
ಕಲಬುರಗಿ, (ಆ.14): ದೇಶ ಕಂಡಿರುವಂತಹ ಮಾಜಿ ಪ್ರಧಾನಿಗಳಾದ ನೆಹರು, ಇಂದಿರಾ ಹೆಸರುಗಳನ್ನು ಮುಂದಿಟ್ಟಿಕೊಂಡು ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ಸಾಗಿರುವ ಹೇಳಿಕೆ ಸಮರದಲ್ಲೀಗ ಇನ್ನೋರ್ವ ಮಾಜಿ ಪ್ರಧಾನಿ, ಮುತ್ಸದ್ದಿ ರಾಜಕಾರಣಿ ಅಟಲ್ ಬಿಹಾರಿ ವಾಜಪೇಯಿ ಹೆಸರು ಎಳೆದು ತರಲಾಗಿದೆ.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ಹುಕ್ಕಾ ಸೇದುತ್ತಿದ್ದರೆಂದು ಹುಕ್ಕಾಬಾರ್ ವಿಚಾರದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿಕೆಗೆ ತಿರುಗೇಟು ನೀಡುವ ಭರದಲ್ಲಿ ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮದ್ಯ ವ್ಯಸನಿಯಾಗಿದ್ದರು, ಮಾಂಸಾಹಾರಪ್ರಿಯರಾಗಿದ್ದರು. ಎಲ್ಲಾ ಬಾರ್, ಕಸಾಯಿ
ಖಾನೆಗಳಿಗೆ ಅಟಲ್ ಬಿಹಾರಿ ಹೆಸರಿಡಿ ನೋಡೋಣ ಎಂದು ಬಿಜೆಪಿಯವರ ಕಾಲೆಳೆದಿದ್ದಾರೆ.
ನೆಹರೂ ಹುಕ್ಕಾ ಬಾರ್ V/S ವಾಜಪೇಯಿ ಬಾರ್: ಖರ್ಗೆ ಮಾತಿಗೆ ಖಂಡ್ರೆ ಸಾಥ್
ಕಲಬುರಗಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಿಯಾಂಕ್ ಖರ್ಗೆ ಮಾಜಿ ಪ್ರಧಾನಿ ನೆಹರು ಅವರ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾತಾಡುವುದರಿಂದ ನೆಹರು ಅವರ ಘನತೆ ಏನೂ ಕಡಿಮೆ ಆಗುವುದಿಲ್ಲ. ಹಾಗೆಯೇ ನಾನು ವಾಜಪೇಯಿ ಅವರ ಬಗ್ಗೆ ಮಾತಾಡುವುದರಿಂದ ವಾಜಪೇಯಿ ಘನತೆ ಸಹ ಕಡಿಮೆ ಆಗುವುದಿಲ್ಲ, ಬಿಜೆಪಿಯಲ್ಲಿದ್ದವರೆಲ್ಲರೂ ಸಾಚಾಗಳಲ್ಲ, ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಬಿಜೆಪಿ, ಸಂಘ ಪÀರಿವಾರದವರ ತ್ಯಾಗ- ಬಲಿದಾನ ಇಲ್ಲವೇ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.