ದೇವೇಗೌಡ-ಅಮಿತ್‌ ಶಾ ಭೇಟಿ: ಯಾರೆಲ್ಲ ಒಂದಾದರೂ ಕಾಂಗ್ರೆಸ್‌ಗೆ ಭಯವಿಲ್ಲ, ರಾಜು ಕಾಗೆ

Published : Sep 13, 2023, 08:40 AM IST
ದೇವೇಗೌಡ-ಅಮಿತ್‌ ಶಾ ಭೇಟಿ: ಯಾರೆಲ್ಲ ಒಂದಾದರೂ ಕಾಂಗ್ರೆಸ್‌ಗೆ ಭಯವಿಲ್ಲ, ರಾಜು ಕಾಗೆ

ಸಾರಾಂಶ

2024ರಲ್ಲಿ ಜರುಗಲಿರುವ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ, ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ: ಶಾಸಕ ರಾಜು ಕಾಗೆ 

ಕಾಗವಾಡ(ಸೆ.13):  ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ವಿಚಾರ ಅವರಿಗೆ ಬಿಟ್ಟಿದ್ದು, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಮತ್ತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಭೇಟಿಯಿಂದ ನಮ್ಮ ಪಕ್ಷಕ್ಕೇನು ಆಗುವುದಿಲ್ಲ ಎಂದು ಶಾಸಕ ರಾಜು ಕಾಗೆ ಹೇಳಿದರು. 

ಕಾಗವಾಡ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಸಂಬರಗಿ ಗ್ರಾಮದಲ್ಲಿ 1.98 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಹಾಗೂ ಉಗಾರ ಪಟ್ಟಣದಲ್ಲಿ ಬಸವೇಶ್ವರ ವೃತ್ತದಿಂದ ಚನ್ನಮ್ಮ ವೃತದವರೆಗೆ 1.50 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರೆಲ್ಲ ಒಂದಾದರೂ ಕಾಂಗ್ರೆಸ್ ಪಕ್ಷಕ್ಕೆ ಭಯವಿಲ್ಲ. ನಾವು ಇನ್ನಷ್ಟು ಬಲಿಷ್ಠರಾಗಿದ್ದೇವೆ ಎಂದರು. 

ಡಿಕೆ ಸಹೋದರರಿಗೆ ಕಾದಿದ್ಯಾ "ಕಮಲದಳ" ಮೈತ್ರಿ ತೂಫಾನ್ ಶಾಕ್..?

ಮುಂಬರುವ ಲೋಕಸಭೆಯಲ್ಲಿ ಸೋಲಿನ ಭೀತಿಯಿಂದ ಜೆಡಿಎಸ್‌, ಬಿಜೆಪಿ ಒಂದಾಗುತ್ತಿರುವುದು ಗುಟ್ಟಾಗಿ ಏನು ಉಳಿದಿಲ್ಲ. ನಮ್ಮ ತಟ್ಟೆಯನ್ನು ನಾವು ಮೊದಲು ಸ್ವಚ್ಛವಾಗಿಟ್ಟುಕೊಳ್ಳುವ ಪ್ರಯತ್ನ ಮಾಡುತ್ತೇವೆ. ಇನ್ನೊಂದು ನೂರು ಜನರ ಜತೆಗೆ ಮೈತ್ರಿ ಮಾಡಿಕೊಳ್ಳಲಿ ನಮಗೇನು ಸಮಸ್ಯೆಯಿಲ್ಲ ಎಂದು ಮೈತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದರು. ಅವರು ಹಾಗೆ ಮಾಡಿದರು, ಇವರು ಹೀಗೆ ಮಾಡಿದರು ಅಂತಾ ವನಾ ಉಸಾಬರಿ ಮಾಡುವುದಕ್ಕಿಂತ ನಮ್ಮ ತಟ್ಟೆಯನ್ನು ನಾವು ಸ್ವಚ಼್ಛವಾಗಿಟ್ಟುಕೊಳ್ಳೋಣ. ಬೇರೆಯವರ ತಟ್ಟೆಯಲ್ಲಿ ಏನ್ ಬಿದ್ದಿದೆ ಎಂಬುವುದಕ್ಕೆ ನಾವು ಯಾಕೆ ತಲೆ ಕೆಡಿಸಿಕೊಳ್ಳುವುದು. 2024ರಲ್ಲಿ ಜರುಗಲಿರುವ ಲೋಕಸಭೆ ಚುನಾವಣೆಯಲ್ಲಿ ಚಿಕ್ಕೋಡಿ, ಬೆಳಗಾವಿ ಸೇರಿದಂತೆ ರಾಜ್ಯದಲ್ಲಿ 25 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. 

ಈ ವೇಳೆ ಕೃಷ್ಣಾ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶಂಕರ ವಾಘಮೊಡೆ, ಕಾಗವಾಡ ಬ್ಲಾಕ್ ಎಸ್ಸಿ ಘಟಕದ ಅಧ್ಯಕ್ಷ ಈಶ್ವರ ಕಾಂಬಳೆ ಮುಖಂಡರಾದ ಗಂಗಾಧರ ಜೋರಾಪುರೆ, ವಲ್ಲಭ ಕಾಗೆ, ರೋಹನ ನಾಯಿಕ, ಮಹಾದೇವ ವಡಗಾಂವೆ, ಮಂಜುನಾಥ ತೆರದಾಳೆ, ಸತೀಶ ಜಗತಾಪ, ಅಮರ ಜಗತಾಪ, ರಾಜು ಡಾಂಗೆ, ರುಸ್ತುಂ ಸುತಾರ, ಮಹಾದೇವ ಕಟಗೇರಿ, ಬಾಳು ಕಟಗೇರಿ, ವಿಜಯ ಅಸೂದೆ, ವಿಶ್ವನಾಥ ಶಿರಸಟ್ಟ, ಬಸವರಾಜ ಪಾಟೀಲ, ಬಸು ಸಾಣಗಾಂವೆ, ಅನೀಲ ಮಾನೆ, ವಾಸು ಕಟಗೇರಿ ಅನೇಕರು ಇದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!