂಗ್ರೆಸ್‌ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಕೋನರಡ್ಡಿ, ಇತ್ತೀಚಿಗೆ ಬೊಮ್ಮಾಯಿ ಅವರಿಗೆ ಹೃದಯಾಘಾತವಾಗಿದೆ. ಆದರೆ ಅವರಿಗೆ ಹೃದಯಾಘಾತ ಏತಕ್ಕೆ ಆಗಿದೆ ಎಂದು ಪ್ರಶ್ನಿಸಿದರು.

ಬಿಜೆಪಿ ಟಿಕೆಟ್‌ ವಂಚನೆ ಕೇಸ್‌ ಟ್ವಿಸ್ಟ್‌: ಮಾಜಿ ಸಿಎಂ ಬೊಮ್ಮಾಯಿ, ಮಾಜಿ ಸಚಿವ ಶ್ರೀರಾಮುಲು ಹೆಸರೇಳಿದ ಆರೋಪಿ

ಅಲ್ಲದೇ, ತಾವೇ ಅದಕ್ಕೆ ಉತ್ತರಿಸುತ್ತಾ, ಪಕ್ಷದಲ್ಲಿ ಅವರ ವರ್ಚಸ್ಸು ಕಡಿಮೆಯಾಗಿರುವುದನ್ನು ಅರಿತಿದ್ದಾರೆ. ಇಂದು ಬಿಜೆಪಿ ಅಧೋಗತಿಗೆ ಹೋಗಿರುವುದರ ಕುರಿತು ಚಿಂತೆ ಮಾಡಿರುವುದರಿಂದಲೇ ಅವರಿಗೆ ಹೃದಯಾಘಾತವಾಗಿದೆ ಎಂದು ವ್ಯಂಗ್ಯವಾಡಿದರು. ಸಭೆಯಲ್ಲಿ ಅವರದೇ ಪಕ್ಷದ ಮುಖಂಡರು ಸಹ ಇದಕ್ಕೆ ಬೇಸರಿಸಿಕೊಂಡರು. ಜತೆಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಗೊಳಗಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ನೆಹರೂ ಕಾಲದಲ್ಲೇ ಮೊದಲ ಮತಗಳ್ಳತನ ನಡೆದಿದ್ದು; ಎರಡು ಮತ ಪಡೆದು ಪ್ರಧಾನಿಯಾದರು' ಸಂಸತ್ತಿನಲ್ಲಿ ಕಾಂಗ್ರೆಸ್ ವಿರುದ್ಧ ಶಾ ವಾಗ್ದಾಳಿ
2.84 ಲಕ್ಷ ಹುದ್ದೆ ಖಾಲಿ ಇದ್ರೂ, ಶೇ.9 ಹುದ್ದೆಗಳ ನೇಮಕಾತಿಯನ್ನೇ ಪ್ರಚಾರಕ್ಕೆ ಬಳಸಿಕೊಂಡ ಸರ್ಕಾರ!