ಅಗತ್ಯ ವಸ್ತುಗಳ ದರ ಏರಿಕೆಗೆ ಬಿಜೆಪಿ ಕಾರಣ: ನಾರಾಯಣಸ್ವಾಮಿ

Published : Jul 16, 2022, 02:03 PM IST
ಅಗತ್ಯ ವಸ್ತುಗಳ ದರ ಏರಿಕೆಗೆ ಬಿಜೆಪಿ ಕಾರಣ: ನಾರಾಯಣಸ್ವಾಮಿ

ಸಾರಾಂಶ

ಬೆಲೆ ನಿಯಂತ್ರಣ ಮಾಡದೆ ಬಿಜೆಪಿ ಸರ್ಕಾರ ಬಡವರ ಹಾಗೂ ಮಧ್ಯವ ವರ್ಗದ ಜನರ ಶಾಪಕ್ಕೆ ಗುರಿಯಾಗಿದೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ: ಶಾಸಕ ನಾರಾಯಣಸ್ವಾಮಿ

ಬಂಗಾರಪೇಟೆ(ಜು.16): ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಜೀವನಕ್ಕೆ ಬಿಜೆಪಿ ಸರ್ಕಾರ ಕೊಡಲಿ ಪೆಟ್ಟು ನೀಡಿದೆ ಎಂದು ಶಾಸಕ ಎಸ್‌.ಎನ್‌.ನಾರಾಯಣಸ್ವಾಮಿ ಆರೋಪಿಸಿದರು. ತಾಲೂಕಿನ ಮಾಗೊಂದಿ ಗ್ರಾಮ ಪಂಚಾಯ್ತಿಯ ಸಕ್ಕನಹಳ್ಳಿ ಗ್ರಾಮದಲ್ಲಿ ಶುದ್ದ ಕುಡಿಯುವ ನೀರಿನ ಘಟಕ ಹಾಗೂ ಗ್ರಾಮದಿಂದ ಮಾಗೊಂದಿ ಗ್ರಾಮದವರೆಗೂ ರಸ್ತೆ ಡಾಂಬರೀಕರಣಕ್ಕೆ ಚಾಲನೆ ಹಾಗೂ ಹಾರೋಹಳ್ಳಿ ಗ್ರಾಮದಲ್ಲಿ ಹೈಮಾಸ್ಟ್‌ ದೀಪ ಉದ್ಘಾಟಿಸಿ ಮಾತನಾಡಿದ ಅವರು, ಮತ್ತೆ ಬಡವರು, ಮಧ್ಯಮ ವರ್ಗದ ಜನರು ನೆಮ್ಮದಿಯಾಗಿ ಜೀವನ ನಡೆಸಬೇಕಾದರೆ ಕಾಂಗ್ರೆಸ್‌ ಆಡಳಿತ ಬಂದರೆ ಮಾತ್ರ ಸಾಧ್ಯವೆಂದು ತಿಳಿಸಿದರು.

ಕಾಂಗ್ರೆಸ್‌ ಅಧಿಕಾರಕ್ಕೆ ಬರಲಿದೆ

ಬೆಲೆ ನಿಯಂತ್ರಣ ಮಾಡದೆ ಬಿಜೆಪಿ ಸರ್ಕಾರ ಬಡವರ ಹಾಗೂ ಮಧ್ಯವ ವರ್ಗದ ಜನರ ಶಾಪಕ್ಕೆ ಗುರಿಯಾಗಿದೆ. ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಮತ್ತೆ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ,ಆಗ ಮತ್ತೆ ಎಲ್ಲಾ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಬರಲಿದೆ. ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಲ್ಯಗಳನ್ನು ಕಲ್ಪಿಸಿಕೊಡಲಾಗಿದೆ, ಜನರ ಸಮಸ್ಯೆಗಳಿಗೆ ತಕ್ಕಂತೆ ಸ್ಪಂದಿಸಿ ಜನರ ಸೇವೆ ಮಾಡಿರುವೆ ಎಂದರಲ್ಲದೆ ಕಾಮಸಮುದ್ರ ಗ್ರಾಮದಿಂದ ಪಟ್ಟಣದ ದೇಶಿಹಳ್ಳಿ ರೈಲ್ವೆ ಗೇಟ್‌ವರೆಗೂ 8ಕೋಟಿ ವೆಚ್ಚದಲ್ಲಿ ರಸ್ತೆ ಡಾಂಬರೀಕರಣಕ್ಕೆ ಈಗಾಗಲೆ ಚಾಲನೆ ನೀಡಿದ್ದು ಎರಡು ದಿನಗಳಲ್ಲಿ ಕಾಮಗಾರಿ ಆರಂಭವಾಗಲಿದೆ ಎಂದರು.

ಜೆಡಿಎಸ್ ಸೇರಿದ ಮುನಿಯಪ್ಪ ಆಪ್ತ, ಹೈಕಮಾಂಡ್‌ಗೆ ಟ್ರೈಲರ್ ತೋರಿಸಿದ್ರಾ ಕೈ ಹಿರಿಯ ನಾಯಕ?

ಈ ವೇಳೆ ಮಾಗೊಂದಿಗೆ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸೌಭಾಗ್ಯಮ್ಮ,ಉಪಾಧ್ಯಕ್ಷೆ ಕುಪೇಂದ್ರ,ಮಾಜಿ ಅಧ್ಯಕ್ಷ ಚಂಗಾರೆಡ್ಡಿ,ಡಿಸಿಸಿ ಬ್ಯಾಂಕಿನ ನಿರ್ದೇಶಕ ಗೋವಿಂದರಾಜು,ಭೂ ಬ್ಯಾಂಕಿನ ಮಾಜಿ ಅಧ್ಯಕ್ಷ ಚಿಕ್ಕಹೊಸಹಳ್ಳಿ ಮಂಜುನಾಥಗೌಡ, ಮುಖಂಡರಾದ ದೇವರಾಜು, ಆನಂದ್‌,ನಾರಾಯಣಸ್ವಾಮಿ, ತಮ್ಮಣ್ಣ, ಗೋಪಿ ಮತ್ತಿತರರು ಇದ್ದರು.


 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಬೆಳಗಾವಿಯ 31 ಕೃಷ್ಣಮೃಗ ಸಾವಿಗೆ ಸಿಬ್ಬಂದಿ ನಿರ್ಲಕ್ಷ್ಯ ಕಾರಣವಲ್ಲ: ಸಚಿವ ಈಶ್ವರ್ ಖಂಡ್ರೆ
ಸಿಎಂ ರೇಸಲ್ಲಿ ಡಿಕೆಶಿ ಒಬ್ಬರೇ ಇಲ್ಲ, ಎಚ್‌ಕೆ, ಪರಂ, ಎಂಬಿಪಾ ಕೂಡ ಅರ್ಹ ಇದ್ದಾರೆ: ಕೆ.ಎನ್‌.ರಾಜಣ್ಣ