ನಾನು EVMನಿಂದ ಗೆದ್ದಿದ್ದು, ಜನತೆಗೆ ಕಾಂಗ್ರೆಸ್ ಬೇಡವಾಗಿದೆ ಎಂದ ಕರ್ನಾಟಕ ಕೈ ಶಾಸಕ

Published : Nov 17, 2020, 08:41 PM IST
ನಾನು EVMನಿಂದ ಗೆದ್ದಿದ್ದು,  ಜನತೆಗೆ ಕಾಂಗ್ರೆಸ್ ಬೇಡವಾಗಿದೆ ಎಂದ ಕರ್ನಾಟಕ ಕೈ ಶಾಸಕ

ಸಾರಾಂಶ

ಉಪಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದ್ದರಿಂದ ಕೆಲವರು ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ್ದಾರೆ. ಇನ್ನು ಇದಕ್ಕೆ ಕಾಂಗ್ರೆಸ್ ನಾಯಕ ಅಚ್ಚರಿ ಹೇಳಿಕೆ ಕೊಟ್ಟಿದ್ದಾರೆ.

ಕೋಲಾರ, (ನ.17):  ಇವಿಎಂ ಯಂತ್ರದ ಮೂಲಕವೇ ನಾನು ಗೆದ್ದಿದ್ದು, ಬಿಹಾರ ಎಲೆಕ್ಷನ್ ಹಾಗೂ ರಾಜ್ಯ ಉಪಚುನಾವಣೆಯಲ್ಲಿ ಜನರು ಕಾಂಗ್ರೆಸ್ ಬೇಡವೆಂದು ತೀರ್ಪು ನೀಡಿದ್ದಾರೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.

ಕೋಲಾರದಲ್ಲಿ ಇಂದು (ಮಂಗಳವಾರ) ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಇವಿಎಂ ಯಂತ್ರದ ಮೂಲಕವೇ ನಾನು ಗೆದ್ದಿರುವೆ. ಚುನಾವಣೆ ಬಗ್ಗೆ ದುಡುಕಿ ಮಾತನಾಡುವುದು, ಆವೇಶದಿಂದ ಮಾತಾಡುವುದು ಸರಿಯಲ್ಲ ಎಂದು ಸ್ವಪಕ್ಷದ ನಾಯಕರಿಗೆ ಕಿವಿಮಾತು ಹೇಳಿದರು.

ಕಾಂಗ್ರೆಸ್ಸಿಗೆ ಮತ್ತೆ ಇವಿಎಂ ಮೇಲೆ ಡೌಟ್‌! 

ಇನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಬ್ಬರೂ ಚೆನ್ನಾಗಿಯೇ ಇದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತ ಇಲ್ಲ. ಯಾರೋ ಇದನ್ನ ಹುಟ್ಟು ಹಾಕಿದ್ದಾರೆ ಎಂದು ಸ್ಪಷ್ಟಪಡಿಸಿದರು.

ಶಿರಾ ಉಪಚುನಾವಣೆ ಫಲಿತಾಂಶಕ್ಕೂ ಮೊದಲೇ ಅಭ್ಯರ್ಥಿ ಟಿ.ಬಿ. ಜಯಚಂದ್ರ ಅವರು ಇವಿಎಂ ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಅಲ್ಲದೇ ಬಿಹಾರದಲ್ಲೂ ಸಹ ಇವಿಎಂ ಆರೋಪ ಮಾಡಲಾಗಿತ್ತು.

ಇದೀಗ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ಹೇಳಿಕೆ ಕಾಂಗ್ರೆಸ್‌ ನಾಯಕರಿಗೆ ಮುಜುಗರವಾದಂತಾಗಿದೆ. ಒಂದೇ ಪಕ್ಷದಲ್ಲಿದ್ದರೂ ಎದುರಾಳಿಯಾಗಿರುವ ಟಿ.ಬಿ.ಜಯಚಂದ್ರ ಅವರಿಗೆ ಟಾಂಗ್ ಕೊಡಲು ಈ ಮಾತನ್ನ ಹೇಳಿದ್ರಾ ಎನ್ನುವ ಪ್ರಶ್ನೆಗಳಯ ಸಹ ಉದ್ಭವಿಸಿವೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!